Homeಅಂತರಾಷ್ಟ್ರೀಯಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಪ್ಯಾಲೆಸ್ಟೈನ್ v/s ಇಸ್ರೇಲ್ ಸಂಘರ್ಷ: ಸಾಮಾಜಿಕ ಜಾಲತಾಣಗಳಲ್ಲಿನ ಚರ್ಚೆ ಹೀಗಿದೆ..

ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ....

- Advertisement -
- Advertisement -

ಇಸ್ರೇಲ್ ತನ್ನ ಮತ್ತೆ ಪ್ಯಾಲೆಸ್ಟೈನ್ ಅನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಭಾರತದ ಬಲಪಂಥೀಯರು ಇಸ್ರೇಲ್‌ನ ಕ್ರೂರತೆಯನ್ನು ಸಮರ್ಥಿಸಿಕೊಂಡು ಅದರ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡುತ್ತಾರೆ. (ಬಿಜೆಪಿ ಯುವ ವಿಭಾಗದ ಅಧ್ಯಕ್ಷ ತೇಜಸ್ವಿ ಸೂರ್ಯ ಇದರ ಮುಂಚೂಣಿಯಲ್ಲಿ ಇದ್ದಾರೆ). ಪ್ಯಾಲೆಸ್ಟೈನ್‌ ನಾಗರಿಕರ ಮೇಲಿನ ಕ್ರೂರ ದಾಳಿ, ಕಟ್ಟಡಗಳ ಧ್ವಂಸವನ್ನು ಸಂಭ್ರಮಿಸುತ್ತಿದ್ದಾರೆ.

ಅನಿವಾರ್ಯ ಎಂಬಂತೆ, ಸರ್ಕಾರ ಭಾರತದ ಪರಂಪರಾಗತ ಧೋರಣೆಯನ್ನು ಹೇಳಿ ಪ್ಯಾಲೆಸ್ಟೈನ್ ಪರ ನಿಲುವು ವ್ಯಕ್ತಪಡಿಸಿದೆ. ಇಸ್ರೇಲಿ ಆಡಳಿತ ತಮ್ಮ ಪರ ಹ್ಯಾಷ್‌ಟ್ಯಾಗ್ ಅಭಿಯಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳುತ್ತದೆ. ಇಸ್ರೇಲ್ ಪ್ರಧಾನಿ ತಮ್ಮನ್ನು ಬೆಂಬಲಿಸಿದ ರಾಷ್ಟ್ರಗಳ ಧ್ವಜಗಳ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಭಾರತದ ಧ್ವಜ ಇಲ್ಲ. ಸದಾ ಇಸ್ರೇಲ್ ಪರವೇ ಅಮೆರಿಕ ಇದೆ. ಆದರೆ ಡೆಮೊಕ್ರಾಟ್ ಜೋ ಬೈಡನ್ ಇಸ್ರೇಲ್ ದಾಳಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಯಹೂದಿಗಳ ಮೇಲೆ ಮಾರಣಹೋಮ ನಡೆಸಿದ ಜರ್ಮನಿಯ ಹಿಟ್ಲರ್ ಆರಾಧನೆ ಮಾಡುವ ಸಂಘ ಪರಿವಾರ, ಈಗ ಯಹೂದಿಗಳ ರಕ್ಷಣೆಯ ಹೆಸರಲ್ಲಿ ಇಸ್ರೇಲ್ ಆಡಳಿತ ಪ್ಯಾಲೆಸ್ಟಿಯನಿಯನ್ನರ ಮೇಲೆ ನಡೆಸುತ್ತಿರುವ ಭಯೋತ್ಪಾದಕ ಕೃತ್ಯದ ಪರ ನಿಲ್ಲುತ್ತದೆ.
ಈ ಸಾಂಕ್ರಾಮಿಕದ ಬಿಕ್ಕಟ್ಟಿನ ಸಂದರ್ಭದಲ್ಲೂ ದೇಶದ ಪರಿಸ್ಥಿತಿಗಿಂತ ಇಸ್ರೇಲ್ ರೀತಿಯ ಆಡಳಿತ ನಮ್ಮಲ್ಲಿಯೂ ಬರಬೇಕೆಂದು ಆಶಿಸುತ್ತಿದ್ದಾರೆ.

ಇಸ್ರೇಲ್ ಮತ್ತು ಗಾಜಾದಲ್ಲಿನ ಹಿಂಸಾಚಾರದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬಿಡನ್ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಶನಿವಾರ ದೂರವಾಣಿ ಕರೆಯಲ್ಲಿ ಮಾತನಾಡಿ ಕಳವಳ ವ್ಯಕ್ತಪಡಿಸಿದ್ದಾರೆ. ಪ್ಯಾಲೇಸ್ಟಿನಿಯನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಜೊತೆಗೂ ಮಾತನಾಡಿ, ಎರಡು ರಾಷ್ಟ್ರದ ಸಿದ್ದಾಂತಕ್ಕೆ ಬದ್ಧರಾಗುವುದಾಗಿ ತಿಳಿಸಿದ್ದಾರೆ. ಹಮಾಸ್ “ರಾಕೆಟ್ ಹಾರಿಸುವುದನ್ನು ನಿಲ್ಲಿಸಬೇಕು” ಎಂದು ಪ್ರತ್ಯೇಕವಾಗಿ ಹೇಳಿದ್ದಾರೆ.

ಇದನ್ನೂ ಓದಿ; ಪ್ಯಾಲಿಸ್ಟೀನಿಯಲ್ಲಿ ನಡೆಯುತ್ತಿರುವುದೇನು? ನಿಮಗಿದು ತಿಳಿದಿರಬೇಕಾದ ವಿಷಯ

“ಹಮಾಸ್ ಮತ್ತು ಇತರ ಭಯೋತ್ಪಾದಕ ಗುಂಪುಗಳು” ನಡೆಸಿದ ರಾಕೆಟ್ ದಾಳಿಯಿಂದ ತಮ್ಮನ್ನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ಹಕ್ಕಿಗೆ ಬಿಡೆನ್ ತಮ್ಮ “ಬಲವಾದ ಬೆಂಬಲ”ವನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಆದರೆ ಅದೇ ಸಂದರ್ಭದಲ್ಲಿ ಎರಡೂ ಕಡೆಯ ಹಿಂಸಾಚಾರ ನಿಲ್ಲಬೇಕೆಂದು ಪ್ರತಿಪಾದಿಸಿದ್ದಾರೆ.

ಇಸ್ರೇಲ್ ನಡೆಸುತ್ತಿರುವ ಪತ್ರಿಕಾ ಕಚೇರಿಗಳು ಮತ್ತು ಪತ್ರಕರ್ತರ ಮೇಲಿನ ದಾಳಿಯನ್ನು ನಿಲ್ಲಿಸಬೇಕೆಂದು ಬೈಡನ್ ಒತ್ತಾಯಿಸಿದ್ದಾರೆ. ಅಸೋಷಿಯೆಟ್ ಪ್ರೆಸ್ ಮತ್ತು ಅಲ್‌ಜಜೀರಾ ಕಚೇರಿ ಮೇಲೆ ಬಾಂಬ್‌ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಮೆರಿಕದ ಆರ್ಥಿಕತೆಯನ್ನು ಯಹೂದಿಗಳೇ ಬಹುಪಾಲು ನಿಯಂತ್ರಣ ಮಾಡುತ್ತಿರುಗವ ಕಾರಣಕ್ಕೆ ಅಮೆರಿಕ ಆಡಳಿತ ಇಸ್ರೇಲ್ ಪರವೇ ಇರಲಿದೆ. ತಮ್ಮ ತಾಯ್ನಾಡಿನ ರಕ್ಷಣೆಗೆ ಹೋರಾಡುವ ಎಲ್ಲ ಪ್ಯಾಲೆಸ್ಟಿಯನ್ ಸಮೂಹವನ್ನು ಬಹುಪಾಲು ಅಂತಾರಾಷ್ಟ್ರೀಯ ಮಾಧ್ಯಮಗಳು ಮತ್ತು ಈ ದೇಶದ ಮುಖ್ಯವಾಹಿನಿಗಳು ಟೆರರಿಸ್ಟ್ ಎಂದೇ ಹಣೆಪಟ್ಟಿ ಹಚ್ಚಲು ಯತ್ನಿಸುತ್ತ ಬಂದಿವೆ.

ಹಮಾಸ್ ಸಂಘಟನೆಯನ್ನು ಚೀನಾ, ರಷ್ಯಾ ಮತ್ತು ದಕ್ಷಿಣ ಕೊರಿಯಾಗಳೆಂದೂ ಟೆರರಿಸ್ಟ್ ಎಂದು ಪರಿಗಣಿಸಿಲ್ಲ. ಫ್ರಾನ್ಸ್ ಮತ್ತು ಇತರ ಕೆಲವು ಯುರೋಪಿಯನ್ ದೇಶಗಳು ಹಮಾಸ್‌ನ ಒಂದು ಅಂಗವನ್ನಷ್ಟೇ ಟೆರರಿಸ್ಟ್ ಎಂದು ಘೋಷಿಸಿವೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಪ್ಯಾಲೆಸ್ತೀನ್ ಸಂಘರ್ಷ ಕೊನೆಗೊಳಿಸಲು ’ದ್ವಿರಾಷ್ಟ್ರ’ ಪರಿಹಾರವನ್ನು ಬೆಂಬಲಿಸಿದ ಭಾರತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಸ್ರೇಲ್ ಮತ್ತು ಪ್ಯಾಲಸ್ಟೀನ್ ವಿಲೀನವಾಗಿ, ಒಂದು ದೇಶವಾಗಿ ರೂಪುಗೊಂಡರೆ ಅನೇಕ ಅಮೂಲ್ಯ ಜೀವಿಗಳನ್ನು ಉಳಿಸಬಹುದು. ಇದಕ್ಕೆ ಮನುಷ್ಯ, ತನ್ನ ಮನಸ್ಸಿನಲ್ಲಿ ಇರುವ ದುರಾಸೆಯನ್ನು ಬಿಡಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....