Homeಮುಖಪುಟಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

- Advertisement -
- Advertisement -

ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆ (Occupied West Bank)ಯ ತನ್ನ ಪ್ರದೇಶದಲ್ಲಿ ಕತಾರ್ ಮೂಲದ ಪ್ರಸಿದ್ದ ಸುದ್ದಿ ಸಂಸ್ಥೆ ಅಲ್‌-ಜಝೀರಾದ ಪ್ರಸಾರ ಮತ್ತು ಕಾರ್ಯಾಚರಣೆಯನ್ನು ಪ್ಯಾಲೆಸ್ತೀನ್ ಪ್ರಾಧಿಕಾರ (ಪಿಎ) ನಿಷೇಧಿಸಿದೆ.

ಒಂದು ಕಾಲದಲ್ಲಿ  ಪ್ಯಾಲೆಸ್ತೀನ್ ದೇಶದ ಭಾಗವಾಗಿದ್ದ ಪಶ್ಚಿಮ ದಂಡೆಯ ಬಹುತೇಕ ಪ್ರದೇಶಗಳನ್ನು ಪ್ರಸ್ತುತ ಇಸ್ರೇಲ್ ಆಕ್ರಮಿಸಿಕೊಂಡಿದೆ. ಅಳಿದುಳಿದ ಕೆಲ ಪ್ರದೇಶಗಳು ಈಗಲೂ ಕೂಡ ಪ್ಯಾಲೆಸ್ತೀನ್ ಭಾಗವಾಗಿದೆ. ಅದರ ನಿಯಂತ್ರಣ ಪ್ಯಾಲೆಸ್ತೀನ್‌ ಸರ್ಕಾರದ ಅಧೀನದಲ್ಲಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ಕೈಯಲ್ಲಿದೆ.

ಅದೇ ಪ್ಯಾಲೆಸ್ತೀನ್ ಪ್ರಾಧಿಕಾರ ಈಗ ಅಲ್‌-ಜಝೀರಾ ಸುದ್ದಿ ಸಂಸ್ಥೆಯ ಕಾರ್ಯಾಚರಣೆಗೆ ತಡೆ ಒಡ್ಡಿದೆ.

ಅಲ್‌ ಜಝೀರಾ ಪ್ರಸಾರ ಮಾಡುವ ಸುದ್ದಿಗಳು ಪ್ರಚೋದನಕಾರಿಯಾಗಿವೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ ಹಾಗೂ ದೇಶದ್ರೋಹ ಎಸಗಿದ್ದಕ್ಕಾಗಿ ಮತ್ತು ಪ್ಯಾಲೆಸ್ತೀನ್‌ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸಿದ್ದಕ್ಕಾಗಿ ಅಲ್‌- ಜಝೀರಾದ ಪ್ರಸಾರವನ್ನು ಅಮಾನತಿನಲ್ಲಿರಿಸಲಾಗಿದೆ ಎಂದು ಪ್ಯಾಲೆಸ್ತೀನ್‌ನ ಅಧಿಕೃತ ಸುದ್ದಿ ಸಂಸ್ಥೆ ವಾಫಾ ಬುಧವಾರ (ಜ.1) ಸಂಜೆ ವರದಿ ಮಾಡಿದೆ.

2023ರ ಅಕ್ಟೋಬರ್ 7ರಿಂದ ಹಮಾಸ್ ನಿಯಂತ್ರಣದ ಪ್ಯಾಲೆಸ್ತೀನ್‌ನ ಭಾಗವಾಗಿರುವ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ಕುರಿತು ಅಲ್‌-ಜಝೀರಾ ನಿರಂತರ ಸುದ್ದಿ ಪ್ರಕಟಿಸುತ್ತಿದೆ. ಯುದ್ಧದಿಂದ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜೀವಗಳ ಪರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ವರದಿಗಳು, ಸಾಕ್ಷ್ಯ ಚಿತ್ರಗಳ ಮೂಲ ಗಾಝಾದ ನೈಜ ಚಿತ್ರಣವನ್ನು ಜಗತ್ತಿನ ಮುಂದೆ ತೆರೆದಿಡುವ ಕೆಲಸ ಮಾಡುತ್ತಿದೆ. ಈ ಪ್ರಯತ್ನದಲ್ಲಿ ಹಲವು ಸಿಬ್ಬಂದಿಯನ್ನು ಅಲ್‌-ಜಝೀರಾ ಕಳೆದುಕೊಂಡಿದೆ.

ಅಲ್‌-ಜಝೀರಾ ತಮ್ಮ ವಿರುದ್ದ ಸುದ್ದಿ ಪ್ರಕಟಿಸುವುದನ್ನು ಸಹಿಸದ ಇಸ್ರೇಲ್ ಸರ್ಕಾರ 2024ರ ಮೇ ತಿಂಗಳಲ್ಲಿ ಸಂಪೂರ್ಣ ಇಸ್ರೇಲ್‌ ಪ್ರದೇಶದಲ್ಲಿ ಅಲ್‌-ಜಝೀರಾವನ್ನು ನಿಷೇಧಿಸಿತ್ತು. ಆ ಬಳಿಕ ಆಕ್ರಮಿತ ಪಶ್ಚಿಮ ದಂಡೆಯ ರಾಮಲ್ಲಾಹ್‌ನಲ್ಲಿ ಅಲ್‌-ಜಝೀರಾದ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿದೆ.

‘ಇಸ್ರೇಲ್ ರೀತಿಯ ನಡೆ’

ಪಶ್ಚಿಮ ದಂಡೆಯಲ್ಲಿ ತಮ್ಮ ಕಾರ್ಯಾಚರಣೆ ಮತ್ತು ಪ್ರಸಾರವನ್ನು ನಿಷೇಧಿಸಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ಅಲ್‌-ಜಝೀರಾ ತೀವ್ರವಾಗಿ ಖಂಡಿಸಿದೆ. ಇದು ಇಸ್ರೇಲ್‌ ರೀತಿಯ ನಡೆಯಾಗಿದೆ. ನಾವು ಸದಾ ಪ್ಯಾಲೆಸ್ತೀನ್ ಜನತೆಯ ಧ್ವನಿಯಾಗಿದ್ದೆವು ಎಂದು ಹೇಳಿದೆ.

‘ಪತ್ರಿಕೋದ್ಯಮದ ವಿರುದ್ಧದ ಅಪರಾಧ’

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವುದನ್ನು ಗಾಝಾದ ಪತ್ರಕರ್ತರು ಖಂಡಿಸಿದ್ದಾರೆ. ಗುರುವಾರ (ಜ.2) ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಬಳಿ ಜಮಾಯಿಸಿದ ಪತ್ರಕರ್ತರು, ಇದು ‘ಪತ್ರಿಕೋದ್ಯಮದ ವಿರುದ್ದದ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಷೇಧ ಹಿಂಪಡೆಯಲು ಆಗ್ರಹ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ವಿಶ್ವ ಸಂಸ್ಥೆ ಖಂಡಿಸಿದೆ. ತಕ್ಷಣ ನಿಷೇಧ ಹಿಂಪಡೆಯುವಂತೆ ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯದ ದಮನದ ಕುರಿತು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು-ಪುಣೆಗೆ ಅಗ್ರ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...