Homeಮುಖಪುಟಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

- Advertisement -
- Advertisement -

ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆ (Occupied West Bank)ಯ ತನ್ನ ಪ್ರದೇಶದಲ್ಲಿ ಕತಾರ್ ಮೂಲದ ಪ್ರಸಿದ್ದ ಸುದ್ದಿ ಸಂಸ್ಥೆ ಅಲ್‌-ಜಝೀರಾದ ಪ್ರಸಾರ ಮತ್ತು ಕಾರ್ಯಾಚರಣೆಯನ್ನು ಪ್ಯಾಲೆಸ್ತೀನ್ ಪ್ರಾಧಿಕಾರ (ಪಿಎ) ನಿಷೇಧಿಸಿದೆ.

ಒಂದು ಕಾಲದಲ್ಲಿ  ಪ್ಯಾಲೆಸ್ತೀನ್ ದೇಶದ ಭಾಗವಾಗಿದ್ದ ಪಶ್ಚಿಮ ದಂಡೆಯ ಬಹುತೇಕ ಪ್ರದೇಶಗಳನ್ನು ಪ್ರಸ್ತುತ ಇಸ್ರೇಲ್ ಆಕ್ರಮಿಸಿಕೊಂಡಿದೆ. ಅಳಿದುಳಿದ ಕೆಲ ಪ್ರದೇಶಗಳು ಈಗಲೂ ಕೂಡ ಪ್ಯಾಲೆಸ್ತೀನ್ ಭಾಗವಾಗಿದೆ. ಅದರ ನಿಯಂತ್ರಣ ಪ್ಯಾಲೆಸ್ತೀನ್‌ ಸರ್ಕಾರದ ಅಧೀನದಲ್ಲಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ಕೈಯಲ್ಲಿದೆ.

ಅದೇ ಪ್ಯಾಲೆಸ್ತೀನ್ ಪ್ರಾಧಿಕಾರ ಈಗ ಅಲ್‌-ಜಝೀರಾ ಸುದ್ದಿ ಸಂಸ್ಥೆಯ ಕಾರ್ಯಾಚರಣೆಗೆ ತಡೆ ಒಡ್ಡಿದೆ.

ಅಲ್‌ ಜಝೀರಾ ಪ್ರಸಾರ ಮಾಡುವ ಸುದ್ದಿಗಳು ಪ್ರಚೋದನಕಾರಿಯಾಗಿವೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ ಹಾಗೂ ದೇಶದ್ರೋಹ ಎಸಗಿದ್ದಕ್ಕಾಗಿ ಮತ್ತು ಪ್ಯಾಲೆಸ್ತೀನ್‌ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸಿದ್ದಕ್ಕಾಗಿ ಅಲ್‌- ಜಝೀರಾದ ಪ್ರಸಾರವನ್ನು ಅಮಾನತಿನಲ್ಲಿರಿಸಲಾಗಿದೆ ಎಂದು ಪ್ಯಾಲೆಸ್ತೀನ್‌ನ ಅಧಿಕೃತ ಸುದ್ದಿ ಸಂಸ್ಥೆ ವಾಫಾ ಬುಧವಾರ (ಜ.1) ಸಂಜೆ ವರದಿ ಮಾಡಿದೆ.

2023ರ ಅಕ್ಟೋಬರ್ 7ರಿಂದ ಹಮಾಸ್ ನಿಯಂತ್ರಣದ ಪ್ಯಾಲೆಸ್ತೀನ್‌ನ ಭಾಗವಾಗಿರುವ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ಕುರಿತು ಅಲ್‌-ಜಝೀರಾ ನಿರಂತರ ಸುದ್ದಿ ಪ್ರಕಟಿಸುತ್ತಿದೆ. ಯುದ್ಧದಿಂದ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜೀವಗಳ ಪರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ವರದಿಗಳು, ಸಾಕ್ಷ್ಯ ಚಿತ್ರಗಳ ಮೂಲ ಗಾಝಾದ ನೈಜ ಚಿತ್ರಣವನ್ನು ಜಗತ್ತಿನ ಮುಂದೆ ತೆರೆದಿಡುವ ಕೆಲಸ ಮಾಡುತ್ತಿದೆ. ಈ ಪ್ರಯತ್ನದಲ್ಲಿ ಹಲವು ಸಿಬ್ಬಂದಿಯನ್ನು ಅಲ್‌-ಜಝೀರಾ ಕಳೆದುಕೊಂಡಿದೆ.

ಅಲ್‌-ಜಝೀರಾ ತಮ್ಮ ವಿರುದ್ದ ಸುದ್ದಿ ಪ್ರಕಟಿಸುವುದನ್ನು ಸಹಿಸದ ಇಸ್ರೇಲ್ ಸರ್ಕಾರ 2024ರ ಮೇ ತಿಂಗಳಲ್ಲಿ ಸಂಪೂರ್ಣ ಇಸ್ರೇಲ್‌ ಪ್ರದೇಶದಲ್ಲಿ ಅಲ್‌-ಜಝೀರಾವನ್ನು ನಿಷೇಧಿಸಿತ್ತು. ಆ ಬಳಿಕ ಆಕ್ರಮಿತ ಪಶ್ಚಿಮ ದಂಡೆಯ ರಾಮಲ್ಲಾಹ್‌ನಲ್ಲಿ ಅಲ್‌-ಜಝೀರಾದ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿದೆ.

‘ಇಸ್ರೇಲ್ ರೀತಿಯ ನಡೆ’

ಪಶ್ಚಿಮ ದಂಡೆಯಲ್ಲಿ ತಮ್ಮ ಕಾರ್ಯಾಚರಣೆ ಮತ್ತು ಪ್ರಸಾರವನ್ನು ನಿಷೇಧಿಸಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ಅಲ್‌-ಜಝೀರಾ ತೀವ್ರವಾಗಿ ಖಂಡಿಸಿದೆ. ಇದು ಇಸ್ರೇಲ್‌ ರೀತಿಯ ನಡೆಯಾಗಿದೆ. ನಾವು ಸದಾ ಪ್ಯಾಲೆಸ್ತೀನ್ ಜನತೆಯ ಧ್ವನಿಯಾಗಿದ್ದೆವು ಎಂದು ಹೇಳಿದೆ.

‘ಪತ್ರಿಕೋದ್ಯಮದ ವಿರುದ್ಧದ ಅಪರಾಧ’

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವುದನ್ನು ಗಾಝಾದ ಪತ್ರಕರ್ತರು ಖಂಡಿಸಿದ್ದಾರೆ. ಗುರುವಾರ (ಜ.2) ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಬಳಿ ಜಮಾಯಿಸಿದ ಪತ್ರಕರ್ತರು, ಇದು ‘ಪತ್ರಿಕೋದ್ಯಮದ ವಿರುದ್ದದ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಷೇಧ ಹಿಂಪಡೆಯಲು ಆಗ್ರಹ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ವಿಶ್ವ ಸಂಸ್ಥೆ ಖಂಡಿಸಿದೆ. ತಕ್ಷಣ ನಿಷೇಧ ಹಿಂಪಡೆಯುವಂತೆ ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯದ ದಮನದ ಕುರಿತು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು-ಪುಣೆಗೆ ಅಗ್ರ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...