Homeಮುಖಪುಟಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

- Advertisement -
- Advertisement -

ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆ (Occupied West Bank)ಯ ತನ್ನ ಪ್ರದೇಶದಲ್ಲಿ ಕತಾರ್ ಮೂಲದ ಪ್ರಸಿದ್ದ ಸುದ್ದಿ ಸಂಸ್ಥೆ ಅಲ್‌-ಜಝೀರಾದ ಪ್ರಸಾರ ಮತ್ತು ಕಾರ್ಯಾಚರಣೆಯನ್ನು ಪ್ಯಾಲೆಸ್ತೀನ್ ಪ್ರಾಧಿಕಾರ (ಪಿಎ) ನಿಷೇಧಿಸಿದೆ.

ಒಂದು ಕಾಲದಲ್ಲಿ  ಪ್ಯಾಲೆಸ್ತೀನ್ ದೇಶದ ಭಾಗವಾಗಿದ್ದ ಪಶ್ಚಿಮ ದಂಡೆಯ ಬಹುತೇಕ ಪ್ರದೇಶಗಳನ್ನು ಪ್ರಸ್ತುತ ಇಸ್ರೇಲ್ ಆಕ್ರಮಿಸಿಕೊಂಡಿದೆ. ಅಳಿದುಳಿದ ಕೆಲ ಪ್ರದೇಶಗಳು ಈಗಲೂ ಕೂಡ ಪ್ಯಾಲೆಸ್ತೀನ್ ಭಾಗವಾಗಿದೆ. ಅದರ ನಿಯಂತ್ರಣ ಪ್ಯಾಲೆಸ್ತೀನ್‌ ಸರ್ಕಾರದ ಅಧೀನದಲ್ಲಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ಕೈಯಲ್ಲಿದೆ.

ಅದೇ ಪ್ಯಾಲೆಸ್ತೀನ್ ಪ್ರಾಧಿಕಾರ ಈಗ ಅಲ್‌-ಜಝೀರಾ ಸುದ್ದಿ ಸಂಸ್ಥೆಯ ಕಾರ್ಯಾಚರಣೆಗೆ ತಡೆ ಒಡ್ಡಿದೆ.

ಅಲ್‌ ಜಝೀರಾ ಪ್ರಸಾರ ಮಾಡುವ ಸುದ್ದಿಗಳು ಪ್ರಚೋದನಕಾರಿಯಾಗಿವೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ ಹಾಗೂ ದೇಶದ್ರೋಹ ಎಸಗಿದ್ದಕ್ಕಾಗಿ ಮತ್ತು ಪ್ಯಾಲೆಸ್ತೀನ್‌ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸಿದ್ದಕ್ಕಾಗಿ ಅಲ್‌- ಜಝೀರಾದ ಪ್ರಸಾರವನ್ನು ಅಮಾನತಿನಲ್ಲಿರಿಸಲಾಗಿದೆ ಎಂದು ಪ್ಯಾಲೆಸ್ತೀನ್‌ನ ಅಧಿಕೃತ ಸುದ್ದಿ ಸಂಸ್ಥೆ ವಾಫಾ ಬುಧವಾರ (ಜ.1) ಸಂಜೆ ವರದಿ ಮಾಡಿದೆ.

2023ರ ಅಕ್ಟೋಬರ್ 7ರಿಂದ ಹಮಾಸ್ ನಿಯಂತ್ರಣದ ಪ್ಯಾಲೆಸ್ತೀನ್‌ನ ಭಾಗವಾಗಿರುವ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ಕುರಿತು ಅಲ್‌-ಜಝೀರಾ ನಿರಂತರ ಸುದ್ದಿ ಪ್ರಕಟಿಸುತ್ತಿದೆ. ಯುದ್ಧದಿಂದ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜೀವಗಳ ಪರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ವರದಿಗಳು, ಸಾಕ್ಷ್ಯ ಚಿತ್ರಗಳ ಮೂಲ ಗಾಝಾದ ನೈಜ ಚಿತ್ರಣವನ್ನು ಜಗತ್ತಿನ ಮುಂದೆ ತೆರೆದಿಡುವ ಕೆಲಸ ಮಾಡುತ್ತಿದೆ. ಈ ಪ್ರಯತ್ನದಲ್ಲಿ ಹಲವು ಸಿಬ್ಬಂದಿಯನ್ನು ಅಲ್‌-ಜಝೀರಾ ಕಳೆದುಕೊಂಡಿದೆ.

ಅಲ್‌-ಜಝೀರಾ ತಮ್ಮ ವಿರುದ್ದ ಸುದ್ದಿ ಪ್ರಕಟಿಸುವುದನ್ನು ಸಹಿಸದ ಇಸ್ರೇಲ್ ಸರ್ಕಾರ 2024ರ ಮೇ ತಿಂಗಳಲ್ಲಿ ಸಂಪೂರ್ಣ ಇಸ್ರೇಲ್‌ ಪ್ರದೇಶದಲ್ಲಿ ಅಲ್‌-ಜಝೀರಾವನ್ನು ನಿಷೇಧಿಸಿತ್ತು. ಆ ಬಳಿಕ ಆಕ್ರಮಿತ ಪಶ್ಚಿಮ ದಂಡೆಯ ರಾಮಲ್ಲಾಹ್‌ನಲ್ಲಿ ಅಲ್‌-ಜಝೀರಾದ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿದೆ.

‘ಇಸ್ರೇಲ್ ರೀತಿಯ ನಡೆ’

ಪಶ್ಚಿಮ ದಂಡೆಯಲ್ಲಿ ತಮ್ಮ ಕಾರ್ಯಾಚರಣೆ ಮತ್ತು ಪ್ರಸಾರವನ್ನು ನಿಷೇಧಿಸಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ಅಲ್‌-ಜಝೀರಾ ತೀವ್ರವಾಗಿ ಖಂಡಿಸಿದೆ. ಇದು ಇಸ್ರೇಲ್‌ ರೀತಿಯ ನಡೆಯಾಗಿದೆ. ನಾವು ಸದಾ ಪ್ಯಾಲೆಸ್ತೀನ್ ಜನತೆಯ ಧ್ವನಿಯಾಗಿದ್ದೆವು ಎಂದು ಹೇಳಿದೆ.

‘ಪತ್ರಿಕೋದ್ಯಮದ ವಿರುದ್ಧದ ಅಪರಾಧ’

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವುದನ್ನು ಗಾಝಾದ ಪತ್ರಕರ್ತರು ಖಂಡಿಸಿದ್ದಾರೆ. ಗುರುವಾರ (ಜ.2) ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಬಳಿ ಜಮಾಯಿಸಿದ ಪತ್ರಕರ್ತರು, ಇದು ‘ಪತ್ರಿಕೋದ್ಯಮದ ವಿರುದ್ದದ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಷೇಧ ಹಿಂಪಡೆಯಲು ಆಗ್ರಹ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ವಿಶ್ವ ಸಂಸ್ಥೆ ಖಂಡಿಸಿದೆ. ತಕ್ಷಣ ನಿಷೇಧ ಹಿಂಪಡೆಯುವಂತೆ ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯದ ದಮನದ ಕುರಿತು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು-ಪುಣೆಗೆ ಅಗ್ರ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...