Homeಮುಖಪುಟಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

- Advertisement -
- Advertisement -

ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆ (Occupied West Bank)ಯ ತನ್ನ ಪ್ರದೇಶದಲ್ಲಿ ಕತಾರ್ ಮೂಲದ ಪ್ರಸಿದ್ದ ಸುದ್ದಿ ಸಂಸ್ಥೆ ಅಲ್‌-ಜಝೀರಾದ ಪ್ರಸಾರ ಮತ್ತು ಕಾರ್ಯಾಚರಣೆಯನ್ನು ಪ್ಯಾಲೆಸ್ತೀನ್ ಪ್ರಾಧಿಕಾರ (ಪಿಎ) ನಿಷೇಧಿಸಿದೆ.

ಒಂದು ಕಾಲದಲ್ಲಿ  ಪ್ಯಾಲೆಸ್ತೀನ್ ದೇಶದ ಭಾಗವಾಗಿದ್ದ ಪಶ್ಚಿಮ ದಂಡೆಯ ಬಹುತೇಕ ಪ್ರದೇಶಗಳನ್ನು ಪ್ರಸ್ತುತ ಇಸ್ರೇಲ್ ಆಕ್ರಮಿಸಿಕೊಂಡಿದೆ. ಅಳಿದುಳಿದ ಕೆಲ ಪ್ರದೇಶಗಳು ಈಗಲೂ ಕೂಡ ಪ್ಯಾಲೆಸ್ತೀನ್ ಭಾಗವಾಗಿದೆ. ಅದರ ನಿಯಂತ್ರಣ ಪ್ಯಾಲೆಸ್ತೀನ್‌ ಸರ್ಕಾರದ ಅಧೀನದಲ್ಲಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ಕೈಯಲ್ಲಿದೆ.

ಅದೇ ಪ್ಯಾಲೆಸ್ತೀನ್ ಪ್ರಾಧಿಕಾರ ಈಗ ಅಲ್‌-ಜಝೀರಾ ಸುದ್ದಿ ಸಂಸ್ಥೆಯ ಕಾರ್ಯಾಚರಣೆಗೆ ತಡೆ ಒಡ್ಡಿದೆ.

ಅಲ್‌ ಜಝೀರಾ ಪ್ರಸಾರ ಮಾಡುವ ಸುದ್ದಿಗಳು ಪ್ರಚೋದನಕಾರಿಯಾಗಿವೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ ಹಾಗೂ ದೇಶದ್ರೋಹ ಎಸಗಿದ್ದಕ್ಕಾಗಿ ಮತ್ತು ಪ್ಯಾಲೆಸ್ತೀನ್‌ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸಿದ್ದಕ್ಕಾಗಿ ಅಲ್‌- ಜಝೀರಾದ ಪ್ರಸಾರವನ್ನು ಅಮಾನತಿನಲ್ಲಿರಿಸಲಾಗಿದೆ ಎಂದು ಪ್ಯಾಲೆಸ್ತೀನ್‌ನ ಅಧಿಕೃತ ಸುದ್ದಿ ಸಂಸ್ಥೆ ವಾಫಾ ಬುಧವಾರ (ಜ.1) ಸಂಜೆ ವರದಿ ಮಾಡಿದೆ.

2023ರ ಅಕ್ಟೋಬರ್ 7ರಿಂದ ಹಮಾಸ್ ನಿಯಂತ್ರಣದ ಪ್ಯಾಲೆಸ್ತೀನ್‌ನ ಭಾಗವಾಗಿರುವ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ಕುರಿತು ಅಲ್‌-ಜಝೀರಾ ನಿರಂತರ ಸುದ್ದಿ ಪ್ರಕಟಿಸುತ್ತಿದೆ. ಯುದ್ಧದಿಂದ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜೀವಗಳ ಪರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ವರದಿಗಳು, ಸಾಕ್ಷ್ಯ ಚಿತ್ರಗಳ ಮೂಲ ಗಾಝಾದ ನೈಜ ಚಿತ್ರಣವನ್ನು ಜಗತ್ತಿನ ಮುಂದೆ ತೆರೆದಿಡುವ ಕೆಲಸ ಮಾಡುತ್ತಿದೆ. ಈ ಪ್ರಯತ್ನದಲ್ಲಿ ಹಲವು ಸಿಬ್ಬಂದಿಯನ್ನು ಅಲ್‌-ಜಝೀರಾ ಕಳೆದುಕೊಂಡಿದೆ.

ಅಲ್‌-ಜಝೀರಾ ತಮ್ಮ ವಿರುದ್ದ ಸುದ್ದಿ ಪ್ರಕಟಿಸುವುದನ್ನು ಸಹಿಸದ ಇಸ್ರೇಲ್ ಸರ್ಕಾರ 2024ರ ಮೇ ತಿಂಗಳಲ್ಲಿ ಸಂಪೂರ್ಣ ಇಸ್ರೇಲ್‌ ಪ್ರದೇಶದಲ್ಲಿ ಅಲ್‌-ಜಝೀರಾವನ್ನು ನಿಷೇಧಿಸಿತ್ತು. ಆ ಬಳಿಕ ಆಕ್ರಮಿತ ಪಶ್ಚಿಮ ದಂಡೆಯ ರಾಮಲ್ಲಾಹ್‌ನಲ್ಲಿ ಅಲ್‌-ಜಝೀರಾದ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿದೆ.

‘ಇಸ್ರೇಲ್ ರೀತಿಯ ನಡೆ’

ಪಶ್ಚಿಮ ದಂಡೆಯಲ್ಲಿ ತಮ್ಮ ಕಾರ್ಯಾಚರಣೆ ಮತ್ತು ಪ್ರಸಾರವನ್ನು ನಿಷೇಧಿಸಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ಅಲ್‌-ಜಝೀರಾ ತೀವ್ರವಾಗಿ ಖಂಡಿಸಿದೆ. ಇದು ಇಸ್ರೇಲ್‌ ರೀತಿಯ ನಡೆಯಾಗಿದೆ. ನಾವು ಸದಾ ಪ್ಯಾಲೆಸ್ತೀನ್ ಜನತೆಯ ಧ್ವನಿಯಾಗಿದ್ದೆವು ಎಂದು ಹೇಳಿದೆ.

‘ಪತ್ರಿಕೋದ್ಯಮದ ವಿರುದ್ಧದ ಅಪರಾಧ’

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವುದನ್ನು ಗಾಝಾದ ಪತ್ರಕರ್ತರು ಖಂಡಿಸಿದ್ದಾರೆ. ಗುರುವಾರ (ಜ.2) ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಬಳಿ ಜಮಾಯಿಸಿದ ಪತ್ರಕರ್ತರು, ಇದು ‘ಪತ್ರಿಕೋದ್ಯಮದ ವಿರುದ್ದದ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಷೇಧ ಹಿಂಪಡೆಯಲು ಆಗ್ರಹ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ವಿಶ್ವ ಸಂಸ್ಥೆ ಖಂಡಿಸಿದೆ. ತಕ್ಷಣ ನಿಷೇಧ ಹಿಂಪಡೆಯುವಂತೆ ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯದ ದಮನದ ಕುರಿತು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು-ಪುಣೆಗೆ ಅಗ್ರ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...