Homeಮುಖಪುಟಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿದ ಪ್ಯಾಲೆಸ್ತೀನ್ ಪ್ರಾಧಿಕಾರ

- Advertisement -
- Advertisement -

ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆ (Occupied West Bank)ಯ ತನ್ನ ಪ್ರದೇಶದಲ್ಲಿ ಕತಾರ್ ಮೂಲದ ಪ್ರಸಿದ್ದ ಸುದ್ದಿ ಸಂಸ್ಥೆ ಅಲ್‌-ಜಝೀರಾದ ಪ್ರಸಾರ ಮತ್ತು ಕಾರ್ಯಾಚರಣೆಯನ್ನು ಪ್ಯಾಲೆಸ್ತೀನ್ ಪ್ರಾಧಿಕಾರ (ಪಿಎ) ನಿಷೇಧಿಸಿದೆ.

ಒಂದು ಕಾಲದಲ್ಲಿ  ಪ್ಯಾಲೆಸ್ತೀನ್ ದೇಶದ ಭಾಗವಾಗಿದ್ದ ಪಶ್ಚಿಮ ದಂಡೆಯ ಬಹುತೇಕ ಪ್ರದೇಶಗಳನ್ನು ಪ್ರಸ್ತುತ ಇಸ್ರೇಲ್ ಆಕ್ರಮಿಸಿಕೊಂಡಿದೆ. ಅಳಿದುಳಿದ ಕೆಲ ಪ್ರದೇಶಗಳು ಈಗಲೂ ಕೂಡ ಪ್ಯಾಲೆಸ್ತೀನ್ ಭಾಗವಾಗಿದೆ. ಅದರ ನಿಯಂತ್ರಣ ಪ್ಯಾಲೆಸ್ತೀನ್‌ ಸರ್ಕಾರದ ಅಧೀನದಲ್ಲಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ಕೈಯಲ್ಲಿದೆ.

ಅದೇ ಪ್ಯಾಲೆಸ್ತೀನ್ ಪ್ರಾಧಿಕಾರ ಈಗ ಅಲ್‌-ಜಝೀರಾ ಸುದ್ದಿ ಸಂಸ್ಥೆಯ ಕಾರ್ಯಾಚರಣೆಗೆ ತಡೆ ಒಡ್ಡಿದೆ.

ಅಲ್‌ ಜಝೀರಾ ಪ್ರಸಾರ ಮಾಡುವ ಸುದ್ದಿಗಳು ಪ್ರಚೋದನಕಾರಿಯಾಗಿವೆ. ತಪ್ಪು ಮಾಹಿತಿ, ಪ್ರಚೋದಿಸುವಿಕೆ ಹಾಗೂ ದೇಶದ್ರೋಹ ಎಸಗಿದ್ದಕ್ಕಾಗಿ ಮತ್ತು ಪ್ಯಾಲೆಸ್ತೀನ್‌ನ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸಿದ್ದಕ್ಕಾಗಿ ಅಲ್‌- ಜಝೀರಾದ ಪ್ರಸಾರವನ್ನು ಅಮಾನತಿನಲ್ಲಿರಿಸಲಾಗಿದೆ ಎಂದು ಪ್ಯಾಲೆಸ್ತೀನ್‌ನ ಅಧಿಕೃತ ಸುದ್ದಿ ಸಂಸ್ಥೆ ವಾಫಾ ಬುಧವಾರ (ಜ.1) ಸಂಜೆ ವರದಿ ಮಾಡಿದೆ.

2023ರ ಅಕ್ಟೋಬರ್ 7ರಿಂದ ಹಮಾಸ್ ನಿಯಂತ್ರಣದ ಪ್ಯಾಲೆಸ್ತೀನ್‌ನ ಭಾಗವಾಗಿರುವ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ನರಮೇಧದ ಕುರಿತು ಅಲ್‌-ಜಝೀರಾ ನಿರಂತರ ಸುದ್ದಿ ಪ್ರಕಟಿಸುತ್ತಿದೆ. ಯುದ್ಧದಿಂದ ತಮ್ಮದೆಲ್ಲವನ್ನು ಕಳೆದುಕೊಂಡಿರುವ ಅಮಾಯಕ ಜೀವಗಳ ಪರ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ವರದಿಗಳು, ಸಾಕ್ಷ್ಯ ಚಿತ್ರಗಳ ಮೂಲ ಗಾಝಾದ ನೈಜ ಚಿತ್ರಣವನ್ನು ಜಗತ್ತಿನ ಮುಂದೆ ತೆರೆದಿಡುವ ಕೆಲಸ ಮಾಡುತ್ತಿದೆ. ಈ ಪ್ರಯತ್ನದಲ್ಲಿ ಹಲವು ಸಿಬ್ಬಂದಿಯನ್ನು ಅಲ್‌-ಜಝೀರಾ ಕಳೆದುಕೊಂಡಿದೆ.

ಅಲ್‌-ಜಝೀರಾ ತಮ್ಮ ವಿರುದ್ದ ಸುದ್ದಿ ಪ್ರಕಟಿಸುವುದನ್ನು ಸಹಿಸದ ಇಸ್ರೇಲ್ ಸರ್ಕಾರ 2024ರ ಮೇ ತಿಂಗಳಲ್ಲಿ ಸಂಪೂರ್ಣ ಇಸ್ರೇಲ್‌ ಪ್ರದೇಶದಲ್ಲಿ ಅಲ್‌-ಜಝೀರಾವನ್ನು ನಿಷೇಧಿಸಿತ್ತು. ಆ ಬಳಿಕ ಆಕ್ರಮಿತ ಪಶ್ಚಿಮ ದಂಡೆಯ ರಾಮಲ್ಲಾಹ್‌ನಲ್ಲಿ ಅಲ್‌-ಜಝೀರಾದ ಕಾರ್ಯಾಚರಣೆಗೆ ನಿರ್ಬಂಧ ವಿಧಿಸಿದೆ.

‘ಇಸ್ರೇಲ್ ರೀತಿಯ ನಡೆ’

ಪಶ್ಚಿಮ ದಂಡೆಯಲ್ಲಿ ತಮ್ಮ ಕಾರ್ಯಾಚರಣೆ ಮತ್ತು ಪ್ರಸಾರವನ್ನು ನಿಷೇಧಿಸಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ಅಲ್‌-ಜಝೀರಾ ತೀವ್ರವಾಗಿ ಖಂಡಿಸಿದೆ. ಇದು ಇಸ್ರೇಲ್‌ ರೀತಿಯ ನಡೆಯಾಗಿದೆ. ನಾವು ಸದಾ ಪ್ಯಾಲೆಸ್ತೀನ್ ಜನತೆಯ ಧ್ವನಿಯಾಗಿದ್ದೆವು ಎಂದು ಹೇಳಿದೆ.

‘ಪತ್ರಿಕೋದ್ಯಮದ ವಿರುದ್ಧದ ಅಪರಾಧ’

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವುದನ್ನು ಗಾಝಾದ ಪತ್ರಕರ್ತರು ಖಂಡಿಸಿದ್ದಾರೆ. ಗುರುವಾರ (ಜ.2) ಗಾಝಾದ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಬಳಿ ಜಮಾಯಿಸಿದ ಪತ್ರಕರ್ತರು, ಇದು ‘ಪತ್ರಿಕೋದ್ಯಮದ ವಿರುದ್ದದ ಅಪರಾಧ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಷೇಧ ಹಿಂಪಡೆಯಲು ಆಗ್ರಹ

ಅಲ್‌-ಜಝೀರಾ ಸುದ್ದಿ ಸಂಸ್ಥೆಗೆ ನಿಷೇಧ ಹೇರಿರುವ ಪ್ಯಾಲೆಸ್ತೀನ್ ಪ್ರಾಧಿಕಾರದ ನಡೆಯನ್ನು ವಿಶ್ವ ಸಂಸ್ಥೆ ಖಂಡಿಸಿದೆ. ತಕ್ಷಣ ನಿಷೇಧ ಹಿಂಪಡೆಯುವಂತೆ ಒತ್ತಾಯಿಸಿದೆ. ಪತ್ರಿಕಾ ಸ್ವಾತಂತ್ರ್ಯದ ದಮನದ ಕುರಿತು ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಏಷ್ಯಾದ ಅತ್ಯಂತ ಕೆಟ್ಟ ಟ್ರಾಫಿಕ್ ನಗರಗಳ ಪಟ್ಟಿಯಲ್ಲಿ ಬೆಂಗಳೂರು-ಪುಣೆಗೆ ಅಗ್ರ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...