Homeಅಂತರಾಷ್ಟ್ರೀಯಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : 'ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

- Advertisement -
- Advertisement -

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು ‘ಐತಿಹಾಸಿಕ ಕ್ಷಣ’ ಎಂದು ಬಣ್ಣಿಸಿದ್ದಾರೆ.

ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಯುಕೆಯ ಪ್ಯಾಲೆಸ್ತೀನ್ ರಾಯಭಾರಿ ಹುಸಾಮ್ ಝೊಮ್ಲೋಟ್, “ರಾಯಭಾರ ಕಚೇರಿಯ ಸ್ಥಾಪನೆಯು ‘ಬ್ರಿಟಿಷ್-ಪ್ಯಾಲೆಸ್ತೀನ್’ ಸಂಬಂಧಗಳಲ್ಲಿ ಒಂದು ದೊಡ್ಡ ಮೈಲಿಗಲ್ಲು” ಎಂದಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದ ಯುಕೆ, ಕಳೆದ ಸೆಪ್ಟೆಂಬರ್‌ನಲ್ಲಿ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ಸ್ವತಂತ್ರ ರಾಷ್ಟ್ರ ಎಂದು ಗುರುತಿಸಿತ್ತು. ಅದರ ಮುಂದುವರಿದ ಭಾಗವಾಗಿ ಇದೀಗ ರಾಯಭಾರ ಕಚೇರಿ ತೆರೆಯಲಾಗಿದೆ.

“ಯುಕೆಯಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿಯ ಉದ್ಘಾಟನೆಯ ಒಂದು ಐತಿಹಾಸಿಕ ಕ್ಷಣದಲ್ಲಿ ನಾವೆಲ್ಲ ಒಟ್ಟುಗೂಡಿದ್ದೇವೆ. ಇದು ಪೂರ್ಣ ರಾಜತಾಂತ್ರಿಕ ಸ್ಥಾನಮಾನ ಮತ್ತು ಸವಲತ್ತುಗಳೊಂದಿಗೆ, ನಮ್ಮ ಜನರ ಸಾರ್ವಭೌಮ ರಾಜ್ಯತ್ವ ಮತ್ತು ರಾಷ್ಟ್ರಗಳ ನಡುವೆ ಸಮಾನತೆಯ ಅವಿಭಾಜ್ಯ ಹಕ್ಕಿನ ಸಂಕೇತವಾಗಿದೆ” ಎಂದು ಝೊಮ್ಲೋಟ್ ಹೇಳಿದ್ದಾರೆ.

“ಗಾಝಾ, ಪೂರ್ವ ಜೆರುಸಲೇಂ ಸೇರಿದಂತೆ ಆಕ್ರಮಿತ ಪಶ್ಚಿಮ ದಂಡೆ, ನಿರಾಶ್ರಿತರ ಶಿಬಿರಗಳು ಮತ್ತು ವಲಸೆಗಾರರಾದ್ಯಂತ ಪ್ಯಾಲೆಸ್ತೀನಿಯರ ತಲೆಮಾರುಗಳಿಗೆ ಈ ರಾಯಭಾರ ಕಚೇರಿ ನಮ್ಮ ಗುರುತನ್ನು ನಿರಾಕರಿಸಲಾಗುವುದಿಲ್ಲ, ನಮ್ಮ ಉಪಸ್ಥಿತಿಯನ್ನು ಅಳಿಸಲಾಗುವುದಿಲ್ಲ ಮತ್ತು ನಮ್ಮ ಜೀವನವನ್ನು ಅಪಮೌಲ್ಯಗೊಳಿಸಲು ಸಾಧ್ಯವಿಲ್ಲ ಎಂಬುವುದಕ್ಕೆ ಪುರಾವೆಯಾಗಿದೆ” ಎಂದಿದ್ದಾರೆ.

“ಒಂದು ಶತಮಾನಕ್ಕೂ ಹೆಚ್ಚು ಕಾಲ ಸ್ವಯಂ ನಿರ್ಣಯವನ್ನು ನಿರಾಕರಿಸಿದ ಜನರಿಗೆ, ಇದು ಒಂದು ಸ್ಮರಣೀಯ ಕ್ಷಣ” ಎಂದು ಹೇಳಿದ್ದಾರೆ.

ಅಂದರೆ, ಪ್ಯಾಲೆಸ್ತೀನಿಯರು ಒಂದು ಶತಮಾನಕ್ಕೂ ಹೆಚ್ಚು ಕಾಲ (1917ರ ಬಾಲ್ಫೋರ್ ಘೋಷಣೆಯಿಂದ ಆರಂಭವಾಗಿ, ಇಸ್ರೇಲ್ ಸ್ಥಾಪನೆ, ಆಕ್ರಮಿತ ಪ್ರದೇಶಗಳು ಇತ್ಯಾದಿ ಮೂಲಕ) ತಮ್ಮ ಸ್ವಯಂ ನಿರ್ಣಯದ ಹಕ್ಕನ್ನು (ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸುವ ಹಕ್ಕು) ನಿರಾಕರಿಸಲ್ಪಟ್ಟಿದ್ದಾರೆ. ಹಾಗಾಗಿ, ಅವರಿಗೆಇದು ಒಂದು ಸ್ಮರಣೀಯ ಕ್ಷಣ ಎಂದು ತಿಳಿಸಿದ್ದಾರೆ.

ಯುಕೆ ಎಲ್ಲಾ ಕಾನೂನು ಹಕ್ಕುಗಳು ಮತ್ತು ಬಾಧ್ಯತೆಗಳನ್ನು ನೀಡಿ ಪ್ಯಾಲೆಸ್ತೀನ್‌ ಅನ್ನು ಪ್ರತ್ಯೇಕ ಸ್ವತಂತ್ರ ರಾಷ್ಟ್ರವೆಂದು ಒಪ್ಪಿಕೊಂಡಿದೆ.

ಹೊಸ ರಾಯಭಾರ ಕಚೇರಿಯ ಫಲಕವನ್ನು ಅನಾವರಣಗೊಳಿಸಿದ ನಂತರ, ರಾಜತಾಂತ್ರಿಕ ದಳದ ಮಾರ್ಷಲ್ ಅಲಿಸ್ಟೈರ್ ಹ್ಯಾರಿಸನ್, ಝಮ್ಲೋಟ್ ಅವರ ಹೇಳಿಕೆಗಳಿಗೆ ದನಿಗೂಡಿಸಿದ್ದು, ರಾಯಭಾರ ಕಚೇರಿಯ ಉದ್ಘಾಟನೆಯು ‘ಪ್ಯಾಲೆಸ್ತೀನ್‌ಗೆ ಐತಿಹಾಸಿಕ ಕ್ಷಣ’ ಎಂದು ಹೇಳಿದ್ದಾರೆ.

“ನಮ್ಮ ಎರಡೂ ದೇಶಗಳ ನಡುವಿನ ಸಂಬಂಧದಲ್ಲಿ ಇದು ಬಹಳ ಮುಖ್ಯವಾದ ಕ್ಷಣ. ಇದು ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಒಂದು ಹೆಜ್ಜೆ ಬದಲಾವಣೆಯ ಆರಂಭ” ಎಂದಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಗಾಝಾದ 14 ವರ್ಷದ ಪ್ಯಾಲೆಸ್ತೀನಿಯನ್ ಬಾಲಕ ಉಬೈದಾ ಮಾತನಾಡಿ “ನಾನು ನರಮೇಧದಿಂದ ಬದುಕುಳಿದೆ, ಆದರೆ ನನ್ನ ದೇಹವು ಆಳವಾದ ಗಾಯಗಳನ್ನು ಹೊಂದಿದೆ” ಎಂದು ಹೇಳಿದ್ದಾರೆ.

ತನ್ನ ಕುಟುಂಬದ ಒಂದು ಭಾಗ ಯುಕೆಯಲ್ಲಿದೆ ಎಂದು ಉಬೈದಾ ತಿಳಿಸಿದ್ದು, ಆದರೆ ಅವರ ತಂದೆ ಇನ್ನೂ ಗಾಝಾದಲ್ಲಿದ್ದಾರೆ, ಅಲ್ಲಿ ‘ಜೀವನವು ಇನ್ನೂ ಭಯದಿಂದ ತುಂಬಿದೆ’ ಎಂದು ಹೇಳಿದ್ದಾರೆ.

“ಒಂದು ದಿನ ನಾನು ರಾಯಭಾರಿಯಾಗಬೇಕೆಂದು ಆಶಿಸುತ್ತೇನೆ, ಯುಕೆ ರಾಯಭಾರಿಯದಾರೂ.. ಈ ಮೂಲಕ ನಾನು ನನ್ನ ಜನರಿಗೆ ಸಹಾಯ ಮಾಡಲು ಮತ್ತು ನಮ್ಮ ಧ್ವನಿಯನ್ನು ಪ್ರಪಂಚದಾದ್ಯಂತ ಕೇಳುವಂತೆ ಮಾಡಲು ಕೆಲಸ ಮಾಡಬಹುದು” ಎಂದು ಉಬೈದಾ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...