Homeಮುಖಪುಟಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ 'ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ...

ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

- Advertisement -
- Advertisement -

2023ರ ಕೇರಳ ಸರಕಾರದ ಮಾದ್ಯಮ ಪ್ರಶಸ್ತಿಗೆ ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಆಯ್ಕೆ ಮಾಡಲಾಗಿದೆ. ಯುದ್ಧ ಪೀಡಿತ ಗಾಝಾದಲ್ಲಿ ಸಂಭವಿಸಿದ ದುರಂತದ ನೈಜ ಚಿತ್ರವನ್ನು ಜಗತ್ತಿಗೆ ನೋಡಲು ಅವಕಾಶ ಮಾಡಿಕೊಟ್ಟ ನಿರ್ಭೀತ ವರದಿಗಾಗಿ ದಹದೌಹ್ ಅವರನ್ನು ಗುರುತಿಸಲಾಗಿದೆ ಎಂದು ಕೇರಳ ಮಾದ್ಯಮ ಅಕಾಡೆಮಿ ಹೇಳಿದೆ.

ಕೇರಳ ಮಾಧ್ಯಮ ಅಕಾಡೆಮಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಕೇರಳ ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ ಮತ್ತು ಪ್ರಶಸ್ತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಮಾಡಲಿದ್ದಾರೆ. ತನಿಖಾ ಪತ್ರಕರ್ತರ ಸಂಘ ಮತ್ತು ಸಂಪಾದಕರ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಪ್ಯಾಲೆಸ್ತೀನ್ ಪತ್ರಕರ್ತ ದಹದೌಹ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್-ದಹದೌಹ್ ಅವರ ಪತ್ನಿ ಅಮ್ನಾ, ಮಗ ಮಹಮೂದ್, ಮಗಳು ಶಾಮ್ ಮತ್ತು ಮೊಮ್ಮಗ ಆಡಮ್ ಅವರು ಮೃತಪಟ್ಟಿದ್ದರು. ಅವರ ಇನ್ನೋರ್ವ ಮಗ ಹಮ್ಜಾ, ಅಲ್ ಜಝೀರಾ ಪತ್ರಕರ್ತನಾಗಿದ್ದು, ವೀಡಿಯೋಗ್ರಾಫರ್ ಮುಸ್ತಫಾ ತುರಾಯಾ ಅವರೊಂದಿಗೆ ಕರ್ತವ್ಯದಲ್ಲಿದ್ದಾಗ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.  ತನ್ನ ಕುಟುಂಬದ 8 ಮಂದಿಯನ್ನು ಯುದ್ಧದಲ್ಲಿ ಕಳೆದುಕೊಂಡಿದ್ದರೂ ಅಲ್‌ ದಹದಹ್‌ ಯುದ್ಧ ಭೂಮಿಯಲ್ಲಿ ವರದಿಯನ್ನು ಮುಂದುವರಿಸಿದ್ದರು.

ಕೇರಳ ಮಾದ್ಯಮ ಅಕಾಡೆಮಿಯ ಅಧ್ಯಕ್ಷರಾದ ಆರ್‌ ಎಸ್‌ ಬಾಬು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು,  ಕೇರಳ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಬಗ್ಗೆ ಅವರಿಗೆ ತಿಳಿಸಿದಾಗ ವೇಲ್ ಅಲ್-ದಹದೌಹ್ ಈ ಪ್ರಶಸ್ತಿಯನ್ನು ಅಮೂಲ್ಯವಾದ ಗೌರವವೆಂದು ಬಣ್ಣಿಸಿದ್ದಾರೆ ಮತ್ತು ಅದರ ಬಗ್ಗೆ ತಿಳಿಸಿದ ನಂತರ ಅದಕ್ಕಾಗಿ ತಮ್ಮ ಮೆಚ್ಚುಗೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅಲ್ ಜಝೀರಾ ಪತ್ರಕರ್ತನ ಹೋರಾಟ ಮತ್ತು ಯುದ್ಧ ವಲಯದಿಂದ ವರದಿ ಮಾಡುವ ಸ್ಥೈರ್ಯವನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಅವರು ಅಲ್ ಜಝೀರಾ ಮೂಲಕ ಯುದ್ಧ ಪೀಡಿತ ಗಾಝಾದ ಕರುಣಾಜನಕ ದುಸ್ಥಿತಿಯನ್ನು ಜಗತ್ತಿನ ಮುಂದೆ ತೆರೆದಿಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರು ತಮ್ಮ ಪತ್ನಿ ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಒಟ್ಟು 8 ಸದಸ್ಯರನ್ನು ಕಳೆದುಕೊಂಡಿದ್ದಾರೆ. ಈ ಎಲ್ಲಾ ನಷ್ಟಗಳ ನಂತರವೂ ವೇಲ್ ಅಲ್-ದಹದೌಹ್ ಯುದ್ಧ ಭೂಮಿಯಲ್ಲಿ ಧೃರ್ಯ ಮತ್ತು ಸ್ತೈರ್ಯದಿಂದ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಡಿಸೆಂಬರ್ 2023ರಲ್ಲಿ ಯುಎನ್ ಶಾಲೆಯ ಮೇಲೆ ಇಸ್ರೇಲ್‌ ದಾಳಿ ಮಾಡುವುದನ್ನು ಚಿತ್ರೀಕರಿಸುವಾಗ ಅಲ್-ದಹದೌಹ್ ಮತ್ತು ಅವರ ಸಹೋದ್ಯೋಗಿ ಸಮರ್ ಅಬುದಾಕಾ ಗಾಯಗೊಂಡಿದ್ದರು, ಇಸ್ರೇಲ್‌ ಸೈನ್ಯವು ವೈದ್ಯಾಧಿಕಾರಿಗಳು ಸಮರ್‌ ಬಳಿ ತಲುಪದಂತೆ ತಡೆಯುತ್ತಿದ್ದರಿಂದ ಅವರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದರು. ದಾಳಿಯಲ್ಲಿ ಉಂಟಾದ ಗಾಯಗಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅಲ್-ದಹದೌಹ್ ಕತಾರ್‌ಗೆ ತೆರಳಿದ್ದರು.

ಯುಎನ್ ವರದಿಗಳ ಪ್ರಕಾರ, ಗಾಝಾ ಮೇಲೆ ಇಸ್ರೇಲ್‌ ಸುಮಾರು 4 ತಿಂಗಳಿನಿಂದ ಆಕ್ರಮಣವನ್ನು ನಡೆಸುತ್ತಿದೆ. ಆಕ್ರಮಣದಲ್ಲಿ  27,000 ಜನರ ಹತ್ಯೆ ನಡೆದಿದೆ. ಅವರಲ್ಲಿ 122ಕ್ಕೂ ಹೆಚ್ಚು ಪತ್ರಕರ್ತರು ಸೇರಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...