Homeಅಂತರಾಷ್ಟ್ರೀಯಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ '2024ರ ಯುನೆಸ್ಕೋ ಪತ್ರಿಕಾ...

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ ಪತ್ರಿಕಾ ಸ್ವಾತಂತ್ರ್ಯ ಪ್ರಶಸ್ತಿ’

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು ಆಯ್ಕೆ ಮಾಡಲಾಗಿದೆ. ವಿದೇಶಿ ಮಾಧ್ಯಮಗಳಿಗೆ ಗಾಝಾಗೆ ತೆರಳದಂತೆ ಇಸ್ರೇಲ್‌ ನಿರ್ಬಂಧ ವಿಧಿಸಿತ್ತು. ಸ್ಥಳೀಯ ಪತ್ರಕರ್ತರು ಗಾಝಾ ಪಟ್ಟಿಯ ಕಣ್ಣುಗಳು ಮತ್ತು ಕಿವಿಗಳಾಗಿದ್ದರು. ಇಸ್ರೇಲ್‌ ದಾಳಿ ಮೂಲಕ ಗಾಝಾದಲ್ಲಿ 30,000ಕ್ಕೂ ಅಧಿಕ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ. ಈ ವೇಳೆ ಪತ್ರಕರ್ತರ ಸರಣಿ ಸಾವುಗಳು ನಡೆದಿದೆ. ಆದರೂ ಎದೆಗುಂದದೆ ಪ್ಯಾಲೆಸ್ತೀನ್‌ ಪತ್ರಕರ್ತರು ಇಸ್ರೇಲ್‌ನ ಕೃತ್ಯವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದರು.

UNESCO ಗಾಝಾದಲ್ಲಿ 26 ಪತ್ರಕರ್ತರ ಸಾವುಗಳ ಬಗ್ಗೆ ಉಲ್ಲೇಖಿಸಿದೆ, ಆದರೆ ವಾಸ್ತವ ಸಂಖ್ಯೆ ಅದಕ್ಕಿಂತ ಹೆಚ್ಚಿರಬಹುದು. ಅಲ್ ಜಝೀರಾ ಮಾಧ್ಯಮದ ಪ್ರಕಾರ ಗಾಝಾದಲ್ಲಿ 100ಕ್ಕಿಂತ ಹೆಚ್ಚು ಪತ್ರಕರ್ತರು ಮೃತಪಟ್ಟಿದ್ದಾರೆ. ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ತನ್ನ ಕುಟುಂಬದ ಅನೇಕ ಸದಸ್ಯರನ್ನು ಕಳೆದುಕೊಂಡಿದ್ದಾರೆ. ಅವರು ಕೂಡ ಇಸ್ರೇಲ್‌ ದಾಳಿ ವೇಳೆ ಗಾಯಗೊಂಡಿದ್ದಾರೆ.

ಅಲ್‌ ಜಝೀರಾ ಚಾನೆಲ್‌ನ ಕ್ಯಾಮರಾಮ್ಯಾನ್ ಸಮೀರ್ ಅಬುದಾಕ ದಕ್ಷಿಣ ಗಾಝಾದಲ್ಲಿ ವರದಿ ಮಾಡುವಾಗ ಮೃತಪಟ್ಟಿದ್ದಾರೆ. ಇದಲ್ಲದೆ ಇಸ್ರೇಲ್‌ ದೇಶವು ಅಲ್‌ಜಝೀರಾ ಮಾಧ್ಯಮದ ಪ್ರಸಾರ ಮತ್ತು ಕಾರ್ಯಚರಣೆಯನ್ನು ಸಂಫೂರ್ಣವಾಗಿ ನಿಷೇಧಿಸಿದೆ.

ಪ್ರಶಸ್ತಿ ಕುರಿತು ತೀರ್ಪುಗಾರರ ಸಮಿತಿಯ ಮುಖ್ಯಸ್ಥರಾದ ಮಾರಿಸಿಯೊ ವೀಬೆಲ್ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಹತಾಶತೆಯ ಈ ಸಮಯದಲ್ಲಿ, ಈ ಬಿಕ್ಕಟ್ಟಿನ ಬಗ್ಗೆ ವರದಿ ಮಾಡುತ್ತಿರುವ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ಒಗ್ಗಟ್ಟಿನ ಬಗ್ಗೆ ಬಲವಾದ ಸಂದೇಶವನ್ನು ಕಳುಹಿಸಲು ನಾವು ಬಯಸುತ್ತೇವೆ. ಮಾನವೀಯವಾಗಿ ಅವರ ಧೈರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬದ್ಧತೆಗೆ ನಾವು ದೊಡ್ಡ ಋಣವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

UNESCO/Guillermo Cano ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತದೆ, ಕಠಿಣ ಮತ್ತು ಅಪಾಯಕಾರಿ ಸಂದರ್ಭಗಳನ್ನು ಎದುರಿಸುತ್ತಿರುವ ಪತ್ರಕರ್ತರ ಧೈರ್ಯವನ್ನು ಮೆಚ್ಚಿ ಈ ಗೌರವವನ್ನು ನೀಡಲಾಗುತ್ತದೆ ಎಂದು UNESCO ನಿರ್ದೇಶಕ-ಜನರಲ್ ಆಡ್ರೆ ಅಜೌಲೆ ಹೇಳಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು 194 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ.

ಹಮಾಸ್‌ ಇಸ್ರೇಲ್‌ ಮೇಲೆ ಅ.7ರಂದು ನಡೆಸಿದ ವೈಮಾನಿಕ ದಾಳಿಗೆ 1,200 ಜನರು ಮೃತಪಟ್ಟಿದ್ದರು.  ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ 30,000ಕ್ಕೂ ಅಧಿಕ ಗಾಝಾದ ನಾಗರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಇದನ್ನು ಓದಿ: ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...