Homeಅಂತರಾಷ್ಟ್ರೀಯಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ '2024ರ ಯುನೆಸ್ಕೋ ಪತ್ರಿಕಾ...

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ ಪತ್ರಿಕಾ ಸ್ವಾತಂತ್ರ್ಯ ಪ್ರಶಸ್ತಿ’

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು ಆಯ್ಕೆ ಮಾಡಲಾಗಿದೆ. ವಿದೇಶಿ ಮಾಧ್ಯಮಗಳಿಗೆ ಗಾಝಾಗೆ ತೆರಳದಂತೆ ಇಸ್ರೇಲ್‌ ನಿರ್ಬಂಧ ವಿಧಿಸಿತ್ತು. ಸ್ಥಳೀಯ ಪತ್ರಕರ್ತರು ಗಾಝಾ ಪಟ್ಟಿಯ ಕಣ್ಣುಗಳು ಮತ್ತು ಕಿವಿಗಳಾಗಿದ್ದರು. ಇಸ್ರೇಲ್‌ ದಾಳಿ ಮೂಲಕ ಗಾಝಾದಲ್ಲಿ 30,000ಕ್ಕೂ ಅಧಿಕ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದೆ. ಈ ವೇಳೆ ಪತ್ರಕರ್ತರ ಸರಣಿ ಸಾವುಗಳು ನಡೆದಿದೆ. ಆದರೂ ಎದೆಗುಂದದೆ ಪ್ಯಾಲೆಸ್ತೀನ್‌ ಪತ್ರಕರ್ತರು ಇಸ್ರೇಲ್‌ನ ಕೃತ್ಯವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದರು.

UNESCO ಗಾಝಾದಲ್ಲಿ 26 ಪತ್ರಕರ್ತರ ಸಾವುಗಳ ಬಗ್ಗೆ ಉಲ್ಲೇಖಿಸಿದೆ, ಆದರೆ ವಾಸ್ತವ ಸಂಖ್ಯೆ ಅದಕ್ಕಿಂತ ಹೆಚ್ಚಿರಬಹುದು. ಅಲ್ ಜಝೀರಾ ಮಾಧ್ಯಮದ ಪ್ರಕಾರ ಗಾಝಾದಲ್ಲಿ 100ಕ್ಕಿಂತ ಹೆಚ್ಚು ಪತ್ರಕರ್ತರು ಮೃತಪಟ್ಟಿದ್ದಾರೆ. ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ದಹದೌಹ್ ತನ್ನ ಕುಟುಂಬದ ಅನೇಕ ಸದಸ್ಯರನ್ನು ಕಳೆದುಕೊಂಡಿದ್ದಾರೆ. ಅವರು ಕೂಡ ಇಸ್ರೇಲ್‌ ದಾಳಿ ವೇಳೆ ಗಾಯಗೊಂಡಿದ್ದಾರೆ.

ಅಲ್‌ ಜಝೀರಾ ಚಾನೆಲ್‌ನ ಕ್ಯಾಮರಾಮ್ಯಾನ್ ಸಮೀರ್ ಅಬುದಾಕ ದಕ್ಷಿಣ ಗಾಝಾದಲ್ಲಿ ವರದಿ ಮಾಡುವಾಗ ಮೃತಪಟ್ಟಿದ್ದಾರೆ. ಇದಲ್ಲದೆ ಇಸ್ರೇಲ್‌ ದೇಶವು ಅಲ್‌ಜಝೀರಾ ಮಾಧ್ಯಮದ ಪ್ರಸಾರ ಮತ್ತು ಕಾರ್ಯಚರಣೆಯನ್ನು ಸಂಫೂರ್ಣವಾಗಿ ನಿಷೇಧಿಸಿದೆ.

ಪ್ರಶಸ್ತಿ ಕುರಿತು ತೀರ್ಪುಗಾರರ ಸಮಿತಿಯ ಮುಖ್ಯಸ್ಥರಾದ ಮಾರಿಸಿಯೊ ವೀಬೆಲ್ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಹತಾಶತೆಯ ಈ ಸಮಯದಲ್ಲಿ, ಈ ಬಿಕ್ಕಟ್ಟಿನ ಬಗ್ಗೆ ವರದಿ ಮಾಡುತ್ತಿರುವ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ಒಗ್ಗಟ್ಟಿನ ಬಗ್ಗೆ ಬಲವಾದ ಸಂದೇಶವನ್ನು ಕಳುಹಿಸಲು ನಾವು ಬಯಸುತ್ತೇವೆ. ಮಾನವೀಯವಾಗಿ ಅವರ ಧೈರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬದ್ಧತೆಗೆ ನಾವು ದೊಡ್ಡ ಋಣವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

UNESCO/Guillermo Cano ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತದೆ, ಕಠಿಣ ಮತ್ತು ಅಪಾಯಕಾರಿ ಸಂದರ್ಭಗಳನ್ನು ಎದುರಿಸುತ್ತಿರುವ ಪತ್ರಕರ್ತರ ಧೈರ್ಯವನ್ನು ಮೆಚ್ಚಿ ಈ ಗೌರವವನ್ನು ನೀಡಲಾಗುತ್ತದೆ ಎಂದು UNESCO ನಿರ್ದೇಶಕ-ಜನರಲ್ ಆಡ್ರೆ ಅಜೌಲೆ ಹೇಳಿದ್ದಾರೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯು 194 ಸದಸ್ಯ ರಾಷ್ಟ್ರಗಳನ್ನು ಹೊಂದಿದೆ.

ಹಮಾಸ್‌ ಇಸ್ರೇಲ್‌ ಮೇಲೆ ಅ.7ರಂದು ನಡೆಸಿದ ವೈಮಾನಿಕ ದಾಳಿಗೆ 1,200 ಜನರು ಮೃತಪಟ್ಟಿದ್ದರು.  ಆ ಬಳಿಕ ಇಸ್ರೇಲ್‌ ಯುದ್ಧ ಘೋಷಿಸಿ ಗಾಝಾ ಮೇಲೆ ನಡೆಸಿದ ದಾಳಿಯಲ್ಲಿ 30,000ಕ್ಕೂ ಅಧಿಕ ಗಾಝಾದ ನಾಗರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮಕ್ಕಳು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಇದನ್ನು ಓದಿ: ಹೇಮಂತ್ ಕರ್ಕರೆ ಆರೆಸ್ಸೆಸ್‌ ನಂಟಿನ ಪೊಲೀಸ್ ಅಧಿಕಾರಿಯ ಗುಂಡಿಗೆ ಬಲಿಯಾಗಿದ್ದು: ವಿಜಯ್ ವಡೆಟ್ಟಿವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...