Homeಅಂತರಾಷ್ಟ್ರೀಯಗಾಝಾದಲ್ಲಿ ಮುಂದುವರಿದ ಹತ್ಯಾಕಾಂಡ: ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ರಾಜೀನಾಮೆ

ಗಾಝಾದಲ್ಲಿ ಮುಂದುವರಿದ ಹತ್ಯಾಕಾಂಡ: ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ರಾಜೀನಾಮೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್ ಹತ್ಯಾಕಾಂಡವನ್ನು ಮುಂದುವರಿಸಿರುವ ಮಧ್ಯೆ ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ಆಕ್ರಮಣ ಹಾಗೂ ವೆಸ್ಟ್‌ ಬ್ಯಾಂಕ್‌ ಮತ್ತು ಜೆರುಸಲೇಮ್‌ನಲ್ಲಿ ಪರಿಸ್ಥಿತಿ ಉಲ್ಬಣ, ಯುದ್ಧದ ನಂತರ ರಾಜಕೀಯ ವ್ಯವಸ್ಥೆಗಳ ಬಗ್ಗೆ ಪ್ಯಾಲೆಸ್ತೀನಿಯಾದವರಲ್ಲಿ ಒಮ್ಮತವನ್ನು ರೂಪಿಸಲು ಅವಕಾಶ ಮಾಡಿಕೊಡಲು ತಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಪ್ಯಾಲೆಸ್ತೀನ್ ಪ್ರಧಾನಿ ಮುಹಮ್ಮದ್ ಶ್ತಾಯಿಹ್ ಸೋಮವಾರ ಘೋಷಿಸಿದ್ದಾರೆ.

ಶ್ತಾಯಿಹ್ ಅವರ ರಾಜೀನಾಮೆಯನ್ನು ಅಬ್ಬಾಸ್ ಅವರು ಇನ್ನೂ ಅಂಗೀಕರಿಸಬೇಕು, ಬೇರೆ ಪ್ರಧಾನಿ  ನೇಮಕಗೊಳ್ಳುವವರೆಗೆ ಉಸ್ತುವಾರಿಯಾಗಿ ಉಳಿಯಲು ಅವರನ್ನು ಕೇಳಬಹುದು ಎಂದು ವರದಿಗಳು ಉಲ್ಲೇಖಿಸಿದೆ.

2019ರಲ್ಲಿ ಅಧಿಕಾರ ವಹಿಸಿಕೊಂಡಿದ್ದ ಮುಹಮ್ಮದ್ ಶ್ತಾಯಿಹ್ ಅರ್ಥಶಾಸ್ತ್ರಜ್ಞರು ಕೂಡ ಹೌದು. ಮುಹಮ್ಮದ್ ಶ್ತಾಯಿಹ್ ರಾಜೀನಾಮೆಯನ್ನು ಘೋಷಿಸಿದ್ದಾರೆ. ಗಾಝಾ ಪಟ್ಟಿಯಲ್ಲಿ ಯುದ್ಧ, ನರಮೇಧ ಮತ್ತು ಹಸಿವಿನಿದ ಜನರು ತತ್ತರಿಸಿರುವ ಮಧ್ಯೆ ರಾಜೀನಾಮೆ ನೀಡುವ ನಿರ್ಧಾರವು ಹೊರ ಬಂದಿದೆ.

ಮುಂದಿನ ಹಂತ ಮತ್ತು ಅದರ ಸವಾಲುಗಳಿಗೆ ಹೊಸ ಸರ್ಕಾರಿ ಮತ್ತು ರಾಜಕೀಯ ವ್ಯವಸ್ಥೆಗಳ ಅಗತ್ಯವಿದೆ ಎಂದು ನಾನು ಭಾವಿಸುತ್ತೇನೆ. ಪ್ಯಾಲೆಸ್ತೀನ್‌ನ ಏಕತೆ ಮತ್ತು ಪ್ಯಾಲೆಸ್ತೀನ್‌ ಭೂ ವಿಚಾರದಲ್ಲಿ ಪ್ಯಾಲೆಸ್ತೀನ್‌-ಪ್ಯಾಲೆಸ್ತೀನ್‌ ಒಮ್ಮತದ ಅಗತ್ಯವಿದೆ ಎಂದು ಮುಹಮ್ಮದ್ ಶ್ತಾಯಿಹ್ ಹೇಳಿದ್ದಾರೆ.

ಯುದ್ಧದ ಸ್ಥಿತಿ ಬಳಿಕ ಪ್ಯಾಲೆಸ್ತೀನ್‌ನ್ನು ಆಳುವ ರಾಜಕೀಯ ರಚನೆಯ ಬಗ್ಗೆ ಕೆಲಸವನ್ನು ಪ್ರಾರಂಭಿಸಲು US ಒತ್ತಡ ಹೆಚ್ಚುತ್ತಿರುವ ಮಧ್ಯೆ ಶ್ತಾಯಿಹ್ ಅವರ ರಾಜೀನಾಮೆ ಹೊರ ಬಿದ್ದಿದೆ. ಆದರೆ ಇಸ್ರೇಲ್‌ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಹಲವಾರು ಸಂದರ್ಭಗಳಲ್ಲಿ ಅಬ್ಬಾಸ್ ಅವರು ಗಾಝಾವನ್ನು ನಿಯಂತ್ರಿಸುವ ಬಗೆಗೆ ವಿರೋಧಿಸಿದೆ. ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯಿಂದ ಶಾಂತಿ ಸ್ಥಾಪನೆಯಲ್ಲಿ ವಿಫಲವಾಗುವುದರ ಜೊತೆಗೆ ಇಸ್ರೇಲ್ ರಾಜ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ನೆತನ್ಯಾಹು ಹೇಳಿದ್ದರು.

ಅ.7ರಂದು ಇಸ್ರೇಲ್‌- ಪ್ಯಾಲೆಸ್ತೀನ್‌ ಮೇಲೆ ಯುದ್ಧ ಘೋಷಿಸಿದ ಬಳಿಕ ಗಾಝಾದಲ್ಲಿ 30,000 ನಾಗರಿಕರನ್ನು ಹತ್ಯೆ ಮಾಡಿದೆ. ಹತ್ಯೆಯಾದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 60,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಲಕ್ಷಾಂತರ ಮನೆಗಳು ಧ್ವಂಸಗೊಂಡಿದ್ದು, ಜನರು ನಿರಾಶ್ರಿತರಾಗಿ ತಾತ್ಕಾಲಿಕ ಶಿಬಿರಗಳಲ್ಲಿ ದಿನದೂಡುತ್ತಿದ್ದಾರೆ. ಶಿಬಿರಗಳಲ್ಲಿ ಆಹಾರ, ನೀರು ವೈದ್ಯಕೀಯ ಸೌಲಭ್ಯಗಳ ಸಮಸ್ಯೆಯಿಂದ ಜನರ ಜೀವನ ನರಕ ಸದೃಶವಾಗಿದೆ.

ಇದನ್ನು ಓದಿ: ಗಾಝಾ ಹತ್ಯಾಕಾಂಡವನ್ನು ಖಂಡಿಸಿ ಇಸ್ರೇಲ್‌ ರಾಯಭಾರ ಕಚೇರಿಯೆದುರು ಬೆಂಕಿ ಹಚ್ಚಿಕೊಂಡ ಅಮೆರಿಕದ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...