Homeಮುಖಪುಟಇಸ್ರೇಲ್‌ ವೈಮಾನಿಕ ದಾಳಿಗೆ 'ಪ್ಯಾಲೆಸ್ತೀನ್‌ ಟಿವಿ' ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ...

ಇಸ್ರೇಲ್‌ ವೈಮಾನಿಕ ದಾಳಿಗೆ ‘ಪ್ಯಾಲೆಸ್ತೀನ್‌ ಟಿವಿ’ ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ ಬಲಿ

- Advertisement -
- Advertisement -

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಖಾನ್ ಯೂನಿಸ್ ನಗರದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಫೆಲೆಸ್ತೀನ್ ಚಾನೆಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್ ಮತ್ತು ಅವರ ಕುಟುಂಬದ 11 ಮಂದಿ ಸದಸ್ಯರು ಬಲಿಯಾಗಿದ್ದಾರೆ.

ಪ್ಯಾಲೆಸ್ತೀನ್‌ ಪ್ರಾಧಿಕಾರದ ಅಧೀನದಲ್ಲಿದ್ದ ‘ಪ್ಯಾಲೆಸ್ತೀನ್ ಟಿವಿ’ಯಲ್ಲಿ ಅಬು ಹತಾಬ್ ಕೆಲಸ ಮಾಡುತ್ತಿದ್ದರು. ಪ್ಯಾಲೆಸ್ತೀನ್‌ ಟಿವಿ, ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಬು ಹತಾಬ್‌ ಮತ್ತು ಕುಟುಂಬಸ್ಥರು ಮೃತಪಟ್ಟ ಬಗ್ಗೆ ವರದಿಯನ್ನು ಮಾಡಿದೆ. ಆದರೆ ಈ ಬಗ್ಗೆ ಇಸ್ರೇಲ್‌ ಮಿಲಿಟರಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮೃತ 11 ಮಂದಿಯಲ್ಲಿ ಅಬು ಹತಾಬ್ ಅವರ ಪತ್ನಿ, ಮಗ ಮತ್ತು ಸಹೋದರ ಸೇರಿದ್ದಾರೆ ಎಂದು ಪ್ಯಾಲೆಸ್ತೀನ್  ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಪತ್ರಕರ್ತರ ರಕ್ಷಣಾ ಸಮಿತಿಯು ಈ ಕುರಿತು ಪ್ರತಿಕ್ರಿಯಿಸಿದ್ದು, 1992ರ ಬಳಿಕ ಈ ಪ್ರದೇಶದಲ್ಲಿ ನಡೆದ ಯಾವುದೇ ಸಂಘರ್ಷಕ್ಕಿಂತ ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಪತ್ರಕರ್ತರ ಹತ್ಯೆ ನಡೆದಿದೆ ಎಂದು ದತ್ತಾಂಶಗಳನ್ನು ಉಲ್ಲೇಖಿಸಿ ಮಾಹಿತಿಯನ್ನು ನೀಡಿದೆ.

ವರದಿಯ ಪ್ರಕಾರ ಅ.7 ರಂದು ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾದ ಬಳಿಕ 36 ಪತ್ರಕರ್ತರ ಹತ್ಯೆ ನಡೆದಿದೆ. ಅವರಲ್ಲಿ 31 ಮಂದಿ ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್ ಪತ್ರಕರ್ತರು ಮತ್ತು ಓರ್ವ ಲೆಬನಾನಿನ ಪತ್ರಕರ್ತನ ಹತ್ಯೆ ನಡೆದಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿದೆ.

ಶುಕ್ರವಾರ ಅಬು ಹತಾಬ್ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಸಂಬಂಧಿಕರು, ಸ್ನೇಹಿತರು ಮತ್ತು ಪತ್ರಕರ್ತರು ಅಳುತ್ತಿರುವುದು ಮತ್ತು ಪ್ರಾರ್ಥಿಸುತ್ತಿರುವ ಪೋಟೋಗಳು ವೈರಲ್‌ ಆಗಿದೆ.

ಅ.13 ರಂದು ರಾಯಿಟರ್ಸ್‌ನ ಪತ್ರಕರ್ತ ಇಸ್ಸಾಮ್ ಅಬ್ದುಲ್ಲಾ ಅವರ ಹತ್ಯೆ ನಡೆದಿದೆ. ಇಸ್ರೇಲ್‌ ಸೇನೆಯು ಘಟನೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ. ಪತ್ರಕರ್ತರು ಯುದ್ಧ ವಲಯಗಳ ಬಳಿ ಇರುವುದು ಜೀವಕ್ಕೆ ತೀವ್ರ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದೆ.

ಕಳೆದ ವಾರ ರಾಯಿಟರ್ಸ್‌ಗೆ ಇಸ್ರೇಲ್‌ ಮಿಲಿಟರಿ ಪಡೆ ಪತ್ರ ಬರೆದಿದ್ದು, ಗಾಝಾದಲ್ಲಿನ ವರದಿಗಾರರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಏಕೆಂದರೆ ಹಮಾಸ್ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ನಾಗರಿಕರು ಮತ್ತು ಪತ್ರಕರ್ತರ ಮೇಲೆ ನಡೆಸುತ್ತಿದೆ ಎಂದು ಇಸ್ರೇಲ್‌ ನಡೆಸಿದ ಕೃತ್ಯವನ್ನು ಹಮಾಸ್‌ನ ಮೇಲೆ ಹೊರಿಸಲು ಮುಂದಾಗಿದೆ.

ಯುದ್ಧದ ದೈನಂದಿನ ಭೀಕರತೆಯನ್ನು ಜಗತ್ತಿಗೆ ತೋರಿಸುತ್ತಿದ್ದ ಗಾಝಾದಲ್ಲಿನ ಪತ್ರಕರ್ತರು ತಮ್ಮ ಜೀವನವನ್ನು ಅಥವಾ ಕುಟುಂಬಗಳನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರ ಕುಟುಂಬದ ಹಲವಾರು ಸದಸ್ಯರು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಇದಲ್ಲದೆ ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಅಲ್‌ ಜಝೀರಾ ಮಾದ್ಯಮದ ಬ್ರಾಡ್‌ ಕಾಸ್ಟಿಂಗ್ ಇಂಜಿನಿಯರ್‌ ಮೊಹಮದ್ ಅಬು ಅಲ್-ಕುಮ್ಸಾನ್ ಕುಟುಂಬದ 19 ಸದಸ್ಯರು ಸೇರಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...