Homeಮುಖಪುಟಇಸ್ರೇಲ್‌ ವೈಮಾನಿಕ ದಾಳಿಗೆ 'ಪ್ಯಾಲೆಸ್ತೀನ್‌ ಟಿವಿ' ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ...

ಇಸ್ರೇಲ್‌ ವೈಮಾನಿಕ ದಾಳಿಗೆ ‘ಪ್ಯಾಲೆಸ್ತೀನ್‌ ಟಿವಿ’ ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ ಬಲಿ

- Advertisement -
- Advertisement -

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಖಾನ್ ಯೂನಿಸ್ ನಗರದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಫೆಲೆಸ್ತೀನ್ ಚಾನೆಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್ ಮತ್ತು ಅವರ ಕುಟುಂಬದ 11 ಮಂದಿ ಸದಸ್ಯರು ಬಲಿಯಾಗಿದ್ದಾರೆ.

ಪ್ಯಾಲೆಸ್ತೀನ್‌ ಪ್ರಾಧಿಕಾರದ ಅಧೀನದಲ್ಲಿದ್ದ ‘ಪ್ಯಾಲೆಸ್ತೀನ್ ಟಿವಿ’ಯಲ್ಲಿ ಅಬು ಹತಾಬ್ ಕೆಲಸ ಮಾಡುತ್ತಿದ್ದರು. ಪ್ಯಾಲೆಸ್ತೀನ್‌ ಟಿವಿ, ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಬು ಹತಾಬ್‌ ಮತ್ತು ಕುಟುಂಬಸ್ಥರು ಮೃತಪಟ್ಟ ಬಗ್ಗೆ ವರದಿಯನ್ನು ಮಾಡಿದೆ. ಆದರೆ ಈ ಬಗ್ಗೆ ಇಸ್ರೇಲ್‌ ಮಿಲಿಟರಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮೃತ 11 ಮಂದಿಯಲ್ಲಿ ಅಬು ಹತಾಬ್ ಅವರ ಪತ್ನಿ, ಮಗ ಮತ್ತು ಸಹೋದರ ಸೇರಿದ್ದಾರೆ ಎಂದು ಪ್ಯಾಲೆಸ್ತೀನ್  ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಪತ್ರಕರ್ತರ ರಕ್ಷಣಾ ಸಮಿತಿಯು ಈ ಕುರಿತು ಪ್ರತಿಕ್ರಿಯಿಸಿದ್ದು, 1992ರ ಬಳಿಕ ಈ ಪ್ರದೇಶದಲ್ಲಿ ನಡೆದ ಯಾವುದೇ ಸಂಘರ್ಷಕ್ಕಿಂತ ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಪತ್ರಕರ್ತರ ಹತ್ಯೆ ನಡೆದಿದೆ ಎಂದು ದತ್ತಾಂಶಗಳನ್ನು ಉಲ್ಲೇಖಿಸಿ ಮಾಹಿತಿಯನ್ನು ನೀಡಿದೆ.

ವರದಿಯ ಪ್ರಕಾರ ಅ.7 ರಂದು ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾದ ಬಳಿಕ 36 ಪತ್ರಕರ್ತರ ಹತ್ಯೆ ನಡೆದಿದೆ. ಅವರಲ್ಲಿ 31 ಮಂದಿ ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್ ಪತ್ರಕರ್ತರು ಮತ್ತು ಓರ್ವ ಲೆಬನಾನಿನ ಪತ್ರಕರ್ತನ ಹತ್ಯೆ ನಡೆದಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿದೆ.

ಶುಕ್ರವಾರ ಅಬು ಹತಾಬ್ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಸಂಬಂಧಿಕರು, ಸ್ನೇಹಿತರು ಮತ್ತು ಪತ್ರಕರ್ತರು ಅಳುತ್ತಿರುವುದು ಮತ್ತು ಪ್ರಾರ್ಥಿಸುತ್ತಿರುವ ಪೋಟೋಗಳು ವೈರಲ್‌ ಆಗಿದೆ.

ಅ.13 ರಂದು ರಾಯಿಟರ್ಸ್‌ನ ಪತ್ರಕರ್ತ ಇಸ್ಸಾಮ್ ಅಬ್ದುಲ್ಲಾ ಅವರ ಹತ್ಯೆ ನಡೆದಿದೆ. ಇಸ್ರೇಲ್‌ ಸೇನೆಯು ಘಟನೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ. ಪತ್ರಕರ್ತರು ಯುದ್ಧ ವಲಯಗಳ ಬಳಿ ಇರುವುದು ಜೀವಕ್ಕೆ ತೀವ್ರ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದೆ.

ಕಳೆದ ವಾರ ರಾಯಿಟರ್ಸ್‌ಗೆ ಇಸ್ರೇಲ್‌ ಮಿಲಿಟರಿ ಪಡೆ ಪತ್ರ ಬರೆದಿದ್ದು, ಗಾಝಾದಲ್ಲಿನ ವರದಿಗಾರರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಏಕೆಂದರೆ ಹಮಾಸ್ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ನಾಗರಿಕರು ಮತ್ತು ಪತ್ರಕರ್ತರ ಮೇಲೆ ನಡೆಸುತ್ತಿದೆ ಎಂದು ಇಸ್ರೇಲ್‌ ನಡೆಸಿದ ಕೃತ್ಯವನ್ನು ಹಮಾಸ್‌ನ ಮೇಲೆ ಹೊರಿಸಲು ಮುಂದಾಗಿದೆ.

ಯುದ್ಧದ ದೈನಂದಿನ ಭೀಕರತೆಯನ್ನು ಜಗತ್ತಿಗೆ ತೋರಿಸುತ್ತಿದ್ದ ಗಾಝಾದಲ್ಲಿನ ಪತ್ರಕರ್ತರು ತಮ್ಮ ಜೀವನವನ್ನು ಅಥವಾ ಕುಟುಂಬಗಳನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರ ಕುಟುಂಬದ ಹಲವಾರು ಸದಸ್ಯರು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಇದಲ್ಲದೆ ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಅಲ್‌ ಜಝೀರಾ ಮಾದ್ಯಮದ ಬ್ರಾಡ್‌ ಕಾಸ್ಟಿಂಗ್ ಇಂಜಿನಿಯರ್‌ ಮೊಹಮದ್ ಅಬು ಅಲ್-ಕುಮ್ಸಾನ್ ಕುಟುಂಬದ 19 ಸದಸ್ಯರು ಸೇರಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...