Homeಮುಖಪುಟಇಸ್ರೇಲ್‌ ವೈಮಾನಿಕ ದಾಳಿಗೆ 'ಪ್ಯಾಲೆಸ್ತೀನ್‌ ಟಿವಿ' ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ...

ಇಸ್ರೇಲ್‌ ವೈಮಾನಿಕ ದಾಳಿಗೆ ‘ಪ್ಯಾಲೆಸ್ತೀನ್‌ ಟಿವಿ’ ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ ಬಲಿ

- Advertisement -
- Advertisement -

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಖಾನ್ ಯೂನಿಸ್ ನಗರದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಫೆಲೆಸ್ತೀನ್ ಚಾನೆಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್ ಮತ್ತು ಅವರ ಕುಟುಂಬದ 11 ಮಂದಿ ಸದಸ್ಯರು ಬಲಿಯಾಗಿದ್ದಾರೆ.

ಪ್ಯಾಲೆಸ್ತೀನ್‌ ಪ್ರಾಧಿಕಾರದ ಅಧೀನದಲ್ಲಿದ್ದ ‘ಪ್ಯಾಲೆಸ್ತೀನ್ ಟಿವಿ’ಯಲ್ಲಿ ಅಬು ಹತಾಬ್ ಕೆಲಸ ಮಾಡುತ್ತಿದ್ದರು. ಪ್ಯಾಲೆಸ್ತೀನ್‌ ಟಿವಿ, ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಬು ಹತಾಬ್‌ ಮತ್ತು ಕುಟುಂಬಸ್ಥರು ಮೃತಪಟ್ಟ ಬಗ್ಗೆ ವರದಿಯನ್ನು ಮಾಡಿದೆ. ಆದರೆ ಈ ಬಗ್ಗೆ ಇಸ್ರೇಲ್‌ ಮಿಲಿಟರಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮೃತ 11 ಮಂದಿಯಲ್ಲಿ ಅಬು ಹತಾಬ್ ಅವರ ಪತ್ನಿ, ಮಗ ಮತ್ತು ಸಹೋದರ ಸೇರಿದ್ದಾರೆ ಎಂದು ಪ್ಯಾಲೆಸ್ತೀನ್  ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಪತ್ರಕರ್ತರ ರಕ್ಷಣಾ ಸಮಿತಿಯು ಈ ಕುರಿತು ಪ್ರತಿಕ್ರಿಯಿಸಿದ್ದು, 1992ರ ಬಳಿಕ ಈ ಪ್ರದೇಶದಲ್ಲಿ ನಡೆದ ಯಾವುದೇ ಸಂಘರ್ಷಕ್ಕಿಂತ ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಪತ್ರಕರ್ತರ ಹತ್ಯೆ ನಡೆದಿದೆ ಎಂದು ದತ್ತಾಂಶಗಳನ್ನು ಉಲ್ಲೇಖಿಸಿ ಮಾಹಿತಿಯನ್ನು ನೀಡಿದೆ.

ವರದಿಯ ಪ್ರಕಾರ ಅ.7 ರಂದು ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾದ ಬಳಿಕ 36 ಪತ್ರಕರ್ತರ ಹತ್ಯೆ ನಡೆದಿದೆ. ಅವರಲ್ಲಿ 31 ಮಂದಿ ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್ ಪತ್ರಕರ್ತರು ಮತ್ತು ಓರ್ವ ಲೆಬನಾನಿನ ಪತ್ರಕರ್ತನ ಹತ್ಯೆ ನಡೆದಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿದೆ.

ಶುಕ್ರವಾರ ಅಬು ಹತಾಬ್ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಸಂಬಂಧಿಕರು, ಸ್ನೇಹಿತರು ಮತ್ತು ಪತ್ರಕರ್ತರು ಅಳುತ್ತಿರುವುದು ಮತ್ತು ಪ್ರಾರ್ಥಿಸುತ್ತಿರುವ ಪೋಟೋಗಳು ವೈರಲ್‌ ಆಗಿದೆ.

ಅ.13 ರಂದು ರಾಯಿಟರ್ಸ್‌ನ ಪತ್ರಕರ್ತ ಇಸ್ಸಾಮ್ ಅಬ್ದುಲ್ಲಾ ಅವರ ಹತ್ಯೆ ನಡೆದಿದೆ. ಇಸ್ರೇಲ್‌ ಸೇನೆಯು ಘಟನೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ. ಪತ್ರಕರ್ತರು ಯುದ್ಧ ವಲಯಗಳ ಬಳಿ ಇರುವುದು ಜೀವಕ್ಕೆ ತೀವ್ರ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದೆ.

ಕಳೆದ ವಾರ ರಾಯಿಟರ್ಸ್‌ಗೆ ಇಸ್ರೇಲ್‌ ಮಿಲಿಟರಿ ಪಡೆ ಪತ್ರ ಬರೆದಿದ್ದು, ಗಾಝಾದಲ್ಲಿನ ವರದಿಗಾರರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಏಕೆಂದರೆ ಹಮಾಸ್ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ನಾಗರಿಕರು ಮತ್ತು ಪತ್ರಕರ್ತರ ಮೇಲೆ ನಡೆಸುತ್ತಿದೆ ಎಂದು ಇಸ್ರೇಲ್‌ ನಡೆಸಿದ ಕೃತ್ಯವನ್ನು ಹಮಾಸ್‌ನ ಮೇಲೆ ಹೊರಿಸಲು ಮುಂದಾಗಿದೆ.

ಯುದ್ಧದ ದೈನಂದಿನ ಭೀಕರತೆಯನ್ನು ಜಗತ್ತಿಗೆ ತೋರಿಸುತ್ತಿದ್ದ ಗಾಝಾದಲ್ಲಿನ ಪತ್ರಕರ್ತರು ತಮ್ಮ ಜೀವನವನ್ನು ಅಥವಾ ಕುಟುಂಬಗಳನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರ ಕುಟುಂಬದ ಹಲವಾರು ಸದಸ್ಯರು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಇದಲ್ಲದೆ ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಅಲ್‌ ಜಝೀರಾ ಮಾದ್ಯಮದ ಬ್ರಾಡ್‌ ಕಾಸ್ಟಿಂಗ್ ಇಂಜಿನಿಯರ್‌ ಮೊಹಮದ್ ಅಬು ಅಲ್-ಕುಮ್ಸಾನ್ ಕುಟುಂಬದ 19 ಸದಸ್ಯರು ಸೇರಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...