Homeಮುಖಪುಟಇಸ್ರೇಲ್‌ ವೈಮಾನಿಕ ದಾಳಿಗೆ 'ಪ್ಯಾಲೆಸ್ತೀನ್‌ ಟಿವಿ' ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ...

ಇಸ್ರೇಲ್‌ ವೈಮಾನಿಕ ದಾಳಿಗೆ ‘ಪ್ಯಾಲೆಸ್ತೀನ್‌ ಟಿವಿ’ ವರದಿಗಾರ ಅಬು ಹತಾಬ್ ಸೇರಿ ಕುಟುಂಬದ 12 ಮಂದಿ ಬಲಿ

- Advertisement -
- Advertisement -

ದಕ್ಷಿಣ ಗಾಝಾ ಪಟ್ಟಿಯಲ್ಲಿರುವ ಖಾನ್ ಯೂನಿಸ್ ನಗರದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಫೆಲೆಸ್ತೀನ್ ಚಾನೆಲ್‌ನ ವರದಿಗಾರ ಮೊಹಮ್ಮದ್ ಅಬು ಹತಾಬ್ ಮತ್ತು ಅವರ ಕುಟುಂಬದ 11 ಮಂದಿ ಸದಸ್ಯರು ಬಲಿಯಾಗಿದ್ದಾರೆ.

ಪ್ಯಾಲೆಸ್ತೀನ್‌ ಪ್ರಾಧಿಕಾರದ ಅಧೀನದಲ್ಲಿದ್ದ ‘ಪ್ಯಾಲೆಸ್ತೀನ್ ಟಿವಿ’ಯಲ್ಲಿ ಅಬು ಹತಾಬ್ ಕೆಲಸ ಮಾಡುತ್ತಿದ್ದರು. ಪ್ಯಾಲೆಸ್ತೀನ್‌ ಟಿವಿ, ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಬು ಹತಾಬ್‌ ಮತ್ತು ಕುಟುಂಬಸ್ಥರು ಮೃತಪಟ್ಟ ಬಗ್ಗೆ ವರದಿಯನ್ನು ಮಾಡಿದೆ. ಆದರೆ ಈ ಬಗ್ಗೆ ಇಸ್ರೇಲ್‌ ಮಿಲಿಟರಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮೃತ 11 ಮಂದಿಯಲ್ಲಿ ಅಬು ಹತಾಬ್ ಅವರ ಪತ್ನಿ, ಮಗ ಮತ್ತು ಸಹೋದರ ಸೇರಿದ್ದಾರೆ ಎಂದು ಪ್ಯಾಲೆಸ್ತೀನ್  ಸುದ್ದಿ ಸಂಸ್ಥೆ ವಫಾ ವರದಿ ಮಾಡಿದೆ.

ಪತ್ರಕರ್ತರ ರಕ್ಷಣಾ ಸಮಿತಿಯು ಈ ಕುರಿತು ಪ್ರತಿಕ್ರಿಯಿಸಿದ್ದು, 1992ರ ಬಳಿಕ ಈ ಪ್ರದೇಶದಲ್ಲಿ ನಡೆದ ಯಾವುದೇ ಸಂಘರ್ಷಕ್ಕಿಂತ ಇದೇ ಮೊದಲ ಬಾರಿಗೆ ದೊಡ್ಡ ಸಂಖ್ಯೆಯಲ್ಲಿ ಪತ್ರಕರ್ತರ ಹತ್ಯೆ ನಡೆದಿದೆ ಎಂದು ದತ್ತಾಂಶಗಳನ್ನು ಉಲ್ಲೇಖಿಸಿ ಮಾಹಿತಿಯನ್ನು ನೀಡಿದೆ.

ವರದಿಯ ಪ್ರಕಾರ ಅ.7 ರಂದು ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಆರಂಭವಾದ ಬಳಿಕ 36 ಪತ್ರಕರ್ತರ ಹತ್ಯೆ ನಡೆದಿದೆ. ಅವರಲ್ಲಿ 31 ಮಂದಿ ಪ್ಯಾಲೆಸ್ತೀನಿಯನ್ನರು, ನಾಲ್ವರು ಇಸ್ರೇಲ್ ಪತ್ರಕರ್ತರು ಮತ್ತು ಓರ್ವ ಲೆಬನಾನಿನ ಪತ್ರಕರ್ತನ ಹತ್ಯೆ ನಡೆದಿದೆ ಎಂದು ದತ್ತಾಂಶಗಳು ಬಹಿರಂಗಪಡಿಸಿದೆ.

ಶುಕ್ರವಾರ ಅಬು ಹತಾಬ್ ಅವರ ಅಂತ್ಯಕ್ರಿಯೆ ನಡೆದಿದ್ದು, ಈ ವೇಳೆ ಸಂಬಂಧಿಕರು, ಸ್ನೇಹಿತರು ಮತ್ತು ಪತ್ರಕರ್ತರು ಅಳುತ್ತಿರುವುದು ಮತ್ತು ಪ್ರಾರ್ಥಿಸುತ್ತಿರುವ ಪೋಟೋಗಳು ವೈರಲ್‌ ಆಗಿದೆ.

ಅ.13 ರಂದು ರಾಯಿಟರ್ಸ್‌ನ ಪತ್ರಕರ್ತ ಇಸ್ಸಾಮ್ ಅಬ್ದುಲ್ಲಾ ಅವರ ಹತ್ಯೆ ನಡೆದಿದೆ. ಇಸ್ರೇಲ್‌ ಸೇನೆಯು ಘಟನೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ. ಪತ್ರಕರ್ತರು ಯುದ್ಧ ವಲಯಗಳ ಬಳಿ ಇರುವುದು ಜೀವಕ್ಕೆ ತೀವ್ರ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದೆ.

ಕಳೆದ ವಾರ ರಾಯಿಟರ್ಸ್‌ಗೆ ಇಸ್ರೇಲ್‌ ಮಿಲಿಟರಿ ಪಡೆ ಪತ್ರ ಬರೆದಿದ್ದು, ಗಾಝಾದಲ್ಲಿನ ವರದಿಗಾರರ ಸುರಕ್ಷತೆಯನ್ನು ಖಾತರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಏಕೆಂದರೆ ಹಮಾಸ್ ತನ್ನ ಮಿಲಿಟರಿ ಕಾರ್ಯಾಚರಣೆಗಳನ್ನು ನಾಗರಿಕರು ಮತ್ತು ಪತ್ರಕರ್ತರ ಮೇಲೆ ನಡೆಸುತ್ತಿದೆ ಎಂದು ಇಸ್ರೇಲ್‌ ನಡೆಸಿದ ಕೃತ್ಯವನ್ನು ಹಮಾಸ್‌ನ ಮೇಲೆ ಹೊರಿಸಲು ಮುಂದಾಗಿದೆ.

ಯುದ್ಧದ ದೈನಂದಿನ ಭೀಕರತೆಯನ್ನು ಜಗತ್ತಿಗೆ ತೋರಿಸುತ್ತಿದ್ದ ಗಾಝಾದಲ್ಲಿನ ಪತ್ರಕರ್ತರು ತಮ್ಮ ಜೀವನವನ್ನು ಅಥವಾ ಕುಟುಂಬಗಳನ್ನು ಕಳೆದುಕೊಳ್ಳುವಂತಹ ಪರಿಸ್ಥಿತಿ ಉಂಟಾಗಿದೆ. ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರ ಕುಟುಂಬದ ಹಲವಾರು ಸದಸ್ಯರು ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಇದಲ್ಲದೆ ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್‌ ನಡೆಸಿದ ದಾಳಿಯಲ್ಲಿ ಅಲ್‌ ಜಝೀರಾ ಮಾದ್ಯಮದ ಬ್ರಾಡ್‌ ಕಾಸ್ಟಿಂಗ್ ಇಂಜಿನಿಯರ್‌ ಮೊಹಮದ್ ಅಬು ಅಲ್-ಕುಮ್ಸಾನ್ ಕುಟುಂಬದ 19 ಸದಸ್ಯರು ಸೇರಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.

ಇದನ್ನು ಓದಿ: ಗಾಝಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಅಲ್ ಜಝೀರಾ ಸಿಬ್ಬಂದಿಯ ಕುಟುಂಬದ 19 ಮಂದಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...