Homeಅಂತರಾಷ್ಟ್ರೀಯಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ

ಗಾಝಾ ನಗರದಲ್ಲಿ ಆಕ್ರಮಣ ವಿಸ್ತರಿಸಿದ ಇಸ್ರೇಲ್: ಅಸಹಾಯಕ ನಾಗರಿಕರಿಂದ ಮಹಾ ಪಲಾಯನ

- Advertisement -
- Advertisement -

ಜಾಗತಿಕ ಆಕ್ರೋಶದ ನಡುವೆಯೂ ಮಂಗಳವಾರದಿಂದ (ಸೆ.16) ಇಸ್ರೇಲ್ ತನ್ನ ನೆಲದ ಆಕ್ರಮಣವನ್ನು ( Ground Assault) ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ವಿಸ್ತರಿಸಿದೆ. ಅಮಾಯಕ ನಾಗರಿಕರು ತಮ್ಮದೆಲ್ಲವನ್ನು ಬಿಟ್ಟು ಜೀವ ಉಳಿಸಿಕೊಳ್ಳಲು ಮಹಾ ಪಲಾಯನ ಹೊರಟಿದ್ದಾರೆ ಎಂದು ವರದಿಯಾಗಿದೆ.

ಈ ಹಿಂದೆ ಹೇಳಿಕೊಂಡಂತೆ ಗಾಝಾ ನಗರದ ಹೊರವಲಯದಿಂದ ಇಸ್ರೇಲ್ ತನ್ನ ಆಕ್ರಮಣ ಪ್ರಾರಂಭಿಸಿದೆ. ಅಲ್ಲಿ ಇಸ್ರೇಲ್ ಸೇನೆಯು ಕಳೆದ ಕೆಲ ದಿನಗಳಿಂದ ವೈಮಾನಿಕ ದಾಳಿ ಮೂಲಕ ಎತ್ತರದ ಗೋಪುರಗಳ ನಾಶವನ್ನು ಚುರುಕುಗೊಳಿಸಿತ್ತು.

“ಗಾಝಾ ಹೊತ್ತಿ ಉರಿಯುತ್ತಿದೆ” ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) “ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡುತ್ತಿವೆ. ಹಮಾಸ್ ಅನ್ನು ಸೋಲಿಸಿ ಒತ್ತೆಯಾಳುಗಳ ಬಿಡುಗಡೆಗೆ ಶ್ರಮಿಸುತ್ತಿವೆ” ಎಂದಿದ್ದಾರೆ.

ಗಾಝಾ ನಗರದ ಮೇಲೆ ದಾಳಿ ಮಾಡುತ್ತಿರುವ ಇಸ್ರೇಲ್ ಯುದ್ಧದ ‘ನಿರ್ಣಾಯಕ ಹಂತದಲ್ಲಿದೆ’ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದು, ಈಗ ದಾಳಿ ಶುರು ಮಾಡಿರುವ ಪ್ರದೇಶ ಹಮಾಸ್‌ನ ಕೊನೆಯ ಭದ್ರಕೋಟೆಗಳಲ್ಲಿ ಒಂದೆಂದು ಸರ್ಕಾರ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಇಸ್ರೇಲ್ ಹೊಸದಾಗಿ ಶುರು ಮಾಡಿರುವ ಆಕ್ರಮಣ, ಈಗಾಗಲೇ ಹದೆಗೆಟ್ಟಿರುವ ಗಾಝಾದ ಪರಿಸ್ಥಿತಿಯನ್ನು ಇನ್ನಷ್ಟು ಭೀಕರವಾಗಿಸಲಿದೆ ಎಂದು ವಿಶ್ವಸಂಸ್ಥೆ ಸೇರಿದಂತೆ ಇನ್ನಿತರ ಮಾನವ ಹಕ್ಕು ಸಂಸ್ಥೆಗಳು ಎಚ್ಚರಿಸಿವೆ.

“ಸಾವಿರಾರು ಜನರನ್ನು ಬಾಂಬ್ ಮತ್ತು ಬಂದೂಕು ತೋರಿಸಿ ಹೆದರಿಸುವ ಮೂಲಕ ಅವರ ಸ್ವಂತ ಊರುಗಳಿಂದ ಓಡಿಸಲಾಗುತ್ತಿದೆ. ಇದು ಕಳೆದ ಎರಡು ವರ್ಷಗಳಲ್ಲಿ ಇಸ್ರೇಲ್ ನಡೆಸಿದ ದಾಳಿಗಳಲ್ಲಿ ಇದು ‘ಭಯಾನಕವಾದುದು’ ಎಂದು ವಿಶ್ವಸಂಸ್ಥೆಯ ಮುಖ್ಯಸ್ಥರು ಹೇಳಿದ್ದಾರೆ.

ಮಂಗಳವಾರ ಇಸ್ರೇಲ್ ಸೇನಾ ಅಧಿಕಾರಿಯೊಬ್ಬರು ಅಂದಾಜು 350,000 ಜನರು ಗಾಝಾ ನಗರದಿಂದ ಪಲಾಯನ ಮಾಡಿದ್ದಾರೆ ಎಂದಿದ್ದಾರೆ. ಆದರೆ, ಗಾಝಾದ ಸರ್ಕಾರಿ ಮಾಧ್ಯಮ ಕಚೇರಿಯ ಪ್ರಕಾರ, 350,000 ಜನರು ನಗರದ ಮಧ್ಯಭಾಗ ಮತ್ತು ಪಶ್ಚಿಮಕ್ಕೆ ಸ್ಥಳಾಂತರಗೊಂಡಿದ್ದಾರೆ, 190,000 ಜನರು ಸಂಪೂರ್ಣವಾಗಿ ಗಾಝಾ ನಗರ ತೊರೆದಿದ್ದಾರೆ ಎಂದು ವರದಿಯಾಗಿದೆ.

ಜನರು ಪಲಾಯನ ಮಾಡುತ್ತಿದ್ದಂತೆ, ಇಸ್ರೇಲ್ ಸೇನೆಯು ವೈಮಾನಿಕ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಹೆಚ್ಚಿನ ಸಂಖ್ಯೆಯ ಯುದ್ಧ ಟ್ಯಾಂಕ್‌ಗಳು ಮತ್ತು ಇತರ ಶಸ್ತ್ರಸಜ್ಜಿತ ವಾಹನಗಳು ಗಾಝಾ ನಗರದೊಳಗೆ ನುಗ್ಗುತ್ತಿರುವುದನ್ನು ನೋಡಬಹುದು.

ಸಂಪೂರ್ಣ ಗಾಝಾ ನಗರವನ್ನು ತಮ್ಮ ನಿಯಂತ್ರಣಕ್ಕೆ ಪಡೆಯಲು ‘ಹಲವಾರು ತಿಂಗಳುಗಳು’ ಬೇಕಾಗುತ್ತದೆ ಎಂದು ಇಸ್ರೇಲಿ ಸೇನೆ ಮಂಗಳವಾರ ಒಪ್ಪಿಕೊಂಡಿದೆ. “ಎಷ್ಟೇ ಸಮಯ ತೆಗೆದುಕೊಂಡರೂ ಪರವಾಗಿಲ್ಲ, ನಾವು ಗಾಝಾದಲ್ಲಿ ಕಾರ್ಯಾಚರಣೆ ನಡೆಸುತ್ತೇವೆ” ಎಂದು ಇಸ್ರೇಲ್ ಸೇನಾ ವಕ್ತಾರ ಎಫೀ ಡೆಫ್ರಿನ್ ಹೇಳಿದ್ದಾರೆ.

“ಗಾಝಾ ಪಟ್ಟಿಯ ಕೆಲವು ಭಾಗಗಳನ್ನು ಅಧಿಕೃತವಾಗಿ ಬರಗಾಲ ಪೀಡಿತವೆಂದು ಘೋಷಿಸಲಾಗಿದೆ. ಸುಮಾರು ಒಂದು ಮಿಲಿಯನ್ ಜನರು (ಈ ಪ್ರದೇಶದ ಜನಸಂಖ್ಯೆಯ ಅರ್ಧದಷ್ಟು) ಗಾಝಾ ನಗರ ಮತ್ತು ಸುತ್ತಮುತ್ತ ವಾಸಿಸುತ್ತಿದ್ದಾರೆ. ಇಸ್ರೇಲ್ ಸ್ಥಳೀಯ ಜನರನ್ನು ಸ್ಥಳಾಂತರಗೊಳ್ಳುವಂತೆ ಒತ್ತಾಯಿಸಲು ಪ್ರಯತ್ನಿಸುತ್ತಿದೆ. ಆದರೆ, ಐಡಿಎಫ್ ಹೇಳುವಂತೆ ಇಲ್ಲಿಯವರೆಗೆ ಕೇವಲ 40% ಜನರು ಮಾತ್ರ ಹೊರಟು ಹೋಗಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿಯಿಲ್ಲ” ಎಂದು ಸುದ್ದಿ ಸಂಸ್ಥೆ ಸಿಎನ್‌ಎನ್‌ ವರದಿ ಮಾಡಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚುತ್ತಿರುವ ಖಂಡನೆ ಮತ್ತು ತಮ್ಮದೇ ಆದ ಭದ್ರತಾ ಅಧಿಕಾರಿಗಳ ಕಳವಳಗಳ ಹೊರತಾಗಿಯೂ, ಕಾರ್ಯಾಚರಣೆಯನ್ನು ಮುಂದುವರಿಸುವ ನೆತನ್ಯಾಹು ಅವರ ನಿರ್ಧಾರವು, ಜಾಗತಿಕ ಒತ್ತಡವನ್ನು ಧಿಕ್ಕರಿಸಿ ತಮ್ಮ ಷರತ್ತುಗಳ ಮೇಲೆ ಯುದ್ಧವನ್ನು ಮುಂದುವರಿಸುವ ಅವರ ಇಚ್ಛೆಯನ್ನು ಒತ್ತಿಹೇಳುತ್ತದೆ ಎಂದು ವರದಿ ವಿವರಿಸಿದೆ.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯು ನಿಯೋಜಿಸಿದ ಸ್ವತಂತ್ರ ತಜ್ಞರ ತಂಡವು ಇಸ್ರೇಲ್ ಗಾಝಾದಲ್ಲಿ ನರಮೇಧ ನಡೆಸುತ್ತಿದೆ ಎಂದು ಹೇಳಿದ್ದು, ಮಂಗಳವಾರ (ಸೆ.16) ಈ ಕುರಿತು ವರದಿ ಬಿಡುಗಡೆ ಮಾಡಿದೆ. ಅಂತಾರಾಷ್ಟ್ರೀಯ ಸಮುದಾಯವು ನರಮೇಧವನ್ನು ಕೊನೆಗೊಳಿಸಬೇಕು ಮತ್ತು ಅದಕ್ಕೆ ಕಾರಣರಾದವರನ್ನು ಶಿಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.

ಈ “ವಿಕೃತ ಮತ್ತು ಸುಳ್ಳು ವರದಿಯನ್ನು ಸ್ಪಷ್ಟವಾಗಿ ತಿರಸ್ಕರಿಸುತ್ತೇವೆ” ಎಂದು ಇಸ್ರೇಲ್ ಪ್ರತಿಕ್ರಿಯಿಸಿದೆ. ವಿಶ್ವಸಂಸ್ಥೆ ತಜ್ಞರ ತಂಡವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿದೆ.

2023ರಲ್ಲಿ ಇಸ್ರೇಲ್ ಆಕ್ರಮಣ ಪ್ರಾರಂಭಿಸಿದ ಬಳಿಕ ಗಾಝಾ ಪಟ್ಟಿಯ ರಫಾ ಮತ್ತು ಖಾನ್ ಯೂನಿಸ್‌ ನಗರಗಳು ಸಂಪೂರ್ಣ ನಾಶವಾಗಿವೆ. ಆದರೆ, ಅತಿದೊಡ್ಡ ನಗರ ಮತ್ತು ಆರ್ಥಿಕ ಕೇಂದ್ರವಾದ ಗಾಝಾ ನಗರದ ಮೇಲೆ ದೊಡ್ಡ ಪ್ರಮಾಣದ ಹಾನಿ ಆಗಿರಲಿಲ್ಲ. ಇದೀಗ ಇಸ್ರೇಲ್‌ ಗಾಝಾ ನಗರದಲ್ಲೂಆಕ್ರಮಣ ವಿಸ್ತರಿಸಿರುವ ಹಿನ್ನೆಲೆ ಆತಂಕ ಹೆಚ್ಚಾಗಿದೆ. ಅಮಾಯಕ ನಾಗರಿಕರಿಗೆ ದಿಕ್ಕೇ ತೋಚದಂತಾಗಿದೆ ಎಂದು ವರದಿಗಳು ಹೇಳಿವೆ.

ಮಂಗಳವಾರ, ಉತ್ತರ ಗಾಝಾವೊಂದರಲ್ಲೇ ಕನಿಷ್ಠ 93 ಪ್ಯಾಲೆಸ್ತೀನಿಯರನ್ನು ಇಸ್ರೇಲ್ ಹತ್ಯೆಗೈದಿದೆ. ಗಾಝಾದ ಆರೋಗ್ಯ ಸಚಿವಾಲಯ ಮತ್ತು ಆಸ್ಪತ್ರೆ ಅಧಿಕಾರಿಗಳ ಪ್ರಕಾರ, ಸಂಪೂರ್ಣ ಪ್ರದೇಶದಲ್ಲಿ 100ಕ್ಕೂ ಹೆಚ್ಚು ಜನರು ಮಂಗಳವಾರ ಸಾವನ್ನಪ್ಪಿದ್ದಾರೆ.

ಮಂಗಳವಾರ ರಾತ್ರಿಯಿಡೀ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಿಂದ ತತ್ತರಿಸಿದ ಗಾಝಾ ನಗರ ನಿವಾಸಿಗಳು, ಅಳಿದುಳಿದ ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪಲಾಯನ ಹೊರಟಿದ್ದಾರೆ ಎಂದು ಸಿಎನ್‌ಎನ್‌ ತನ್ನ ವರದಿಯಲ್ಲಿ ವಿವರಿಸಿದೆ.

ಗಾಝಾ ನಗರದ ಶೇಖ್ ರಾದ್ವಾನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಸ್ರೇಲ್‌ ದಾಳಿಯಿಂದ ಕೆಲ ಮನೆಗಳು ಭಾಗಶಃ ಇನ್ನು ಕೆಲವು ಸಂಪೂರ್ಣ ನಾಶವಾಗಿವೆ. ಜನರು ತಮ್ಮ ಚೀಲ, ಕಂಬಳಿಗಳನ್ನು ಹೊತ್ತುಕೊಂಡು ಆಶ್ರಯ ಹುಡುಕುತ್ತಾ ಕಟ್ಟಡಗಳ ಅವಶೇಷಗಳ ನಡುವೆ ದಕ್ಷಿಣದತ್ತ ಸಾಗುತ್ತಿರುವ ದೃಶ್ಯಾವಳಿಗಳನ್ನು ಸಿಎನ್ಎನ್ ತೋರಿಸಿದೆ.

ಇಸ್ರೇಲಿ ಡ್ರೋನ್‌ಗಳು ಜನರ ತಲೆಮೇಲೆ ಹಾರಾಡುತ್ತಿವೆ. ಮಂಗಳವಾರ ರಾತ್ರಿಯ ದಾಳಿ ಇದುವರೆಗೆ ಕಂಡ ಅತ್ಯಂತ ಭೀಕರ ದಾಳಿಗಳಲ್ಲಿ ಒಂದು ಎಂದು ಗಾಝಾ ನಗರದ ಸ್ಥಳೀಯರು ಹೇಳಿದ್ದಾರೆ ಎಂದು ಸಿಎನ್‌ಎನ್‌ ವರದಿ ವಿವರಿಸಿದೆ.

ಆಗಸ್ಟ್ ಆರಂಭದಲ್ಲಿ ಇಸ್ರೇಲ್‌ನ ಭದ್ರತಾ ಸಂಪುಟ ಅನುಮೋದಿಸಿದ ಕಾರ್ಯಾಚರಣೆಯ ಯೋಜನೆಯ ಪ್ರಕಾರ, ಇಸ್ರೇಲ್ ಪ್ಯಾಲೆಸ್ತೀನ್ ಜನರನ್ನು ಅಲ್-ಮವಾಸಿ ಪ್ರದೇಶಕ್ಕೆ ಸ್ಥಳಾಂತರಿಸಿದ ನಂತರವೇ ಗಾಝಾ ನಗರದ ಮೇಲಿನ ದಾಳಿ ಪ್ರಾರಂಭವಾಗಬೇಕಿತ್ತು. ಆದರೆ, ಜನರು ಸ್ಥಳಾಂತರಕ್ಕೆ ನಿರಾಕರಿಸಿದ್ದಾರೆ. ಇಸ್ರೇಲ್ ಜರನ್ನು ಸ್ಥಳಾಂತರಿಸದೆ ದಾಳಿ ಶುರು ಮಾಡಿದೆ.

ಅಲ್ಲದೆ, ಅಮೆರಿಕ ಬೆಂಬಲಿತ ವಿವಾದಾತ್ಮಕ ‘ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್ (ಜಿಎಚ್‌ಎಫ್‌) ನಡೆಸುತ್ತಿರುವ ನೆರವು ಸೌಲಭ್ಯಗಳ ಸಂಖ್ಯೆಯನ್ನು ಇಸ್ರೇಲ್ ಒಟ್ಟು 16 ತಾಣಗಳಿಗೆ ವಿಸ್ತರಿಸಬೇಕಿತ್ತು. ಆದರೆ ಈಗ ಕೇವಲ ಐದು ಸ್ಥಳಗಳಲ್ಲಿ ಮಾತ್ರ ನೆರವು ಕೇಂದ್ರಗಳು ತೆರೆದಿವೆ. ಈ ಮೂಲಕ ಪ್ಯಾಲೆಸ್ತೀನಿಯರು ತೀರಾ ಅಗತ್ಯವಿರುವ ಆಹಾರ ಮತ್ತು ಸಹಾಯವನ್ನು ಪಡೆಯಲು ಗಂಟೆಗಟ್ಟಲೆ ನಡೆಯುವಂತೆ ಮಾಡಿದೆ.

ಮಧ್ಯ ಮತ್ತು ಉತ್ತರ ಗಾಝಾದಾದ್ಯಂತ, ಪ್ಯಾಲೆಸ್ತೀನಿಯರು ತಮ್ಮ ಕೈಲಾದಷ್ಟು ವಸ್ತುಗಳನ್ನು ತುಂಬಿಕೊಂಡು ಸುರಕ್ಷಿತ ಸ್ಥಳಕ್ಕಾಗಿ ಹತಾಶ ಹುಡುಕಾಟದಲ್ಲಿ ಪಲಾಯನ ಮಾಡುತ್ತಿದ್ದಾರೆ. ಇದು ಅನೇಕರಿಗೆ ಮೊದಲ ಸ್ಥಳಾಂತರವಲ್ಲ. ಜನರು ಆಸರೆ ಹುಡುಕಿಕೊಂಡು ದಕ್ಷಿಣಕ್ಕೆ ಹೊರಟ ಹಿನ್ನೆಲೆ ಅಲ್-ರಶೀದ್ ಸ್ಟ್ರೀಟ್ ಕರಾವಳಿ ಹೆದ್ದಾರಿಯು ಮಂಗಳವಾರ ಜನಸಂದಣಿಯಿಂದ ತುಂಬಿತ್ತು ಎಂದು ಸಿಎನ್‌ಎನ್‌ ವರದಿ ಹೇಳಿದೆ.

ಪ್ಯಾಲೆಸ್ತೀನ್ ಪ್ರಾಧಿಕಾರ (ಪಿಎ) ಜಾಗತಿಕ ರಾಷ್ಟ್ರಗಳ ಮಧ್ಯಪ್ರವೇಶಕ್ಕೆ ಮನವಿ ಮಾಡಿದೆ. ಅಮೆರಿಕ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿದೆ. “ಇಡೀ ಜಗತ್ತು ಆಕ್ರಮಣದ ವಿಸ್ತರಣೆಯನ್ನು ತಿರಸ್ಕರಿಸಿದೆ. ಇದು ಮಾನವೀಯತೆಯ ವಿರುದ್ಧದ ಯುದ್ಧ ಅಪರಾಧವೆಂದು ಪರಿಗಣಿಸಿದೆ. ಇಸ್ರೇಲ್‌ನ ವಿಸ್ತರಿತ ಆಕ್ರಮಣ ಗಾಝಾ ನಗರ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆ ಮತ್ತು ಅಸ್ಥಿರತೆಗೆ ಕಾರಣವಾಗುತ್ತದೆ” ಎಂದು ಪಿಎ ಅಧ್ಯಕ್ಷರ ವಕ್ತಾರ ನಬಿಲ್ ಅಬು ರುಡೈನೆಹ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಮಾಸ್ ಗಾಝಾ ನಗರದ ಮೇಲಿನ ದಾಳಿಯನ್ನು ‘ಅನಾಗರಿಕ ಝಿಯೋನಿಷ್ಟ್ ಆಕ್ರಮಣ’ ಎಂದು ಕರೆದಿದೆ. ಈ ಮೂಲಕ ಇಸ್ರೇಲ್ “ಎಲ್ಲಾ ರೀತಿಯ ಅಂತಾರಾಷ್ಟ್ರೀಯ ನಿಯಮಗಳು ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ” ಎಂದಿದೆ.

ಎರಡು ವರ್ಷಗಳ ನಿರಂತರ ಆಕ್ರಮಣದ ಮೂಲಕ ಇಸ್ರೇಲ್ ಕನಿಷ್ಠ 64,964 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ ಎಂದು ಅಲ್‌-ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದೆ ಎಂದ ವಿಶ್ವಸಂಸ್ಥೆಯ ವರದಿ: ಜಾಗತಿಕ ಕ್ರಮಕ್ಕೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...