Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...