Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...