Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...