Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...