Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೇರಿಕಾದಲ್ಲಿ ಅದಾನಿ ಮತ್ತು ಆಪ್ತರ ಮೇಲಿನ ಕ್ರಿಮಿನಲ್ ಕೇಸ್ ರದ್ದು: ‘ರಾಜಿ ಮಾಡಿಕೊಂಡ ಪ್ರಧಾನಿ ಭಾರತದ ಹಿತಾಸಕ್ತಿ ಮಾರಾಟ ಮಾಡಿದ್ದಾರೆ’ ಎಂದ ರಾಹುಲ್ ಗಾಂಧಿ 

ನವದೆಹಲಿ: ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ವಿರುದ್ಧದ ಪ್ರಮುಖ ಕ್ರಿಮಿನಲ್ ಆರೋಪಗಳನ್ನು ಅಮೆರಿಕದ ಫೆಡರಲ್ ನ್ಯಾಯಾಧೀಶರು ಶಾಶ್ವತವಾಗಿ ವಜಾಗೊಳಿಸಿದ ಬೆನ್ನಲ್ಲೇ, ವಿಪಕ್ಷ ನಾಯಕ ರಾಹುಲ್...

ಕರ್ನಾಟಕ SIR | ‘ಲಾಜಿಕಲ್ ಡಿಸ್ಕ್ರಿಪೆನ್ಸಿ’ ಬಗ್ಗೆ ತುಟಿ ಬಿಚ್ಚದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಆಗಸ್ಟ್ 7ರಂದು ಚುನಾವಣಾ ಆಯೋಗ ಹೊರಡಿಸಿದ ಪ್ರಕಟಣೆಯ ಪ್ರಕಾರ, ಗಣತಿ ನಮೂನೆ ಅಥವಾ ಎನ್ಯುಮರೇಶನ್ ಫಾರಂ ಸಲ್ಲಿಕೆ ದಿನಾಂಕ ಆಗಸ್ಟ್...

‘ಆಹಾರ ಸುರಕ್ಷತೆ – ಔಷಧ ಆಡಳಿತ ಇಲಾಖೆ’ಯಿಂದ ಹೋಟೆಲ್‌ಗಳಿಗೆ ಕಟ್ಟುನಿಟ್ಟಿನ ನಿಯಮ ಜಾರಿ; ಹೊಸ ಮಾರ್ಗಸೂಚಿ ಪ್ರಕಟ

ರಾಜ್ಯದ ಹೋಟೆಲ್‌ಗಳು, ಡಾಬಾಗಳು ಹಾಗೂ ಆಹಾರ ಸೇವಾ ಸಂಸ್ಥೆಗಳು ಪಾಲಿಸಬೇಕಾದ 'ಆಹಾರ ಸುರಕ್ಷತಾ ಮತ್ತು ನೈರ್ಮಲ್ಯ ನಿಯಮಗಳ'ನ್ನು 'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧ ಆಡಳಿತ ಇಲಾಖೆ' ಆಯುಕ್ತರು ಪ್ರಕಟಿಸಿದ್ದಾರೆ. ಕಳೆದ ಮೂರ್ನಾಲ್ಕು...

ಕರ್ನಾಟಕದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪಾದನೆ ಮತ್ತು ಮಾರಾಟ 1 ವರ್ಷ ನಿಷೇಧ: ರಾಜ್ಯ ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಸಾರ್ವಜನಿಕ ಆರೋಗ್ಯ ಮತ್ತು ಸಮಾಜದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಅಂಶ ಹೊಂದಿರುವ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಇತರ ಅಪಾಯಕಾರಿ ಉತ್ಪನ್ನಗಳ ಮೇಲೆ ಸಂಪೂರ್ಣ...

ಲೋಕಸಭೆ ಬಲ 543 ರಲ್ಲೇ ಶಾಶ್ವತವಾಗಿ ಮುಂದುವರಿಸಲು ಕೇಂದ್ರಕ್ಕೆ ಆಗ್ರಹ: ತಮಿಳುನಾಡು ವಿಧಾನಸಭೆಯಲ್ಲಿ ಸಿಎಂ ಸಿ. ಜೋಸೆಫ್ ವಿಜಯ್ ನಿರ್ಣಯ ಮಂಡನೆ

ಚೆನ್ನೈ: ಕೇಂದ್ರ ಸರ್ಕಾರವು ಲೋಕಸಭೆಯ ಒಟ್ಟು ಸ್ಥಾನಗಳ ಬಲವನ್ನು ಪ್ರಸ್ತುತ ಇರುವ 543 ರಲ್ಲೇ ಶಾಶ್ವತವಾಗಿ ಕಾಯ್ದುಕೊಳ್ಳಬೇಕು ಮತ್ತು ರಾಜ್ಯಗಳ ನಡುವಿನ ಪ್ರಾತಿನಿಧ್ಯದ ಅನುಪಾತವನ್ನು ಬದಲಾಯಿಸಬಾರದು ಎಂದು ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಸಿ....

ಯುಪಿಯಲ್ಲಿ ಅಮಾನವೀಯ ಘಟನೆ: ಮೊಬೈಲ್ ಕದ್ದ ಆರೋಪ ಹೊರಿಸಿ ಒಬಿಸಿ ಯುವಕನ ತಲೆ ಬೋಳಿಸಿ ಮೆರವಣಿಗೆ; ಮೇಲ್ಜಾತಿಯ ತಂದೆ-ಮಗನ ಬಂಧನ

ಉನ್ನಾವೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ದಲಿತ ಸಮುದಾಯಗಳ ಮೇಲೆ ವ್ಯಾಪಕವಾಗಿ ನಡೆಯುತ್ತಿದ್ದ ಜಾತಿ ಆಧಾರಿತ ದೌರ್ಜನ್ಯ ಮತ್ತು ಸಾರ್ವಜನಿಕ ಅವಮಾನದಂತಹ ಅಮಾನವೀಯ ಕೃತ್ಯಗಳು, ಈಗ ಇತರ ಹಿಂದುಳಿದ ವರ್ಗಗಳ (ಒಬಿಸಿ) ಜನರ ಮೇಲೆಯೂ...

SIR 3ನೇ ಹಂತ: 12 ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳ 1.58 ಕೋಟಿ ಮತದಾರರ ಹೆಸರು ಕರಡು ಪಟ್ಟಿಯಿಂದ ಡಿಲೀಟ್

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಮೂರನೇ ಹಂತದಲ್ಲಿ ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಿಂದ ಸುಮಾರು 1.58 ಕೋಟಿ ಹೆಸರುಗಳನ್ನು ಅಳಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ 3ನೇ ಹಂತದ ವ್ಯಾಪ್ತಿಗೆ ಒಳಪಡುವ 16 ರಾಜ್ಯಗಳಲ್ಲಿ...

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...