Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...