Homeಅಂತರಾಷ್ಟ್ರೀಯಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

ಕದನ ವಿರಾಮ| ಮನೆಗೆ ಮರಳುತ್ತಿರುವ ಗಾಝಾ ಜನತೆ; ಅವಶೇಷಗಳಡಿ ತಮ್ಮವರಿಗಾಗಿ ಹುಡುಕಾಟ

- Advertisement -
- Advertisement -

ಕದನ ವಿರಾಮದ ಹಿನ್ನೆಲೆ, ಇಸ್ರೇಲ್ ಗಾಝಾ ಮೇಲಿನ ಬಾಂಬ್ ದಾಳಿಯನ್ನು ನಿಲ್ಲಿಸಿದ್ದು, ಒತ್ತಾಯಪೂರ್ವಕವಾಗಿ ಸ್ಥಳಾಂತರಿಸಲ್ಪಟ್ಟಿದ್ದ ಸಾವಿರಾರು ಪ್ಯಾಲೆಸ್ತೀನಿಯರು ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಪ್ರಮುಖವಾಗಿ ಉತ್ತರ ಗಾಝಾದತ್ತ ಜನರು ಆಗಮಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಇಸ್ರೇಲ್ ಆಕ್ರಮಣಕ್ಕೂ ಮುನ್ನ ಹೆಚ್ಚಿನ ಸಂಖ್ಯೆಯ ಜನರು ವಾಸಿಸುತ್ತಿದ್ದರು. ಬಾಂಬ್ ದಾಳಿ ನಡೆಸಿ ಇಸ್ರೇಲಿ ಸೇನೆ ಅವರಲ್ಲಿ ಹಲವರನ್ನು ಸುಖಾಸುಮ್ಮನೆ ಹತ್ಯೆಗೈದಿದೆ. ಇನ್ನುಳಿದವರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ತೆರಳಿದ್ದರು.

ಕಳೆದ ತಿಂಗಳು ಇಸ್ರೇಲ್ ಸೇನೆ ಗಾಝಾ ಪಟ್ಟಿಯ ಗಾಝಾ ನಗರದಲ್ಲಿ ನೆಲದ ದಾಳಿಯನ್ನು ತೀವ್ರಗೊಳಿಸಿದಾಗ ಸಮುದ್ರ ತೀರದ ಅಲ್- ರಶೀದ್ ರಸ್ತೆಯ ಮೂಲಕ ಸಾವಿರಾರು ಅಮಾಯಕ, ಅಸಹಾಯ, ಜನರು ಪಲಾಯನ ಮಾಡಿದ್ದ ಫೋಟೋ, ವಿಡಿಯೋಗಳನ್ನು ಮಾಧ್ಯಮಗಳು ಪ್ರಕಟಿಸಿತ್ತು. ಇದೀಗ ಅದೇ ರಸ್ತೆಯ ಮೂಲಕ ಜನರು ಹಿಂದಿರುಗುವ ದೃಶ್ಯಗಳನ್ನು ತೋರಿಸುತ್ತಿವೆ.

ಗಾಝಾ ಪಟ್ಟಿಯ ನಗರಗಳಾದ ಗಾಝಾ, ರಫಾ, ಖಾನ್ ಯೂನಿಸ್, ಜಬಲಿಯಾ, ದೇರ್ ಅಲ್ ಬಲಾಹ್, ಬನೀ ಸುಹೈಲಾ, ಬೈತ್ ಹನೌನ್, ಬೈತ್ ಲಾಹಿಯಾ ಮತ್ತು ಅಬಾಸನ್ ಅಲ್-ಕಬೀರಾಗಳ ಪೈಕಿ ಗಾಝಾ, ರಫಾ, ಜಬಲಿಯಾ ಮತ್ತು ಖಾನ್ ಯೂನಿಸ್‌ಗಳಲ್ಲಿ ಹೆಚ್ಚಿನ ಜನರು ವಾಸಿಸುತ್ತಿದ್ದರು. ಗಾಝಾ ನಗರದಲ್ಲಿ ಅತೀ ಹೆಚ್ಚು, ಅಂದರೆ ಸುಮಾರು 6 ಲಕ್ಷ ಜನರಿದ್ದರು.

ಇಸ್ರೇಲ್ ಗಾಝಾ, ರಫಾ, ಖಾನ್ ಯೂನಿಸ್ ಮತ್ತು ಜಬಲಿಯಾದ ಮೇಲೆಯೇ ಹೆಚ್ಚಿನ ದಾಳಿ ನಡೆಸಿದೆ. ಪರಿಣಾಮ 70 ಸಾವಿರದಷ್ಟು ಜನರು ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಈ ನಗರಗಳ ಬಹುತೇಕ ಕಟ್ಟಡಗಳನ್ನು ಇಸ್ರೇಲ್ ಧ್ವಂಸ ಮಾಡಿದೆ. ಈಗ ಎಲ್ಲಿ ನೋಡಿದರೂ ಬರೀ ಅವಶೇಷಗಳ ರಾಶಿ ಮಾತ್ರ ಕಾಣುತ್ತಿದೆ. ಈ ಅವಶೇಷಗಳ ಅಡಿಯಲ್ಲಿ ಇನ್ನೆಷ್ಟು ಸಾವಿರ ಜನರ ಮೃತ ದೇಹಗಳು ಇದೆ ಎಂದು ಗೊತ್ತಿಲ್ಲ.

ಇಸ್ರೇಲ್ ಬಾಂಬ್ ದಾಳಿ ನಿಲ್ಲಿಸಿರುವ ಹಿನ್ನೆಲೆ ಉತ್ತರ ಗಾಝಾದತ್ತ ಹಿಂದಿರುಗಿದ ಜನರು, ರಕ್ಷಣಾ ತಂಡಗಳ ಜೊತೆಗೂಡಿ ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹುಡುಕುವ ಪ್ರಯತ್ನ ಮಾಡುತ್ತಿದ್ದಾರೆ. ಗಾಝಾದ ಸುದ್ದಿ ಸಂಸ್ಥೆ ವಫಾದ ವರದಿ ಪ್ರಕಾರ, ಶನಿವಾರ ಒಂದೇ ದಿನ ಸುಮಾರು 135 ಮೃತದೇಹಗಳು ಅವಶೇಷಗಳಡಿ ಸಿಕ್ಕಿವೆ.

ಗಾಝಾದಾದ್ಯಂತ ಆಸ್ಪತ್ರೆಗಳಿಂದ ಹಲವಾರು ಶವಗಳನ್ನು ಹೊರ ತೆಗೆಯಲಾಗಿದೆ. ಈ ಪೈಕಿ 43 ಶವಗಳನ್ನು ಅಲ್-ಶಿಫಾ ಆಸ್ಪತ್ರೆಗೆ ಮತ್ತು 60 ಶವಗಳನ್ನು ಗಾಝಾ ನಗರದ ಅಲ್-ಅಹ್ಲಿ ಅರಬ್ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದವುಗಳನ್ನು ನುಸೈರಾತ್, ದೇರ್ ಅಲ್-ಬಲಾಹ್ ಮತ್ತು ಖಾನ್ ಯೂನಿಸ್ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಗಿದೆ ಎಂದು ಅಲ್-ವಫಾ ವರದಿ ಹೇಳಿದೆ.

ಅಲ್-ರಶೀದ್ ರಸ್ತೆಯ ಮೂಲಕ ಮಕ್ಕಳು, ಮಹಿಳೆಯರು, ವೃದ್ಧರು, ಕಾರು, ವ್ಯಾನ್‌ ಮತ್ತು ಪೀಠೋಪಕರಣಗಳಿಂದ ತುಂಬಿದ ಕತ್ತೆ ಬಂಡಿಗಳ ಮೂಲಕ ಗಾಝಾ ನಗರದ ಕಡೆಗೆ ಸಾಗುತ್ತಿರುವ ದೃಶ್ಯಗಳನ್ನು ಅಲ್ ಜಝೀರಾ ಸುದ್ದಿ ಸಂಸ್ಥೆಯ ತಾರೀಖ್ ಅಬೂ ಅಝೂಮ್ ವಿವರಿಸಿದ್ದಾರೆ. ಜನರು ತಾತ್ಕಾಲಿಕ ಡೇರೆಗಳನ್ನು ತೆಗೆದು ತಮ್ಮ ನಾಶವಾದ ಮನೆಗಳ ಅವಶೇಷಗಳ ಮೇಲೆ ಹೊಸ ಜೀವನ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. 

ತಿಂಗಳುಗಳ ಕಾಲ ನಿರಂತರವಾಗಿ ಇಸ್ರೇಲ್ ಬಾಂಬ್ ದಾಳಿ ನಡೆಸಿದ ಹಿನ್ನೆಲೆ, ಗಾಝಾ ನಗರದಲ್ಲಿ ಬಹುತೇಕ ಏನೂ ಉಳಿದಿಲ್ಲ. ಸಂಪೂರ್ಣ ವಿನಾಶ ಉಂಟಾಗಿದೆ. ಅಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮೂಲಸೌಕರ್ಯವಿಲ್ಲ, ಶುದ್ಧ ನೀರಿಲ್ಲ, ವಿದ್ಯುತ್ ಇಲ್ಲ. ಒಂದು ಕಾಲದಲ್ಲಿ ಮನೆಗಳಾಗಿದ್ದ ಕಟ್ಟಡಗಳ ಅವಶೇಷಗಳ ರಾಶಿ ಮಾತ್ರ ಇವೆ ಎಂದು ಅಬೂ ಅಝೂಮ್ ತಿಳಿಸಿದ್ದಾರೆ. 

ಹಿಂದಿರುಗುವ ಕುಟುಂಬಗಳಿಗೆ ತಾತ್ಕಾಲಿಕ ಡೇರೆಗಳು ಮತ್ತು ಮೊಬೈಲ್ ಆಶ್ರಯಗಳ ತುರ್ತು ಅವಶ್ಯಕತೆಯಿದೆ ಎಂದು ದೇರ್ ಅಲ್-ಬಲಾಹ್‌ನಿಂದ ವರದಿ ಮಾಡುತ್ತಿರುವ ಅಲ್ ಜಝೀರಾದ ಮೋತ್ ಕಹ್ಲೌಟ್ ಹೇಳಿದ್ದಾರೆ. ಇಲ್ಲಿನ ಜನರಲ್ಲಿ ಏನೂ ಉಳಿದಿಲ್ಲ. ಏನಿದೆಯೋ ಅದನ್ನು ಹೊತ್ತುಕೊಂಡು ಅಜ್ಞಾತದ ಕಡೆಗೆ ಹೆಜ್ಜೆ ಹಾಕುತ್ತಿದ್ದಾರೆ ಎಂದು ಅವರು ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ಅಲ್- ರಶೀದ್ ರಸ್ತೆಯ ಮೂಲಕ ಹಾದು ಹೋಗುತ್ತಿರುವ ಅನೇಕ ಜನರನ್ನು ಅಲ್‌-ಜಝೀರಾದ ವರದಿಗಾರರು ಮಾತನಾಡಿಸಿದ್ದಾರೆ. ಈ ವೇಳೆ ಕೆಲವರು ನಮ್ಮ ಊರುಗಳತ್ತ ಹೋಗುತ್ತಿದ್ದೇವೆ. ಅಲ್ಲಿ ನಮ್ಮ ಮನೆ ಇದೆಯೋ, ಇಲ್ಲವೋ ಗೊತ್ತಿಲ್ಲ ಎಂದಿದ್ದಾರೆ. ಇನ್ನೂ ಹಲವರು, ಮಕ್ಕಳು, ಗಂಡ, ಹೆಂಡತಿ, ಸಹೋದರರನ್ನು ಕಳೆದುಕೊಂಡ ನೋವು ತೋಡಿಕೊಂಡಿದ್ದಾರೆ. ಈ ನಡುವೆಯೂ ನಾಶಗೊಂಡ ನಗರದಲ್ಲಿ ಅವಶೇಷಗಳ ನಡುವೆ ಹೊಸ ಬದುಕು ಕಟ್ಟಿಕೊಳ್ಳುವ ಉತ್ಸಾಹವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇಸ್ರೇಲ್-ಹಮಾಸ್ ಕದನ ವಿರಾಮ: ಗಾಝಾಗೆ ಮರಳುತ್ತಿರುವ ಸಾವಿರಾರು ಪ್ಯಾಲೆಸ್ತೀನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...