Homeಮುಖಪುಟಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ - ಗೃಹಸಚಿವರ ಸ್ಪಷ್ಟನೆ

ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

- Advertisement -
- Advertisement -

ಕಳೆದ ವಾರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮೂವರ ಮೇಲೆ ನಡೆದ ಗುಂಪು ಹಲ್ಲೆ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಈವರೆಗೆ ಬಂಧಿಸಲ್ಪಟ್ಟ 101 ಜನರಲ್ಲಿ ಯಾರೊಬ್ಬರೂ ಮುಸ್ಲಿಮರಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದ್ದಾರೆ.

ಭೀಕರ ಘಟನೆಯನ್ನು ಕೋಮುವಾದಿಕರಣಗೊಳಿಸಲು ಯತ್ನಿಸುತ್ತಿರುವ ಬಿಜೆಪಿ ನೇತೃತ್ವದ ವಿರೋಧ ಪಕ್ಷವನ್ನು ದೇಶ್‌ಮುಖ್ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣವನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

“ಇಲ್ಲಿಯವರೆಗೆ 101 ಜನರನ್ನು ಬಂಧಿಸಲಾಗಿದೆ ಮತ್ತು ಬಂಧಿಸಲ್ಪಟ್ಟವರಲ್ಲಿ ಒಬ್ಬರೂ ಮುಸ್ಲಿಂ ಇಲ್ಲ, ಆದ್ದರಿಂದ ಈ ಘಟನೆಗೆ ಕೋಮು ಬಣ್ಣ ನೀಡಬೇಡಿ” ಎಂದು ಸಚಿವರು ಫೇಸ್‌ಬುಕ್ ಮೂಲಕ ಮಾಹಿತಿ ನೀಡಿ, ಕೊರೊನಾ ವೈರಸ್ ಹರಡದಂತೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ.

“ಕೆಲವರು ‘ಮುಂಗೇರಿಲಾಲ್ ಕೆ ಹಸೀನ್ ಸಪ್ನೆ‘ ನೋಡುತ್ತಿದ್ದಾರೆ. ಇದು ರಾಜಕೀಯ ಮಾಡುವ ಸಮಯವಲ್ಲ” ಎಂದು ಹೇಳಿದರು. ಈ ಬಗ್ಗೆ ಟ್ವೀಟ್ ಸಹ ಮಾಡಿ ಬಂಧಿತರ ಹೆಸರಿನ ಪಟ್ಟಿಯನ್ನು ಹಾಕಿದ್ದಾರೆ.

ಮುಂಬಯಿಯಿಂದ 125 ಕಿಲೋಮೀಟರ್ ದೂರದ ಪಾಲ್ಘರ್‌ ನಲ್ಲಿ ನಡೆದ ಘಟನೆಯನ್ನು ತಪ್ಫಾಗಿ ಗುರುತಿಸಿದ ಪರಿಣಾಮದಿಂದ ಆಗಿರಬಹುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಹೇಳಿದ್ದರು. ಅಲ್ಲದೆ ಘಟನೆಯನ್ನು ಕೋಮುವಾದೀಕರಣಗೊಳಿಸುವವರ ವಿರುದ್ಧ ಎಚ್ಚರಿಕೆ ನೀಡಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿಯು, “ಭಾವೋದ್ರೇಕಗಳನ್ನು ಹೆಚ್ಚಿಸಲು ಪ್ರಯತ್ನಿಬಾರದು. ಈ ದಾಳಿಯಲ್ಲಿ ಕೋಮುವಾದ ಇಲ್ಲ. ಇಬ್ಬರು ಪೊಲೀಸರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ” ಎಂದು ಟ್ವೀಟ್ ಮಾಡಿತ್ತು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


ದಾಳಿಯ ಆಘಾತಕಾರಿ ದೃಶ್ಯಗಳು ಕಳೆದ ವಾರ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಅದರಲ್ಲಿ ಕೋಪಗೊಂಡ ಗದ್ಚಿಂಚಲೆ ಗ್ರಾಮದ ನಿವಾಸಿಗಳು ಕೋಲು ಮತ್ತು ಕಲ್ಲುಗಳಿಂದ 70 ವರ್ಷದ ವೃದ್ದ ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ.

ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿರುವ ಪೊಲೀಸ್ ತಂಡದ ಮೇಲೂ ದಾಳಿ ನಡೆಸಲಾಗಿದ್ದು, ಕೆಲವರು ಗಾಯಗೊಂಡಿದ್ದರು. ಕೊಲ್ಲಲ್ಪಟ್ಟ ಮೂವರಲ್ಲಿ ಇಬ್ಬರು ವಾರಣಾಸಿ ಆಶ್ರಮಕ್ಕೆ ಸೇರಿದ ಸಾಧುಗಳಾಗಿದ್ದು, ಮತ್ತೊಬ್ಬರು ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕರಾಗಿದ್ದಾರೆ.

ಇತರ ವೀಡಿಯೊಗಳು ಗ್ರಾಮಸ್ಥರು ಪೊಲೀಸ್ ಕಾರಿನ ಮೇಲೆ ದಾಳಿ ಮಾಡಿ ಅದನ್ನು ಉರುಳಿಸುವವರೆಗೆ ತಳ್ಳುವುದನ್ನು ಕಾಣಬಹುದಾಗಿದೆ.

ಕೊರೊನಾ ಹರಡುವುದನ್ನು ತಡೆಯಲು ಮಾಡಿದ್ದ ಲಾಕ್‌ಡೌನನ್ನು ಮುರಿದು ಕಳ್ಳರು ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂಬ ವದಂತಿಗಳು ಹರಡಲಾಗಿದೆ ಎಂದು ಪೊಲೀಸರು ತಿಳಿದ್ದಾರೆ. ಜಿಲ್ಲಾಧಿಕಾರಿ ಕೈಲಾಶ್ ಶಿಂಧೆ ಅವರು, ನೆರೆಹೊರೆಯ ಮಕ್ಕಳನ್ನು ಅಪಹರಿಸಿದ್ದಾರೆ ಎಂಬ ವದಂತಿಗಳು ಹರಡಲಾಗಿತ್ತು ಎಂದು ಹೇಳಿದ್ದಾರೆ. ಈ ದಾಳಿಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಮೃತರನ್ನು ಮಹಾರಾಜ್ ಕಲ್ಪವ್ರಕ್ಷಗಿರಿ (70), ಸುಶಿಲ್ ಗಿರಿ ಮಹಾರಾಜ್ (35) ಮತ್ತು ನಿಲೇಶ್ ತೆಲ್ಗಡೆ (30) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...