Homeಮುಖಪುಟಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ - ಗೃಹಸಚಿವರ ಸ್ಪಷ್ಟನೆ

ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

- Advertisement -
- Advertisement -

ಕಳೆದ ವಾರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮೂವರ ಮೇಲೆ ನಡೆದ ಗುಂಪು ಹಲ್ಲೆ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಈವರೆಗೆ ಬಂಧಿಸಲ್ಪಟ್ಟ 101 ಜನರಲ್ಲಿ ಯಾರೊಬ್ಬರೂ ಮುಸ್ಲಿಮರಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದ್ದಾರೆ.

ಭೀಕರ ಘಟನೆಯನ್ನು ಕೋಮುವಾದಿಕರಣಗೊಳಿಸಲು ಯತ್ನಿಸುತ್ತಿರುವ ಬಿಜೆಪಿ ನೇತೃತ್ವದ ವಿರೋಧ ಪಕ್ಷವನ್ನು ದೇಶ್‌ಮುಖ್ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣವನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

“ಇಲ್ಲಿಯವರೆಗೆ 101 ಜನರನ್ನು ಬಂಧಿಸಲಾಗಿದೆ ಮತ್ತು ಬಂಧಿಸಲ್ಪಟ್ಟವರಲ್ಲಿ ಒಬ್ಬರೂ ಮುಸ್ಲಿಂ ಇಲ್ಲ, ಆದ್ದರಿಂದ ಈ ಘಟನೆಗೆ ಕೋಮು ಬಣ್ಣ ನೀಡಬೇಡಿ” ಎಂದು ಸಚಿವರು ಫೇಸ್‌ಬುಕ್ ಮೂಲಕ ಮಾಹಿತಿ ನೀಡಿ, ಕೊರೊನಾ ವೈರಸ್ ಹರಡದಂತೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ.

“ಕೆಲವರು ‘ಮುಂಗೇರಿಲಾಲ್ ಕೆ ಹಸೀನ್ ಸಪ್ನೆ‘ ನೋಡುತ್ತಿದ್ದಾರೆ. ಇದು ರಾಜಕೀಯ ಮಾಡುವ ಸಮಯವಲ್ಲ” ಎಂದು ಹೇಳಿದರು. ಈ ಬಗ್ಗೆ ಟ್ವೀಟ್ ಸಹ ಮಾಡಿ ಬಂಧಿತರ ಹೆಸರಿನ ಪಟ್ಟಿಯನ್ನು ಹಾಕಿದ್ದಾರೆ.

ಮುಂಬಯಿಯಿಂದ 125 ಕಿಲೋಮೀಟರ್ ದೂರದ ಪಾಲ್ಘರ್‌ ನಲ್ಲಿ ನಡೆದ ಘಟನೆಯನ್ನು ತಪ್ಫಾಗಿ ಗುರುತಿಸಿದ ಪರಿಣಾಮದಿಂದ ಆಗಿರಬಹುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಹೇಳಿದ್ದರು. ಅಲ್ಲದೆ ಘಟನೆಯನ್ನು ಕೋಮುವಾದೀಕರಣಗೊಳಿಸುವವರ ವಿರುದ್ಧ ಎಚ್ಚರಿಕೆ ನೀಡಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿಯು, “ಭಾವೋದ್ರೇಕಗಳನ್ನು ಹೆಚ್ಚಿಸಲು ಪ್ರಯತ್ನಿಬಾರದು. ಈ ದಾಳಿಯಲ್ಲಿ ಕೋಮುವಾದ ಇಲ್ಲ. ಇಬ್ಬರು ಪೊಲೀಸರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ” ಎಂದು ಟ್ವೀಟ್ ಮಾಡಿತ್ತು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


ದಾಳಿಯ ಆಘಾತಕಾರಿ ದೃಶ್ಯಗಳು ಕಳೆದ ವಾರ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಅದರಲ್ಲಿ ಕೋಪಗೊಂಡ ಗದ್ಚಿಂಚಲೆ ಗ್ರಾಮದ ನಿವಾಸಿಗಳು ಕೋಲು ಮತ್ತು ಕಲ್ಲುಗಳಿಂದ 70 ವರ್ಷದ ವೃದ್ದ ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ.

ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿರುವ ಪೊಲೀಸ್ ತಂಡದ ಮೇಲೂ ದಾಳಿ ನಡೆಸಲಾಗಿದ್ದು, ಕೆಲವರು ಗಾಯಗೊಂಡಿದ್ದರು. ಕೊಲ್ಲಲ್ಪಟ್ಟ ಮೂವರಲ್ಲಿ ಇಬ್ಬರು ವಾರಣಾಸಿ ಆಶ್ರಮಕ್ಕೆ ಸೇರಿದ ಸಾಧುಗಳಾಗಿದ್ದು, ಮತ್ತೊಬ್ಬರು ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕರಾಗಿದ್ದಾರೆ.

ಇತರ ವೀಡಿಯೊಗಳು ಗ್ರಾಮಸ್ಥರು ಪೊಲೀಸ್ ಕಾರಿನ ಮೇಲೆ ದಾಳಿ ಮಾಡಿ ಅದನ್ನು ಉರುಳಿಸುವವರೆಗೆ ತಳ್ಳುವುದನ್ನು ಕಾಣಬಹುದಾಗಿದೆ.

ಕೊರೊನಾ ಹರಡುವುದನ್ನು ತಡೆಯಲು ಮಾಡಿದ್ದ ಲಾಕ್‌ಡೌನನ್ನು ಮುರಿದು ಕಳ್ಳರು ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂಬ ವದಂತಿಗಳು ಹರಡಲಾಗಿದೆ ಎಂದು ಪೊಲೀಸರು ತಿಳಿದ್ದಾರೆ. ಜಿಲ್ಲಾಧಿಕಾರಿ ಕೈಲಾಶ್ ಶಿಂಧೆ ಅವರು, ನೆರೆಹೊರೆಯ ಮಕ್ಕಳನ್ನು ಅಪಹರಿಸಿದ್ದಾರೆ ಎಂಬ ವದಂತಿಗಳು ಹರಡಲಾಗಿತ್ತು ಎಂದು ಹೇಳಿದ್ದಾರೆ. ಈ ದಾಳಿಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಮೃತರನ್ನು ಮಹಾರಾಜ್ ಕಲ್ಪವ್ರಕ್ಷಗಿರಿ (70), ಸುಶಿಲ್ ಗಿರಿ ಮಹಾರಾಜ್ (35) ಮತ್ತು ನಿಲೇಶ್ ತೆಲ್ಗಡೆ (30) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...