Homeಮುಖಪುಟಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ - ಗೃಹಸಚಿವರ ಸ್ಪಷ್ಟನೆ

ಪಾಲ್ಘರ್ ಘಟನೆ: 101 ಬಂಧಿತರಲ್ಲಿ ಒಬ್ಬರೂ ಮುಸ್ಲಿಮರಿಲ್ಲ – ಗೃಹಸಚಿವರ ಸ್ಪಷ್ಟನೆ

- Advertisement -
- Advertisement -

ಕಳೆದ ವಾರ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮೂವರ ಮೇಲೆ ನಡೆದ ಗುಂಪು ಹಲ್ಲೆ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಈವರೆಗೆ ಬಂಧಿಸಲ್ಪಟ್ಟ 101 ಜನರಲ್ಲಿ ಯಾರೊಬ್ಬರೂ ಮುಸ್ಲಿಮರಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ್ ಹೇಳಿದ್ದಾರೆ.

ಭೀಕರ ಘಟನೆಯನ್ನು ಕೋಮುವಾದಿಕರಣಗೊಳಿಸಲು ಯತ್ನಿಸುತ್ತಿರುವ ಬಿಜೆಪಿ ನೇತೃತ್ವದ ವಿರೋಧ ಪಕ್ಷವನ್ನು ದೇಶ್‌ಮುಖ್ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣವನ್ನು ಮಹಾರಾಷ್ಟ್ರ ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ನೀಡಲಾಗಿದೆ ಎಂದು ಹೇಳಿದ್ದಾರೆ.

“ಇಲ್ಲಿಯವರೆಗೆ 101 ಜನರನ್ನು ಬಂಧಿಸಲಾಗಿದೆ ಮತ್ತು ಬಂಧಿಸಲ್ಪಟ್ಟವರಲ್ಲಿ ಒಬ್ಬರೂ ಮುಸ್ಲಿಂ ಇಲ್ಲ, ಆದ್ದರಿಂದ ಈ ಘಟನೆಗೆ ಕೋಮು ಬಣ್ಣ ನೀಡಬೇಡಿ” ಎಂದು ಸಚಿವರು ಫೇಸ್‌ಬುಕ್ ಮೂಲಕ ಮಾಹಿತಿ ನೀಡಿ, ಕೊರೊನಾ ವೈರಸ್ ಹರಡದಂತೆ ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ.

“ಕೆಲವರು ‘ಮುಂಗೇರಿಲಾಲ್ ಕೆ ಹಸೀನ್ ಸಪ್ನೆ‘ ನೋಡುತ್ತಿದ್ದಾರೆ. ಇದು ರಾಜಕೀಯ ಮಾಡುವ ಸಮಯವಲ್ಲ” ಎಂದು ಹೇಳಿದರು. ಈ ಬಗ್ಗೆ ಟ್ವೀಟ್ ಸಹ ಮಾಡಿ ಬಂಧಿತರ ಹೆಸರಿನ ಪಟ್ಟಿಯನ್ನು ಹಾಕಿದ್ದಾರೆ.

ಮುಂಬಯಿಯಿಂದ 125 ಕಿಲೋಮೀಟರ್ ದೂರದ ಪಾಲ್ಘರ್‌ ನಲ್ಲಿ ನಡೆದ ಘಟನೆಯನ್ನು ತಪ್ಫಾಗಿ ಗುರುತಿಸಿದ ಪರಿಣಾಮದಿಂದ ಆಗಿರಬಹುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಹೇಳಿದ್ದರು. ಅಲ್ಲದೆ ಘಟನೆಯನ್ನು ಕೋಮುವಾದೀಕರಣಗೊಳಿಸುವವರ ವಿರುದ್ಧ ಎಚ್ಚರಿಕೆ ನೀಡಿದ್ದರು.

ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿಯು, “ಭಾವೋದ್ರೇಕಗಳನ್ನು ಹೆಚ್ಚಿಸಲು ಪ್ರಯತ್ನಿಬಾರದು. ಈ ದಾಳಿಯಲ್ಲಿ ಕೋಮುವಾದ ಇಲ್ಲ. ಇಬ್ಬರು ಪೊಲೀಸರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ” ಎಂದು ಟ್ವೀಟ್ ಮಾಡಿತ್ತು.


ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ


ದಾಳಿಯ ಆಘಾತಕಾರಿ ದೃಶ್ಯಗಳು ಕಳೆದ ವಾರ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು, ಅದರಲ್ಲಿ ಕೋಪಗೊಂಡ ಗದ್ಚಿಂಚಲೆ ಗ್ರಾಮದ ನಿವಾಸಿಗಳು ಕೋಲು ಮತ್ತು ಕಲ್ಲುಗಳಿಂದ 70 ವರ್ಷದ ವೃದ್ದ ಸೇರಿದಂತೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ.

ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿರುವ ಪೊಲೀಸ್ ತಂಡದ ಮೇಲೂ ದಾಳಿ ನಡೆಸಲಾಗಿದ್ದು, ಕೆಲವರು ಗಾಯಗೊಂಡಿದ್ದರು. ಕೊಲ್ಲಲ್ಪಟ್ಟ ಮೂವರಲ್ಲಿ ಇಬ್ಬರು ವಾರಣಾಸಿ ಆಶ್ರಮಕ್ಕೆ ಸೇರಿದ ಸಾಧುಗಳಾಗಿದ್ದು, ಮತ್ತೊಬ್ಬರು ಅವರು ಪ್ರಯಾಣಿಸುತ್ತಿದ್ದ ಕಾರಿನ ಚಾಲಕರಾಗಿದ್ದಾರೆ.

ಇತರ ವೀಡಿಯೊಗಳು ಗ್ರಾಮಸ್ಥರು ಪೊಲೀಸ್ ಕಾರಿನ ಮೇಲೆ ದಾಳಿ ಮಾಡಿ ಅದನ್ನು ಉರುಳಿಸುವವರೆಗೆ ತಳ್ಳುವುದನ್ನು ಕಾಣಬಹುದಾಗಿದೆ.

ಕೊರೊನಾ ಹರಡುವುದನ್ನು ತಡೆಯಲು ಮಾಡಿದ್ದ ಲಾಕ್‌ಡೌನನ್ನು ಮುರಿದು ಕಳ್ಳರು ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂಬ ವದಂತಿಗಳು ಹರಡಲಾಗಿದೆ ಎಂದು ಪೊಲೀಸರು ತಿಳಿದ್ದಾರೆ. ಜಿಲ್ಲಾಧಿಕಾರಿ ಕೈಲಾಶ್ ಶಿಂಧೆ ಅವರು, ನೆರೆಹೊರೆಯ ಮಕ್ಕಳನ್ನು ಅಪಹರಿಸಿದ್ದಾರೆ ಎಂಬ ವದಂತಿಗಳು ಹರಡಲಾಗಿತ್ತು ಎಂದು ಹೇಳಿದ್ದಾರೆ. ಈ ದಾಳಿಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶಿಸಿದೆ.

ಮೃತರನ್ನು ಮಹಾರಾಜ್ ಕಲ್ಪವ್ರಕ್ಷಗಿರಿ (70), ಸುಶಿಲ್ ಗಿರಿ ಮಹಾರಾಜ್ (35) ಮತ್ತು ನಿಲೇಶ್ ತೆಲ್ಗಡೆ (30) ಎಂದು ಗುರುತಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...