Homeಮುಖಪುಟಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

- Advertisement -
- Advertisement -

ಪಾಲ್ಘರ್‌ ಗುಂಪು ಥಳಿತ ಹತ್ಯೆ ಘಟನೆಯಲ್ಲಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಹಾಗೂ ಘಟನೆಯೂ ಯಾವುದೇ ಕೋಮು ದೃಷ್ಟಿಯಿಂದ ಆಗಿದ್ದಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಪಷ್ಟನೆ ನೀಡಿದ್ದಾರೆ.

ಪಾಲ್ಘರ್‌ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯದ ಗುಂಪು ಮೂವರನ್ನು ಹತ್ಯೆಗೈದಿದ್ದಕ್ಕೆ ಕೋಮು ಬಣ್ಣ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದಾರೆ.

ಏಪ್ರಿಲ್ 16 ರಂದು ನಡೆದ ಘಟನೆಯ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಏಪ್ರಿಲ್ 16 ರ ರಾತ್ರಿ ಮುಂಬೈನ ಕಂಡಿವಲಿಯಿಂದ ಮೂವರು ಗುಜರಾತ್‌ನ ಸೂರತ್ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಗದ್ಚಿಂಚಲೆ ಗ್ರಾಮದಲ್ಲಿ ಪೊಲೀಸರು ತಡೆದಿದ್ದರು. ಆಗ ಆ ಮೂವರನ್ನು ಕಳ್ಳರು ಎಂಬ ಭೀತಿಯಿಂದ ಅಲ್ಲಿನ ಜನರು ಸಾಮುಹಿಕವಾಗಿ ಹೊಡೆದು ಕೊಂದಿದ್ದರು.

ಈ ಘಟನೆಯ ಹಿನ್ನೆಲೆಯಲ್ಲಿ ಪಾಲ್ಘರ್ ಪೊಲೀಸರು ಕರ್ತವ್ಯ ನಿರ್ವಹಣೆಯಿಂದ ತಪ್ಪಿಸಿಕೊಂಡ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿದ್ದಾರೆ.

ಮೃತರನ್ನು ಮಹಾರಾಜ್ ಕಲ್ಪವ್ರಕ್ಷಗಿರಿ (70), ಸುಶಿಲ್‌ ಗಿರಿ ಮಹಾರಾಜ್ (35), ಮತ್ತು ಅವರ ಕಾರು ಚಾಲಕ ನಿಲೇಶ್ ತೆಲ್ಗಡೆ (30) ಎಂದು ಗುರುತಿಸಲಾಗಿದೆ. ಅವರು ವಾರಣಾಸಿಯ ಆಶ್ರಮವೊಂದನ್ನು ಸೇರಿದ್ದರು ಎನ್ನಲಾಗಿದೆ.

ಈ ಘಟನೆಯ ನಂತರ ಹಿಂದೂ ಕಾರ್ಯಕರ್ತರ ಹತ್ಯೆ ಎಂದು ಕೋಮು ದೃಷ್ಟಿಕೋನದಡಿ ಈ ವಿಚಾರ ವೈರಲ್‌ ಆಗಿತ್ತು. ರಾಜ್ಯದ ಗೃಹ ಸಚಿವ ಅನಿಲ್ ದೇಶ್ಮುಖ್ ಈ ಘಟನೆಗೆ ಯಾವುದೇ ಕೋಮು ಬಣ್ಣವನ್ನು ನೀಡದಂತೆ ಎಚ್ಚರಿಕೆ ನೀಡಿದ್ದರು, ಏಕೆಂದರೆ ಮೃತ ಮೂವರಲ್ಲಿ ಇಬ್ಬರು ಸನ್ಯಾಸಿಗಳು ಎಂದು ಹೇಳಲಾಗಿದೆ.

ಪಾಲ್ಘರ್‌ ಜನಸಮೂಹ ಹತ್ಯೆ ಘಟನೆಯೂ ಕೋಮು ಆಧಾರಿತವಲ್ಲ ಎಂದು ಸ್ವತಃ ಅಮಿತ್ ಷಾ ಅವರಿಂದ ಸೋಮವಾರ ಕರೆ ಬಂದಿದೆ ಎಂದು ವೀಡಿಯೊ ಸಂದೇಶದಲ್ಲಿ ಠಾಕ್ರೆ ಹೇಳಿದ್ದಾರೆ.

“ಪಾಲ್ಘರ್ ಗುಂಪು ಹತ್ಯೆಯೂ ಕೋಮು ತಿರುವು ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಾನು ಅವರನ್ನು ಒತ್ತಾಯಿಸಿದ್ದೇನೆ. ನನ್ನ ಸರ್ಕಾರ ಇಂತಹ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ನಾನು ಕೇಂದ್ರಕ್ಕೆ ಮಾಹಿತಿ ನೀಡಿದ್ದೇನೆ” ಎಂದು ಠಾಕ್ರೆ ಹೇಳಿದ್ದಾರೆ.

ಮೂವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಈ ಹಿಂದೆ ಹೇಳಿದ್ದರು. “ಪಾಲ್ಘರ್ ಘಟನೆಯ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಅಪರಾಧದ ದಿನದಂದು 2 ಸಾಧುಗಳು, 1 ಚಾಲಕ ಮತ್ತು ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಲ್ಲ 101 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಠಾಕ್ರೆ ಭಾನುವಾರ ತಡರಾತ್ರಿ ಟ್ವೀಟ್ ಮಾಡಿದ್ದರು.

ಪಾಲ್ಘರ್‌ ಗುಂಪು ಹತ್ಯೆಯಲ್ಲಿ ದಾಳಿ ಮಾಡಿದವರು ಮತ್ತು ಮೃತಪಟ್ಟವರು ಬೇರೆ ಬೇರೆ ಧರ್ಮದವರಲ್ಲ, ಅವರೆಲ್ಲರೂ ಸಹ ಬುಡಕಟ್ಟು ಸಮುದಾಯಕ್ಕೆ ಸೇರಿದವರು ಎಂದು ದೇಶಮುಖ್ ಹೇಳಿದ್ದಾರೆ. “ಸಮಾಜದಲ್ಲಿ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಕೋಮು ದ್ವೇಷವನ್ನು ಬಿತ್ತುವವರ ವಿರುದ್ಧವೂ ಕ್ರಮಕೈಗೊಳ್ಳುವಂತೆ ಮಹಾರಾಷ್ಟ್ರ ಪೊಲೀಸರಿಗೆ ಹಾಗೂ ಸೈಬರ್ ಸೆಲ್ ಪೊಲೀಸರಿಗೆ ಆದೇಶಿಸಿದ್ದೇನೆ” ಎಂದು ಅವರು ಭಾನುವಾರ ಟ್ವೀಟ್ ನಲ್ಲಿ ತಿಳಿಸಿದ್ದರು.

ಈ ಘಟನೆಯನ್ನು ಇಟ್ಟುಕೊಂಡು ಸಮಾಜದಲ್ಲಿ ಬಿರುಕು ಸೃಷ್ಟಿಸುತ್ತಿರುವವರ ವಿರುದ್ದ ಪೊಲೀಸರು ನಿಗಾ ಇಡುತ್ತಿದ್ದಾರೆ ಎಂದು ಮಹಾರಾಷ್ಟ್ರ ಗೃಹ ಸಚಿವ ದೇಶಮುಖ್ ಹೇಳಿದ್ದಾರೆ.


ಇದನ್ನೂ ಓದಿ: ಪಾದರಾಯನಪುರದಲ್ಲಿ ನಡೆದದ್ದೇನು? ಏನು ಕಾರಣ? ಸಂಪೂರ್ಣ ವಿವರಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...