Homeಮುಖಪುಟಪಾಲ್ಘರ್‌ ಗುಂಪು ಹತ್ಯೆ: 89 ಆರೋಪಿಗಳಿಗೆ ಜಾಮೀನು ನೀಡಿದ ನ್ಯಾಯಾಲಯ

ಪಾಲ್ಘರ್‌ ಗುಂಪು ಹತ್ಯೆ: 89 ಆರೋಪಿಗಳಿಗೆ ಜಾಮೀನು ನೀಡಿದ ನ್ಯಾಯಾಲಯ

- Advertisement -
- Advertisement -

ಪಾಲ್ಘರ್ ಗುಂಪು ಹತ್ಯೆ ಪ್ರಕರಣದ 89 ಆರೋಪಿಗಳಿಗೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿಶೇಷ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ. ಪ್ರಕರಣದಲ್ಲಿ ಮಕ್ಕಳ ಕಳ್ಳರೆಂದು ಶಂಕಿಸಿ ಇಬ್ಬರು ಸಾಧುಗಳು ಹಾಗೂ ಚಾಲಕ ಸೇರಿದಂತೆ ಒಟ್ಟು ಮೂವರನ್ನು ಜನರ ಗುಂಪೊಂದು ಹತ್ಯೆ ಮಾಡಿತ್ತು.

ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಸ್.ಬಿ. ಬಹಲ್ಕರ್ ಅವರು ತಮ್ಮ ಆದೇಶದಲ್ಲಿ 89 ಆರೋಪಿಗಳಿಗೆ ಜಾಮೀನು ನೀಡಿದ್ದು, ಪ್ರಕರಣದ ವಿಚಾರಣೆಯ ಮುಂದಿನ ದಿನಾಂಕವನ್ನು ಫೆಬ್ರವರಿ 15 ಕ್ಕೆ ನಿಗದಿಪಡಿಸಿದ್ದಾರೆ.

ಇದನ್ನೂ ಓದಿ: Fact check: ಪಾಲ್ಘರ್ ಗುಂಪು ಹತ್ಯೆಯ ಬಗ್ಗೆ ಸುಳ್ಳು ವರದಿ ಮಾಡಿದ ಪಿಟಿಐ

ಆರೋಪಿಗಳ ಪರವಾಗಿ ಹಾಜರಾದ ವಕೀಲರಾದ ಅಮೃತ್ ಅಧಿಕಾರಿ ಮತ್ತು ಅತುಲ್ ಪಾಟೀಲ್ ತಮ್ಮ ಕಕ್ಷಿದಾರಿಗೆ ದಾಳಿಯಲ್ಲಿ ಯಾವುದೇ ಪಾತ್ರವಿಲ್ಲ ಮತ್ತು ಪೊಲೀಸರು ಅವರನ್ನು ಕೇವಲ ಅನುಮಾನದಿಂದ ಬಂಧಿಸಿದ್ದಾರೆ ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಮೂರು ಎಫ್‌ಐಆರ್‌ಗಳ ಸಿಂಧುತ್ವವನ್ನೂ ಆರೋಪಿಗಳು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 201 ಜನರನ್ನು ಬಂಧಿಸಲಾಗಿದ್ದು, ಈ ಪೈಕಿ 75 ಪ್ರಮುಖ ಆರೋಪಿಗಳು ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ನನ್ನ ಮೇಲೆ ಗುಂಪು ಹಲ್ಲೆಯಾದಾಗ ನೀವೇಕೆ ಮಾತಾಡಲಿಲ್ಲ?: ಸ್ವಾಮಿ ಅಗ್ನಿವೇಶ್ ಪ್ರಶ್ನೆ

ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸತೀಶ್ ಮನೇಶಿಂದೆ ಹಾಜರಾಗಿದ್ದರೆ, ವಕೀಲ ಪಿ ಎನ್ ಓಜಾ ಸಾಧುಗಳ ಕುಟುಂಬದ ಪರವಾಗಿ ಹಾಜರಾದರು.

ಏಪ್ರಿಲ್ 16, 2020 ರಂದು, ಉದ್ರಿಕ್ತ ಗುಂಪು ಇಬ್ಬರು ಸಾಧುಗಳಾದ ಮಹಾರಾಜ್ ಕಲ್ಪವ್ರಕ್ಷಗಿರಿ (70), ಸುಶಿಲ್‌ ಗಿರಿ ಮಹಾರಾಜ್ (35), ಮತ್ತು ಅವರ ಕಾರು ಚಾಲಕ ನಿಲೇಶ್ ತೆಲ್ಗಡೆ (30) ಅವರನ್ನು ಮುಂಬೈಯಿಂದ 140 ಕಿ.ಮೀ ಉತ್ತರದಲ್ಲಿರುವ ಪಾಲ್ಘರ್ ಜಿಲ್ಲೆಯ ಗದ್ಚಿಂಚಲೆಯಲ್ಲಿ ಹತ್ಯೆ ಮಾಡಲಾಗಿತ್ತು.

ಬಿಜೆಪಿ ಮತ್ತು ಬಲಪಂಥೀಯ ಚಾನೆಲ್ ಸಂಪಾದಕ ಅರ್ನಬ್ ಗೋಸ್ವಾಮಿ ಈ ಘಟನೆಯನ್ನು ಇಟ್ಟುಕೊಂಡು ಕೋಮುಗಲಭೆಗೆ ಪ್ರಚೋದನೆ ನೀಡಿದ್ದರು.

ಇದನ್ನೂ ಓದಿ: ಪಾಲ್ಘರ್‌ ಘಟನೆಗೆ ಕೋಮು ಆಯಾಮವಿಲ್ಲ: ಮುಖ್ಯಮಂತ್ರಿ ಉದ್ದವ್ ಠಾಕ್ರೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...