Homeಮುಖಪುಟಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

- Advertisement -
- Advertisement -

ಕೊಕೇನ್ ಡ್ರಗ್ಸ್ ಪ್ರಕರಣದಲ್ಲಿ ಬಂಧಿತೆಯಾಗಿರುವ ಬಿಜೆಪಿಯ ಯುವ ವಿಭಾಗದ ನಾಯಕಿ ಪಮೇಲಾ ಗೋಸ್ವಾಮಿ ಹೆಸರಿಸಿರುವ ಬಂಗಾಳ ಬಿಜೆಪಿ ಮುಖಂಡ ರಾಕೇಶ್ ಸಿಂಗ್‌‌ನನ್ನು ರಾಜ್ಯದ ಬುರ್ದ್ವಾನ್ ಜಿಲ್ಲೆಯಲ್ಲಿ ಮಂಗಳವಾರ ಬಂಧಿಸಲಾಗಿದೆ.

ರಾಕೇಶ್ ರಸ್ತೆ ಮಾರ್ಗದ ಮೂಲಕ ರಾಜ್ಯದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಅವರು ಪರಾರಿ ಆಗುವ ಮೊದಲೇ ಬಂಗಾಳ ಪೊಲೀಸರು ಅವರನ್ನು ಮಂಗಳವಾರ ಬಂಧಿಸಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ. ಅವರ ನಿವಾಸಕ್ಕೆ ಪ್ರವೇಶಿಸಲು ಅಡ್ಡಿ ಮಾಡಿದ ರಾಕೇಶ್ ಅವರ ಇಬ್ಬರು ಗಂಡು ಮಕ್ಕಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾದಕ ದ್ರವ್ಯ ಕೊಕೇನ್ ಹೊಂದಿದ್ದ ಆರೋಪದ ಮೇಲೆ 3 ದಿನಗಳ ಹಿಂದೆ ಬಂಧಿಸಲ್ಪಟ್ಟ ಪಮೇಲಾ ಗೋಸ್ವಾಮಿ, ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ಸಹಾಯಕ ರಾಕೇಶ್ ಸಿಂಗ್ ತನ್ನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

“ಅವರು (ಬಿಜೆಪಿಯವರು) ನನ್ನನ್ನು ಬಹಳ ಸಮಯದಿಂದ ಇಂಥದ್ದರಲ್ಲಿ ಸಿಕ್ಕಿಸಲು ಪ್ರಯತ್ನಿಸುತ್ತಿದ್ದಾರೆ. ರಾಕೇಶ್ ಸಿಂಗ್ ಇದನ್ನು ಮಾಡಿದ್ದಾರೆ. ನನ್ನ ಬಳಿ ವಿಶ್ವಾಸಾರ್ಹ ಮಾಹಿತಿ ಮತ್ತು ಪುರಾವೆಗಳಿವೆ” ಎಂದು ಅವರು ಸ್ಥಳೀಯ ನ್ಯಾಯಾಲಯದ ಹೊರಗೆ ಬಂಗಾಳಿ ಭಾಷೆಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ರಾಕೇಶ್ ಸಿಂಗ್ ಅವರನ್ನು ಇಂದು (ಮಂಗಳವಾರ) ಕೋಲ್ಕತಾ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಾಜರಾಗುವಂತೆ ಕೇಳಲಾಯಿತು. ’ನಾನು ದೆಹಲಿಗೆ ಪ್ರಯಾಣಿಸುತ್ತಿದ್ದೇನೆ, ಫೆಬ್ರವರಿ 26 ರಂದು ನಗರಕ್ಕೆ ಹಿಂದಿರುಗಿದಾಗ ಪೊಲೀಸರ ಮುಂದೆ ಹಾಜರಾಗುತ್ತೇನೆ’ ಎಂದು ಹೇಳಿದ್ದರು.

ಮಂಗಳವಾರ ಮುಂಜಾನೆಯೇ ರಾಕೇಶ್ ಸಿಂಗ್ ಮನೆಯ ಹೊರಗೆ ಒಂದು ದೊಡ್ಡ ಪೊಲೀಸ್ ಪಡೆ ತಲುಪಿದ್ದು, ಅವರ ಮಕ್ಕಳು ಪೊಲೀಸರನ್ನು ಒಳಗೆ ಬಿಡಲು ನಿರಾಕರಿಸಿದರು. ಹೀಗಾಗಿ ಅವರನ್ನೂ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದೆ ಎಂದು ಹೇಳಲಾದ ಕೆಲವು ಬ್ಯಾಂಕ್ ವಹಿವಾಟುಗಳ ಬಗ್ಗೆ ಸಿಬಿಐ ತಂಡವು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಮನೆಗೆ ಭೇಟಿ ನೀಡಿದ ನಂತರ ಪಶ್ಚಿಮ ಬಂಗಾಳದಲ್ಲಿ ನಾಟಕೀಯ ವಿದ್ಯಮಾನ ಸಂಭವಿಸುತ್ತಿವೆ. ಬಂಗಾಳದ ಚುನಾವಣೆಯಲ್ಲಿ ಈಗ ರಾಜಕೀಯ ಪಕ್ಷಗಳು ಮಾತ್ರವಲ್ಲದೆ ಬಂಗಾಳ ಪೊಲೀಸರು, ಸಿಐಡಿ, ಕೇಂದ್ರದ ಸಿಬಿಐ, ಇ.ಡಿ ಇತ್ಯಾದಿ ಎಲ್ಲ ಸ್ಪರ್ಧೆಗೆ ಇಳಿದಿವೆ ಎಂದು ರಾಜಕೀಯ ವಿಶ್ಲೇಷಕರು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್‌‌‌‌ ಶಾಗೆ ಸಮನ್ಸ್ ಜಾರಿಗೊಳಿಸಿದ ಪಶ್ಚಿಮ ಬಂಗಾಳ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...