Homeಮುಖಪುಟಡ್ರಗ್ಸ್‌ ಪ್ರಕರಣ: ಪಮೇಲಾ ಗೋಸ್ವಾಮಿ ಆರೋಪ - ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ನೋಟಿಸ್

ಡ್ರಗ್ಸ್‌ ಪ್ರಕರಣ: ಪಮೇಲಾ ಗೋಸ್ವಾಮಿ ಆರೋಪ – ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ನೋಟಿಸ್

- Advertisement -
- Advertisement -

ಕಲ್ಕತ್ತಾ ಡ್ರಗ್ಸ್‌ ಪ್ರಕರಣದಲ್ಲಿ ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇತ್ತೀಚೆಗೆ ಈ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾದ ನಾಯಕಿ ಪಮೇಲಾ ಗೋಸ್ವಾಮಿ ಮತ್ತು ಇನ್ನಿಬ್ಬರನ್ನು ಬಂಧಿಸಲಾಗಿದ್ದು, ಕೊಕೆನ್ ಸಾಗಾಣೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬಂಧನದ ನಂತರ ಪಮೇಲಾ ಗೋಸ್ವಾಮಿ ಬಿಜೆಪಿ ಪಿತೂರಿ ನಡೆಸಿದೆ ಎಂದು ಆರೋಪಿಸಿದ್ದಳು. ಈ ಹಿನ್ನೆಲೆಯಲ್ಲಿ ರಾಕೇಶ್‌ ಸಿಂಗ್‌ಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಫೆಬ್ರವರಿ 23 ರಂದು ತನಿಖಾ ಅಧಿಕಾರಿಗಳ ಮುಂದೆ ಹಾಜರಾಗುವಂತೆ ರಾಕೇಶ್‌ ಸಿಂಗ್‌ಗೆ ನೋಟಿಸ್ ನೀಡಲಾಗಿದೆ” ಎಂದು ಐಪಿಎಸ್ ಅಧಿಕಾರಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಪಮೇಲಾ ಗೋಸ್ವಾಮಿ ನನ್ನ ಹೆಸರನ್ನು ಪ್ರಸ್ತಾಪಿಸಿರುವುದರಿಂದ ಇದರ ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ರಾಕೇಶ್‌ ಸಿಂಗ್ ಈ ಹಿಂದೆ ನಗರ ಪೊಲೀಸ್ ಆಯುಕ್ತ ಸೌಮೆನ್ ಮಿತ್ರಾಗೆ ಈಮೇಲ್ ಬರೆದಿದ್ದರು.

ಸಾರ್ವಜನಿಕವಾಗಿ ನನ್ನನ್ನು ಈ ಪ್ರಕರಣದಲ್ಲಿ ಆರೋಪಿಸಿರುವುದರಿಂದ ಅಕೆಯ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಈಮೇಲ್‌ನಲ್ಲಿ ಬರೆದಿದ್ದಾರೆ. ಇದರ ಪ್ರತಿಗಳನ್ನು ನ್ಯೂ ಅಲಿಪೋರ್ ಪೊಲೀಸ್ ಠಾಣೆಯ ರಾಜ್ಯ ಗೃಹ ಕಾರ್ಯದರ್ಶಿ ಮತ್ತು ಉಸ್ತುವಾರಿ ಅಧಿಕಾರಿಗೂ ಕಳುಹಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಪಮೇಲಾ ಗೋಸ್ವಾಮಿ ಪರ್ಸ್‌ ಮತ್ತು ಅವರು ಇದ್ದ ಕಾರಿನ ಸೀಟಿನಲ್ಲಿ ಕೆಲವು ಲಕ್ಷ ಮೌಲ್ಯದ ಕೊಕೇನ್ ಸಿಕ್ಕಿದ್ದಕ್ಕಾಗಿ ಕೊಲ್ಕತ್ತಾ ಪೊಲೀಸರು ಶುಕ್ರವಾರ (ಫೆ.19) ಬಂಧಿಸಿದ್ದಾರೆ. ಕಾರಿನಲ್ಲಿದ್ದ ಅವರ ಸ್ನೇಹಿತ ಮತ್ತು ಯುವ ಮೋರ್ಚಾದ ಸಹೋದ್ಯೋಗಿ ಪ್ರಬೀರ್ ಕುಮಾರ್ ಡೇ ಮತ್ತು ಭದ್ರತಾ ಸಿಬ್ಬಂದಿ ಸೋಮನಾಥ್ ಚಟರ್ಜಿಯನ್ನು ಕೂಡ ಬಂಧಿಸಲಾಗಿದೆ.

ಬಂಧನದ ನಂತರ, “ನಾನು ಸಿಐಡಿ ತನಿಖೆಯನ್ನು ಬಯಸುತ್ತೇನೆ. ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ. ಇದು ಅವರದ್ದೇ ಪಿತೂರಿ. ಅವರ ವಿರುದ್ಧ ನನ್ನ ಬಳಿ ಎಲ್ಲ ಪುರಾವೆಗಳಿವೆ” ಎಂದು  ಪಮೇಲಾ ಗೋಸ್ವಾಮಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಕೇಶ್ ಸಿಂಗ್, “ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ “ಬ್ರೈನ್ ವಾಶ್” ಮಾಡಿದ್ದಾರೆ. ನಾನು ಕಳೆದ ಒಂದು ವರ್ಷದಿಂದ ಅವರೊಂದಿಗೆ ಯಾವುದೇ ಸಂಪರ್ಕದಲ್ಲಿಲ್ಲ. ಯಾವುದೇ ಏಜೆನ್ಸಿಯ ತನಿಖೆಯನ್ನು ಎದುರಿಸಲು ತಾನು ಸಿದ್ಧ. ನಾನು ಭಾಗಿಯಾಗಿದ್ದರೆ, ನನ್ನನ್ನು ಅಥವಾ ಕೈಲಾಶ್ ವಿಜಯವರ್ಗಿಯಾ ಅಥವಾ ಅಮಿತ್ ಶಾ ಅವರನ್ನು ತನಿಖೆಗೆ ಕರೆಯಬಹುದು” ಎಂದು ಹೇಳಿದ್ದಾರೆ.

“ಕೋಲ್ಕತ್ತಾ ಪೊಲೀಸರು ತೃಣಮೂಲ ಕಾಂಗ್ರೆಸ್ ಸೂಚನೆಗಳನ್ನು ಪಾಲಿಸುವ ಸಾಧ್ಯತೆಯಿದೆ. ಅವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಇವು ಆಧಾರರಹಿತ ಆರೋಪ ಮತ್ತು ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸ್ಪೋಟ | ಜಿಲೆಟಿನ್ ಸ್ಪೋಟದಿಂದ ಅಲ್ಲ, ಯಡಿಯೂರಪ್ಪ ಸರ್ಕಾರದ ದುರಾಡಳಿತಕ್ಕೆ ಬಲಿಯಾಗಿದ್ದಾರೆ- ಸಿದ್ದರಾಮಯ್ಯ

ಕೈಲಾಶ್ ವಿಜಯವರ್ಗಿಯಾ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಉಸ್ತುವಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಈ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಮತ್ತು ಆದ್ದರಿಂದ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಪಮೇಲಾ ಗೋಸ್ವಾಮಿ ತಂದೆ ನೀಡಿದ ದೂರಿನ ನಂತರ ಆಕೆ ಮತ್ತು ಆಕೆಯ ಸ್ನೇಹಿತ ಪ್ರಬೀರ್ ಕುಮಾರ್‌ ಡೇ ಇಬ್ಬರ ಮೇಲೂ ಕಣ್ಣಿಡಲಾಗಿತ್ತು ಎಂದು ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ. ಪ್ರಬೀರ್ ಪಮೇಲಾರನ್ನು ಮಾದಕ ವ್ಯಸನಿಯನ್ನಾಗಿ ಮಾಡಿದ್ದಾನೆ ಎಂದು ನಗರ ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕೌಶಿಕ್ ಗೋಸ್ವಾಮಿ ಆರೋಪಿಸಿದ್ದರು. ಸದ್ಯ ಆರೋಪಿಗಳನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪಮೇಲಾ ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ಹೇಳಲಾಗಿದೆ. ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಗಿತ್ತು.


ಇದನ್ನೂ ಓದಿ: ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...