Homeಮುಖಪುಟಡ್ರಗ್ಸ್‌ ಪ್ರಕರಣ: ಪಮೇಲಾ ಗೋಸ್ವಾಮಿ ಆರೋಪ - ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ನೋಟಿಸ್

ಡ್ರಗ್ಸ್‌ ಪ್ರಕರಣ: ಪಮೇಲಾ ಗೋಸ್ವಾಮಿ ಆರೋಪ – ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ನೋಟಿಸ್

- Advertisement -
- Advertisement -

ಕಲ್ಕತ್ತಾ ಡ್ರಗ್ಸ್‌ ಪ್ರಕರಣದಲ್ಲಿ ಬಿಜೆಪಿ ಮುಖಂಡ ರಾಕೇಶ್‌ ಸಿಂಗ್‌ಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಇತ್ತೀಚೆಗೆ ಈ ಪ್ರಕರಣದಲ್ಲಿ ಬಿಜೆಪಿ ಯುವಮೋರ್ಚಾದ ನಾಯಕಿ ಪಮೇಲಾ ಗೋಸ್ವಾಮಿ ಮತ್ತು ಇನ್ನಿಬ್ಬರನ್ನು ಬಂಧಿಸಲಾಗಿದ್ದು, ಕೊಕೆನ್ ಸಾಗಾಣೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಬಂಧನದ ನಂತರ ಪಮೇಲಾ ಗೋಸ್ವಾಮಿ ಬಿಜೆಪಿ ಪಿತೂರಿ ನಡೆಸಿದೆ ಎಂದು ಆರೋಪಿಸಿದ್ದಳು. ಈ ಹಿನ್ನೆಲೆಯಲ್ಲಿ ರಾಕೇಶ್‌ ಸಿಂಗ್‌ಗೆ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

“ಫೆಬ್ರವರಿ 23 ರಂದು ತನಿಖಾ ಅಧಿಕಾರಿಗಳ ಮುಂದೆ ಹಾಜರಾಗುವಂತೆ ರಾಕೇಶ್‌ ಸಿಂಗ್‌ಗೆ ನೋಟಿಸ್ ನೀಡಲಾಗಿದೆ” ಎಂದು ಐಪಿಎಸ್ ಅಧಿಕಾರಿ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಪಮೇಲಾ ಗೋಸ್ವಾಮಿ ನನ್ನ ಹೆಸರನ್ನು ಪ್ರಸ್ತಾಪಿಸಿರುವುದರಿಂದ ಇದರ ತನಿಖೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ರಾಕೇಶ್‌ ಸಿಂಗ್ ಈ ಹಿಂದೆ ನಗರ ಪೊಲೀಸ್ ಆಯುಕ್ತ ಸೌಮೆನ್ ಮಿತ್ರಾಗೆ ಈಮೇಲ್ ಬರೆದಿದ್ದರು.

ಸಾರ್ವಜನಿಕವಾಗಿ ನನ್ನನ್ನು ಈ ಪ್ರಕರಣದಲ್ಲಿ ಆರೋಪಿಸಿರುವುದರಿಂದ ಅಕೆಯ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿಯೂ ಈಮೇಲ್‌ನಲ್ಲಿ ಬರೆದಿದ್ದಾರೆ. ಇದರ ಪ್ರತಿಗಳನ್ನು ನ್ಯೂ ಅಲಿಪೋರ್ ಪೊಲೀಸ್ ಠಾಣೆಯ ರಾಜ್ಯ ಗೃಹ ಕಾರ್ಯದರ್ಶಿ ಮತ್ತು ಉಸ್ತುವಾರಿ ಅಧಿಕಾರಿಗೂ ಕಳುಹಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಪಮೇಲಾ ಗೋಸ್ವಾಮಿ ಪರ್ಸ್‌ ಮತ್ತು ಅವರು ಇದ್ದ ಕಾರಿನ ಸೀಟಿನಲ್ಲಿ ಕೆಲವು ಲಕ್ಷ ಮೌಲ್ಯದ ಕೊಕೇನ್ ಸಿಕ್ಕಿದ್ದಕ್ಕಾಗಿ ಕೊಲ್ಕತ್ತಾ ಪೊಲೀಸರು ಶುಕ್ರವಾರ (ಫೆ.19) ಬಂಧಿಸಿದ್ದಾರೆ. ಕಾರಿನಲ್ಲಿದ್ದ ಅವರ ಸ್ನೇಹಿತ ಮತ್ತು ಯುವ ಮೋರ್ಚಾದ ಸಹೋದ್ಯೋಗಿ ಪ್ರಬೀರ್ ಕುಮಾರ್ ಡೇ ಮತ್ತು ಭದ್ರತಾ ಸಿಬ್ಬಂದಿ ಸೋಮನಾಥ್ ಚಟರ್ಜಿಯನ್ನು ಕೂಡ ಬಂಧಿಸಲಾಗಿದೆ.

ಬಂಧನದ ನಂತರ, “ನಾನು ಸಿಐಡಿ ತನಿಖೆಯನ್ನು ಬಯಸುತ್ತೇನೆ. ಕೈಲಾಶ್ ವಿಜಯವರ್ಗಿಯಾ ಅವರ ಆಪ್ತ ರಾಕೇಶ್ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಅವರನ್ನು ಬಂಧಿಸಿ. ಇದು ಅವರದ್ದೇ ಪಿತೂರಿ. ಅವರ ವಿರುದ್ಧ ನನ್ನ ಬಳಿ ಎಲ್ಲ ಪುರಾವೆಗಳಿವೆ” ಎಂದು  ಪಮೇಲಾ ಗೋಸ್ವಾಮಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಕೇಶ್ ಸಿಂಗ್, “ಕೋಲ್ಕತ್ತಾ ಪೊಲೀಸರು ಮತ್ತು ಆಡಳಿತಾರೂಢ ಟಿಎಂಸಿ ಪಮೇಲಾ ಗೋಸ್ವಾಮಿ ಅವರಿಗೆ “ಬ್ರೈನ್ ವಾಶ್” ಮಾಡಿದ್ದಾರೆ. ನಾನು ಕಳೆದ ಒಂದು ವರ್ಷದಿಂದ ಅವರೊಂದಿಗೆ ಯಾವುದೇ ಸಂಪರ್ಕದಲ್ಲಿಲ್ಲ. ಯಾವುದೇ ಏಜೆನ್ಸಿಯ ತನಿಖೆಯನ್ನು ಎದುರಿಸಲು ತಾನು ಸಿದ್ಧ. ನಾನು ಭಾಗಿಯಾಗಿದ್ದರೆ, ನನ್ನನ್ನು ಅಥವಾ ಕೈಲಾಶ್ ವಿಜಯವರ್ಗಿಯಾ ಅಥವಾ ಅಮಿತ್ ಶಾ ಅವರನ್ನು ತನಿಖೆಗೆ ಕರೆಯಬಹುದು” ಎಂದು ಹೇಳಿದ್ದಾರೆ.

“ಕೋಲ್ಕತ್ತಾ ಪೊಲೀಸರು ತೃಣಮೂಲ ಕಾಂಗ್ರೆಸ್ ಸೂಚನೆಗಳನ್ನು ಪಾಲಿಸುವ ಸಾಧ್ಯತೆಯಿದೆ. ಅವರು ನನ್ನ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಇವು ಆಧಾರರಹಿತ ಆರೋಪ ಮತ್ತು ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಸ್ಪೋಟ | ಜಿಲೆಟಿನ್ ಸ್ಪೋಟದಿಂದ ಅಲ್ಲ, ಯಡಿಯೂರಪ್ಪ ಸರ್ಕಾರದ ದುರಾಡಳಿತಕ್ಕೆ ಬಲಿಯಾಗಿದ್ದಾರೆ- ಸಿದ್ದರಾಮಯ್ಯ

ಕೈಲಾಶ್ ವಿಜಯವರ್ಗಿಯಾ ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯ ಉಸ್ತುವಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಈ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ ಮತ್ತು ಆದ್ದರಿಂದ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ಪಮೇಲಾ ಗೋಸ್ವಾಮಿ ತಂದೆ ನೀಡಿದ ದೂರಿನ ನಂತರ ಆಕೆ ಮತ್ತು ಆಕೆಯ ಸ್ನೇಹಿತ ಪ್ರಬೀರ್ ಕುಮಾರ್‌ ಡೇ ಇಬ್ಬರ ಮೇಲೂ ಕಣ್ಣಿಡಲಾಗಿತ್ತು ಎಂದು ಕೋಲ್ಕತಾ ಪೊಲೀಸರು ತಿಳಿಸಿದ್ದಾರೆ. ಪ್ರಬೀರ್ ಪಮೇಲಾರನ್ನು ಮಾದಕ ವ್ಯಸನಿಯನ್ನಾಗಿ ಮಾಡಿದ್ದಾನೆ ಎಂದು ನಗರ ಪೊಲೀಸ್ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ ಕೌಶಿಕ್ ಗೋಸ್ವಾಮಿ ಆರೋಪಿಸಿದ್ದರು. ಸದ್ಯ ಆರೋಪಿಗಳನ್ನು ಫೆ.25ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಪಮೇಲಾ ಗೋಸ್ವಾಮಿ ಅವರು 2019 ರಲ್ಲಿ ಬಿಜೆಪಿಗೆ ಸೇರುವ ಮೊದಲು ಏರ್ ಹೊಸ್ಟೆಸ್, ಮಾಡೆಲ್ ಮತ್ತು ಟಿವಿ ಧಾರಾವಾಹಿ ನಟಿಯಾಗಿ ಕೆಲಸ ಮಾಡಿದ್ದಾರೆಂದು ಹೇಳಲಾಗಿದೆ. ನಂತರ ಅವರನ್ನು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಹೂಗ್ಲಿ ಜಿಲ್ಲೆಯ ಯುವ ಮೋರ್ಚಾ ವೀಕ್ಷಕರಾಗಿ ನೇಮಿಸಲಾಗಿತ್ತು.


ಇದನ್ನೂ ಓದಿ: ‘ಅಗತ್ಯ ಬಿದ್ದರೆ, ಕಳೆದ ವರ್ಷ ಮಾಡಿದ್ದನ್ನು ಮತ್ತೆ ಮಾಡುತ್ತೇನೆ: ಕಪಿಲ್ ಮಿಶ್ರಾ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...