Homeಕರ್ನಾಟಕಎಲೆಮರೆ-8 : ನಮ್ಮ ನಡುವಿನ ಮಂದಣ್ಣ - ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ

ಎಲೆಮರೆ-8 : ನಮ್ಮ ನಡುವಿನ ಮಂದಣ್ಣ – ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ

- Advertisement -
- Advertisement -

ಎಲೆಮರೆ-8

ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಹದಿನಾಲ್ಕು ವರ್ಷದಿಂದ ಪಂಪಯ್ಯನ ಜತೆಗಿನ ಒಡನಾಟವನ್ನು `ಮಳೇಮಠದ ಪಂಪಯ್ಯನಿಂದಿಡಿದು ಪರಿಸರದ ಪಂಪಯ್ಯನವರೆಗೆ ಎನ್ನಬಹುದೇನೋ’. ಹೌದು ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಾನು ಎಂ.ಎ.ಪಿಹೆಚ್.ಡಿಗೆ 2002-03 ರ ಹೊತ್ತಿಗೆ ವಿದ್ಯಾರ್ಥಿಯಾಗಿ ಸೇರಿದ ಆಸುಪಾಸಿನಲ್ಲೆ ಮೆಕಾನಿಕಲ್ ಡಿಪ್ಲೊಮಾ ಓದಿದ್ದ ಪಂಪಯ್ಯ ಕನ್ನಡ ವಿವಿಯ ವಿದ್ಯಾರಣ್ಯದಲ್ಲಿ ಬುಕ್ ಅಂಡ್ ಜನರಲ್ ಸ್ಟೋರ್ ತೆರೆದು ವ್ಯಾಪಾರಿಯಾಗಿ ಕ್ಯಾಂಪಸ್ ಪ್ರವೇಶಿಸಿದರು. ನಾವು ಆತನ ಅಂಗಡಿಯ ನಿತ್ಯದ ಒಡನಾಡಿಗಳಾದೆವು. ಅವರ ಮಾತುಕತೆ ನಮ್ಮನ್ನು ಆಪ್ತರನ್ನಾಗಿಸಿತು. ಹಕ್ಕಿ, ಹಾವು, ಕ್ರಿಮಿ, ಕೀಟ, ಕರಡಿಗಳ ಬಗ್ಗೆ ನಮಗೆ ತಿಳಿಯದ ಸಂಗತಿಗಳನ್ನು ಅಚ್ಚರಿಪಡುವಂತೆ ಕಥನ ಮಾಡಿ ವಿವರಿಸುತ್ತಿದ್ದರು. ಕನ್ನಡ ಸಾಹಿತ್ಯ ಜಾನಪದ ಅಂತೆಲ್ಲಾ ಪಾಠ ಮಾಡುವ ಅಧ್ಯಾಪಕರ ಜತೆ ಪಂಪಯ್ಯನೂ ಆಗ ಪರಿಸರದ ಅಧ್ಯಾಪಕನಂತೆ ಕಂಡದ್ದು ವಿಶೇಷವೇನಲ್ಲ. ಹಾಗಾಗಿಯೇ ಪ್ರೊ.ರಹಮತ್ ತರೀಕೆರೆ ಅವರು ಪಂಪಯ್ಯನನ್ನು ತೇಜಸ್ವಿ ಜೊತೆಗಿನ ಮಂದಣ್ಣನಿದ್ದಂತೆ ಎನ್ನುತ್ತಾರೆ.

ವಿದ್ಯಾರಣ್ಯ ಕ್ಯಾಂಪಸ್ಸಿನ ಮತ್ತು ಕಮಲಾಪುರದ ಅವರ ಜನರಲ್ ಸ್ಟೋರುಗಳಿಗೆ ಗುಡ್‍ಬೈ ಹೇಳಿದ ನಂತರ ವ್ಯಾಪಾರಿ ಪಂಪಯ್ಯನು ಪೂರ್ಣಪ್ರಮಾಣದಲ್ಲಿ `ಪರಿಸರದ ಪಂಪಯ್ಯ’ನಾಗಿ ಬದಲಾದರು. ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾದ ಇವರು ಹಂಪಿ ಪರಿಸರದ ಪಕ್ಷಿಪ್ರಾಣಿಗಳನ್ನು ಒಳಗೊಂಡ ವನ್ಯಜೀವಿಗಳನ್ನು ಸೆರೆಹಿಡಿದು ಈ ಭಾಗದ ಜೀವವೈವಿಧ್ಯಗಳನ್ನು ಲೋಕದೆದುರು ತೆರೆದಿಟ್ಟರು.

ಈತನಕ ಸಾವಿರಕ್ಕೂ ಹೆಚ್ಚು ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಅಂತೆಯೇ ಹಾವುಗಳ ಬಗೆಗೆ ಜನರಿಗೆ ತಿಳಿವನ್ನೂ ಮೂಡಿಸಿದ್ದಾರೆ. ಇದರ ಪರಿಣಾಮವಾಗಿ, ಹಾವುಕಂಡರೆ ಹೊಡೆಯಲು ಕೋಲು ಹುಡುಕುತ್ತಿದ್ದವರು ಈಗ ಪಂಪಯ್ಯನ ನಂಬರಿಗೆ ಕಾಲ್ ಮಾಡಿ ಹಾವು ಹಿಡಿಯಲು ಕರೆಯುತ್ತಾರೆ.

ಹಂಪಿಗೆ ಬರುವ ವನ್ಯಜೀವಿ ಪ್ರೇಮಿಗಳಿಗೆ, ಫೋಟೋಗ್ರಾಫರ್‍ಗಳಿಗೆ ಈ ಭಾಗದಲ್ಲಿ ಸರಿಯಾದ ಮಾರ್ಗದರ್ಶನದ ಕೊರತೆಯಿತ್ತು. ಕಾರಣ ಹಂಪಿಯ ಗೈಡ್‍ಗಳೆಲ್ಲಾ ಸ್ಮಾರಕಗಳಿಗೆ ಸೀಮಿತರಾದವರು. ಅಂತಹ ಕೊರತೆಯನ್ನು ಪಂಪಯ್ಯ ತುಂಬಿದರು. ಮೂರ್ನಾಲ್ಕು ಭಾಷೆಗಳನ್ನು ಸುಲಲಿತವಾಗಿ ಮಾತನಾಡುವ ಪಂಪಯ್ಯ ಇದೀಗ ಯಾರೇ ವನ್ಯಜೀವಿ ಫೋಟೋಗ್ರಾಫರ್ಸ್ ಬಂದರೆ ಆತನೆ ಮಾರ್ಗದರ್ಶಿ. ಸ್ವತಃ ಪಂಪಯ್ಯ ಅತ್ಯುತ್ತಮ ವನ್ಯಜೀವಿ ಫೋಟೋಗ್ರಾಫರ್. ಹಾರ್ನ್‍ಬಿಲ್‍ನಂತಹ ಅಂತಾರಾಷ್ಟ್ರೀಯ ವನ್ಯಜೀವಿ ಪತ್ರಿಕೆ ಮುಖಪುಟದಲ್ಲಿ ಪಂಪಯ್ಯ ಕ್ಲಿಕ್ಕಿಸಿದ ಬೆನ್ನ ಮೇಲೆ ಮರಿಗಳ ಹೊತ್ತ ಕರಡಿಯ ಫೋಟೋ ಪ್ರಕಟವಾಗಿತ್ತು. ದರೋಜಿಯ ಕರಡಿಧಾಮವನ್ನು ಒಳಗೊಂಡ ಅರಣ್ಯ ಇಲಾಖೆಯ ವರದಿ ಇತ್ಯಾದಿಗಳ ಸರಕಾರಿ ದಾಖಲೆಗಳ ಮುಖಪುಟವನ್ನೂ, ಕನ್ನಡ ವಿಶ್ವವಿದ್ಯಾಲಯದ ವಾರ್ಷಿಕ ಕ್ಯಾಲೆಂಡರುಗಳನ್ನೂ ಪಂಪಯ್ಯನ ಫೋಟೋಗಳು ಆವರಿಸಿವೆ. ಹಂಪಿ ಉತ್ಸವಗಳಲ್ಲಿ ಫೋಟೋಪ್ರದರ್ಶನ ಮಾಡಿ ಜನಸಾಮಾನ್ಯರ ಮೆಚ್ಚುಗೆಯನ್ನೂ ಪಡೆದಿದ್ದಾರೆ. ಹೀಗೆ ವನ್ಯಜೀವಿ ಫೋಟೋಗ್ರಫಿಗೆ ಹತ್ತಾರು ಪ್ರಶಸ್ತಿಗಳು ಅರಸಿ ಬಂದಿವೆ. ವನ್ಯಜೀವಿ ಫೋಟೋಗ್ರಫಿಯಲ್ಲಿ ಪಂಪಯ್ಯ ತನ್ನದೇ ಆದ ಗುರುತನ್ನು ಕಾಯ್ದುಕೊಂಡಿದ್ದಾರೆ.

ವ್ಯಕ್ತಿಯಾಗಿ ಪಂಪಯ್ಯ ವನ್ಯಜೀವಿ ಪರಿಸರ ಅಂತೆಲ್ಲಾ ಹತ್ತಾರು ಸೂಕ್ಷ್ಮಗಳನ್ನು ಅರಿತಿರುವ ಇವರು ಶಾಲಾ ಮಕ್ಕಳಿಗೂ, ಹಲವು ಬಗೆಯ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರಿಗೂ ಭಾಷಣ, ಸಂವಾದ, ಚರ್ಚೆಗಳ ಮೂಲಕ ಈ ಅರಿವನ್ನು ಸಮುದಾಯಕ್ಕೆ ವಿಸ್ತರಿಸುತ್ತಿದ್ದಾರೆ. ಈ ಕಾರಣಕ್ಕೆ ಪಂಪಯ್ಯ ಸಮುದಾಯದ ಪರಿಸರ ಪ್ರಜ್ಞೆಯನ್ನು ಸೂಕ್ಷ್ಮಗೊಳಿಸುತ್ತಿದ್ದಾರೆ. ಇವರು ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿದ್ದಾಗಲೂ, ಕಮಲಾಪುರ ಪಟ್ಟಣ ಪಂಚಾಯ್ತಿಯ ಸದಸ್ಯ ಮತ್ತು ಅಧ್ಯಕ್ಷರಾಗಿದ್ದಾಗಲೂ ಈ ಸರಕಾರಿ ಸಂಸ್ಥೆಗಳನ್ನು ಪರಿಸರ ಪ್ರಜ್ಞೆಯನ್ನು ರೂಪಿಸುವುದಕ್ಕೆ ಬಳಸಿಕೊಂಡದ್ದು ವಿಶೇಷ.

ಇದೀಗ ತನ್ನ ಪರಿಸರದ ಅರಿವು ಮತ್ತು ಕಾಳಜಿಯನ್ನು ವಿಸ್ತರಿಸುವ ಪ್ರಾಯೋಗಿಕ ಹಂತಕ್ಕೆ ಪಂಪಯ್ಯ ಬಂದಿದ್ದಾರೆ. ಐದು ವರ್ಷದ ಹಿಂದೆ ಬರಡಾಗಿದ್ದ ನೆಲವೊಂದನ್ನು ಹಸಿರಾಗಿಸಿ ಗಮನ ಸೆಳೆದಿದ್ದಾರೆ. ಹೊಸಪೇಟೆ ತಾಲೂಕಿನ ಕಮಲಾಪುರದಿಂದ ನಾಲ್ಕು ಕಿಲೋಮೀಟರ್ ಅಂತರದ ತುಂಗಭದ್ರಾ ಜಲಾಶಯದ (ಎಚ್.ಎಲ್.ಸಿ) ಮೇಲ್ಮಟ್ಟದ ಕಾಲುವೆಯ ಬಳಿ ತುಂಗಭದ್ರ ಮಂಡಳಿಗೆ ಸೇರಿದ ಮೂರುವರೆ ಎಕರೆ ಪ್ರದೇಶದಲ್ಲಿ 60 ಬಗೆಯ 800ಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಿದ್ದಾರೆ. ಅರಣ್ಯ ಇಲಾಖೆಯಿಂದ ಗಿಡಗಳನ್ನು ಪಡೆದದ್ದು ಬಿಟ್ಟರೆ, ನೀರು ಗೊಬ್ಬರ ಪಾಲನೆಯನ್ನು ಪಂಪಯ್ಯನೇ ಸ್ವಂತ ಖರ್ಚಿನಲ್ಲಿ ನಿರ್ವಹಿಸಿದ್ದಾರೆ.

ಇದಕ್ಕೆ ಹೊಂದಿಕೊಂಡಂತೆ ಪಂಪಯ್ಯನ ಸ್ವಂತದ ಒಂದೆಕರೆ ಹೊಲವೂ ಕಾಡಿನಂತಿದೆ. ಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳ ನೀರಿನ ದಾಹ ತಣಿಸಲು ಕೃಷಿಹೊಂಡ ಹಾಕಿಸಿದ್ದಾರೆ. ಫೋಟೋಗ್ರಫಿಗಾಗಿ ಬಂಕರ್ ನಿರ್ಮಿಸಿದ್ದಾರೆ. ಇದೀಗ ಹತ್ತಾರು ವಿಧದ ಪಕ್ಷಿ ಪ್ರಾಣಿ ವನ್ಯಜೀವಿಗಳು ಈ ಪುಟ್ಟ ಅರಣ್ಯದ ಸಂಗಾತಿಗಳಾಗಿವೆ. ಹೀಗೆ ಕಮಲಾಪುರದ ಮಳೇಮಠದ ಪಂಪಯ್ಯ ನಿಧಾನಕ್ಕೆ `ಪರಿಸರದ ಪಂಪಯ್ಯ’ನಾಗಿ ರೂಪಾಂತರಗೊಂಡ ಪಯಣವೇ ಕುತೂಹಲಕಾರಿಯಾಗಿದೆ.

`1994 ರಲ್ಲಿ ದರೋಜಿ ಕರಡಿಧಾಮ ಆದಾಗ ಅದರ ಓಡಾಟದಲ್ಲಿ ಸಿಕ್ಕ ಫೋಟೋಗ್ರಾಫರ್ಸ್, ವನ್ಯಜೀವಿ ತಜ್ಞರುಗಳ ಜತೆಗಿನ ಒಡನಾಟವೇ ನನ್ನನ್ನು ಪರಿಸರಕ್ಕೆ ಹತ್ತಿರ ತಂದಿತು. ಅಲ್ಲಿಂದ ನನ್ನ ಆಸಕ್ತಿ ವನ್ಯಜೀವಿ ಪರಿಸರ ಫೋಟೋಗ್ರಫಿ ಅಂತೆಲ್ಲಾ ಹೆಚ್ಚಾಯಿತು, ಇದೀಗ ಪುಟ್ಟ ಕಾಡು ಬೆಳೆಸುವ ಮಟ್ಟಕ್ಕೆ ಬಂದಿದೆ. ಪರಿಸರದ ಬಗೆಗೆ ಸಮುದಾಯಗಳಿಗೆ, ಈಗ ಬೆಳೆಯುವ ಮಕ್ಕಳಿಗೆ ಹೆಚ್ಚಿನ ತಿಳವಳಿಕೆ ಕೊಡಬೇಕು ಎನ್ನುವುದು ನನ್ನ ಕನಸು’ ಎಂದು ಪಂಪಯ್ಯ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...