Homeಕರ್ನಾಟಕಎಲೆಮರೆ-8 : ನಮ್ಮ ನಡುವಿನ ಮಂದಣ್ಣ - ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ

ಎಲೆಮರೆ-8 : ನಮ್ಮ ನಡುವಿನ ಮಂದಣ್ಣ – ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ

- Advertisement -
- Advertisement -

ಎಲೆಮರೆ-8

ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಹದಿನಾಲ್ಕು ವರ್ಷದಿಂದ ಪಂಪಯ್ಯನ ಜತೆಗಿನ ಒಡನಾಟವನ್ನು `ಮಳೇಮಠದ ಪಂಪಯ್ಯನಿಂದಿಡಿದು ಪರಿಸರದ ಪಂಪಯ್ಯನವರೆಗೆ ಎನ್ನಬಹುದೇನೋ’. ಹೌದು ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಾನು ಎಂ.ಎ.ಪಿಹೆಚ್.ಡಿಗೆ 2002-03 ರ ಹೊತ್ತಿಗೆ ವಿದ್ಯಾರ್ಥಿಯಾಗಿ ಸೇರಿದ ಆಸುಪಾಸಿನಲ್ಲೆ ಮೆಕಾನಿಕಲ್ ಡಿಪ್ಲೊಮಾ ಓದಿದ್ದ ಪಂಪಯ್ಯ ಕನ್ನಡ ವಿವಿಯ ವಿದ್ಯಾರಣ್ಯದಲ್ಲಿ ಬುಕ್ ಅಂಡ್ ಜನರಲ್ ಸ್ಟೋರ್ ತೆರೆದು ವ್ಯಾಪಾರಿಯಾಗಿ ಕ್ಯಾಂಪಸ್ ಪ್ರವೇಶಿಸಿದರು. ನಾವು ಆತನ ಅಂಗಡಿಯ ನಿತ್ಯದ ಒಡನಾಡಿಗಳಾದೆವು. ಅವರ ಮಾತುಕತೆ ನಮ್ಮನ್ನು ಆಪ್ತರನ್ನಾಗಿಸಿತು. ಹಕ್ಕಿ, ಹಾವು, ಕ್ರಿಮಿ, ಕೀಟ, ಕರಡಿಗಳ ಬಗ್ಗೆ ನಮಗೆ ತಿಳಿಯದ ಸಂಗತಿಗಳನ್ನು ಅಚ್ಚರಿಪಡುವಂತೆ ಕಥನ ಮಾಡಿ ವಿವರಿಸುತ್ತಿದ್ದರು. ಕನ್ನಡ ಸಾಹಿತ್ಯ ಜಾನಪದ ಅಂತೆಲ್ಲಾ ಪಾಠ ಮಾಡುವ ಅಧ್ಯಾಪಕರ ಜತೆ ಪಂಪಯ್ಯನೂ ಆಗ ಪರಿಸರದ ಅಧ್ಯಾಪಕನಂತೆ ಕಂಡದ್ದು ವಿಶೇಷವೇನಲ್ಲ. ಹಾಗಾಗಿಯೇ ಪ್ರೊ.ರಹಮತ್ ತರೀಕೆರೆ ಅವರು ಪಂಪಯ್ಯನನ್ನು ತೇಜಸ್ವಿ ಜೊತೆಗಿನ ಮಂದಣ್ಣನಿದ್ದಂತೆ ಎನ್ನುತ್ತಾರೆ.

ವಿದ್ಯಾರಣ್ಯ ಕ್ಯಾಂಪಸ್ಸಿನ ಮತ್ತು ಕಮಲಾಪುರದ ಅವರ ಜನರಲ್ ಸ್ಟೋರುಗಳಿಗೆ ಗುಡ್‍ಬೈ ಹೇಳಿದ ನಂತರ ವ್ಯಾಪಾರಿ ಪಂಪಯ್ಯನು ಪೂರ್ಣಪ್ರಮಾಣದಲ್ಲಿ `ಪರಿಸರದ ಪಂಪಯ್ಯ’ನಾಗಿ ಬದಲಾದರು. ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾದ ಇವರು ಹಂಪಿ ಪರಿಸರದ ಪಕ್ಷಿಪ್ರಾಣಿಗಳನ್ನು ಒಳಗೊಂಡ ವನ್ಯಜೀವಿಗಳನ್ನು ಸೆರೆಹಿಡಿದು ಈ ಭಾಗದ ಜೀವವೈವಿಧ್ಯಗಳನ್ನು ಲೋಕದೆದುರು ತೆರೆದಿಟ್ಟರು.

ಈತನಕ ಸಾವಿರಕ್ಕೂ ಹೆಚ್ಚು ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಅಂತೆಯೇ ಹಾವುಗಳ ಬಗೆಗೆ ಜನರಿಗೆ ತಿಳಿವನ್ನೂ ಮೂಡಿಸಿದ್ದಾರೆ. ಇದರ ಪರಿಣಾಮವಾಗಿ, ಹಾವುಕಂಡರೆ ಹೊಡೆಯಲು ಕೋಲು ಹುಡುಕುತ್ತಿದ್ದವರು ಈಗ ಪಂಪಯ್ಯನ ನಂಬರಿಗೆ ಕಾಲ್ ಮಾಡಿ ಹಾವು ಹಿಡಿಯಲು ಕರೆಯುತ್ತಾರೆ.

ಹಂಪಿಗೆ ಬರುವ ವನ್ಯಜೀವಿ ಪ್ರೇಮಿಗಳಿಗೆ, ಫೋಟೋಗ್ರಾಫರ್‍ಗಳಿಗೆ ಈ ಭಾಗದಲ್ಲಿ ಸರಿಯಾದ ಮಾರ್ಗದರ್ಶನದ ಕೊರತೆಯಿತ್ತು. ಕಾರಣ ಹಂಪಿಯ ಗೈಡ್‍ಗಳೆಲ್ಲಾ ಸ್ಮಾರಕಗಳಿಗೆ ಸೀಮಿತರಾದವರು. ಅಂತಹ ಕೊರತೆಯನ್ನು ಪಂಪಯ್ಯ ತುಂಬಿದರು. ಮೂರ್ನಾಲ್ಕು ಭಾಷೆಗಳನ್ನು ಸುಲಲಿತವಾಗಿ ಮಾತನಾಡುವ ಪಂಪಯ್ಯ ಇದೀಗ ಯಾರೇ ವನ್ಯಜೀವಿ ಫೋಟೋಗ್ರಾಫರ್ಸ್ ಬಂದರೆ ಆತನೆ ಮಾರ್ಗದರ್ಶಿ. ಸ್ವತಃ ಪಂಪಯ್ಯ ಅತ್ಯುತ್ತಮ ವನ್ಯಜೀವಿ ಫೋಟೋಗ್ರಾಫರ್. ಹಾರ್ನ್‍ಬಿಲ್‍ನಂತಹ ಅಂತಾರಾಷ್ಟ್ರೀಯ ವನ್ಯಜೀವಿ ಪತ್ರಿಕೆ ಮುಖಪುಟದಲ್ಲಿ ಪಂಪಯ್ಯ ಕ್ಲಿಕ್ಕಿಸಿದ ಬೆನ್ನ ಮೇಲೆ ಮರಿಗಳ ಹೊತ್ತ ಕರಡಿಯ ಫೋಟೋ ಪ್ರಕಟವಾಗಿತ್ತು. ದರೋಜಿಯ ಕರಡಿಧಾಮವನ್ನು ಒಳಗೊಂಡ ಅರಣ್ಯ ಇಲಾಖೆಯ ವರದಿ ಇತ್ಯಾದಿಗಳ ಸರಕಾರಿ ದಾಖಲೆಗಳ ಮುಖಪುಟವನ್ನೂ, ಕನ್ನಡ ವಿಶ್ವವಿದ್ಯಾಲಯದ ವಾರ್ಷಿಕ ಕ್ಯಾಲೆಂಡರುಗಳನ್ನೂ ಪಂಪಯ್ಯನ ಫೋಟೋಗಳು ಆವರಿಸಿವೆ. ಹಂಪಿ ಉತ್ಸವಗಳಲ್ಲಿ ಫೋಟೋಪ್ರದರ್ಶನ ಮಾಡಿ ಜನಸಾಮಾನ್ಯರ ಮೆಚ್ಚುಗೆಯನ್ನೂ ಪಡೆದಿದ್ದಾರೆ. ಹೀಗೆ ವನ್ಯಜೀವಿ ಫೋಟೋಗ್ರಫಿಗೆ ಹತ್ತಾರು ಪ್ರಶಸ್ತಿಗಳು ಅರಸಿ ಬಂದಿವೆ. ವನ್ಯಜೀವಿ ಫೋಟೋಗ್ರಫಿಯಲ್ಲಿ ಪಂಪಯ್ಯ ತನ್ನದೇ ಆದ ಗುರುತನ್ನು ಕಾಯ್ದುಕೊಂಡಿದ್ದಾರೆ.

ವ್ಯಕ್ತಿಯಾಗಿ ಪಂಪಯ್ಯ ವನ್ಯಜೀವಿ ಪರಿಸರ ಅಂತೆಲ್ಲಾ ಹತ್ತಾರು ಸೂಕ್ಷ್ಮಗಳನ್ನು ಅರಿತಿರುವ ಇವರು ಶಾಲಾ ಮಕ್ಕಳಿಗೂ, ಹಲವು ಬಗೆಯ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರಿಗೂ ಭಾಷಣ, ಸಂವಾದ, ಚರ್ಚೆಗಳ ಮೂಲಕ ಈ ಅರಿವನ್ನು ಸಮುದಾಯಕ್ಕೆ ವಿಸ್ತರಿಸುತ್ತಿದ್ದಾರೆ. ಈ ಕಾರಣಕ್ಕೆ ಪಂಪಯ್ಯ ಸಮುದಾಯದ ಪರಿಸರ ಪ್ರಜ್ಞೆಯನ್ನು ಸೂಕ್ಷ್ಮಗೊಳಿಸುತ್ತಿದ್ದಾರೆ. ಇವರು ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿದ್ದಾಗಲೂ, ಕಮಲಾಪುರ ಪಟ್ಟಣ ಪಂಚಾಯ್ತಿಯ ಸದಸ್ಯ ಮತ್ತು ಅಧ್ಯಕ್ಷರಾಗಿದ್ದಾಗಲೂ ಈ ಸರಕಾರಿ ಸಂಸ್ಥೆಗಳನ್ನು ಪರಿಸರ ಪ್ರಜ್ಞೆಯನ್ನು ರೂಪಿಸುವುದಕ್ಕೆ ಬಳಸಿಕೊಂಡದ್ದು ವಿಶೇಷ.

ಇದೀಗ ತನ್ನ ಪರಿಸರದ ಅರಿವು ಮತ್ತು ಕಾಳಜಿಯನ್ನು ವಿಸ್ತರಿಸುವ ಪ್ರಾಯೋಗಿಕ ಹಂತಕ್ಕೆ ಪಂಪಯ್ಯ ಬಂದಿದ್ದಾರೆ. ಐದು ವರ್ಷದ ಹಿಂದೆ ಬರಡಾಗಿದ್ದ ನೆಲವೊಂದನ್ನು ಹಸಿರಾಗಿಸಿ ಗಮನ ಸೆಳೆದಿದ್ದಾರೆ. ಹೊಸಪೇಟೆ ತಾಲೂಕಿನ ಕಮಲಾಪುರದಿಂದ ನಾಲ್ಕು ಕಿಲೋಮೀಟರ್ ಅಂತರದ ತುಂಗಭದ್ರಾ ಜಲಾಶಯದ (ಎಚ್.ಎಲ್.ಸಿ) ಮೇಲ್ಮಟ್ಟದ ಕಾಲುವೆಯ ಬಳಿ ತುಂಗಭದ್ರ ಮಂಡಳಿಗೆ ಸೇರಿದ ಮೂರುವರೆ ಎಕರೆ ಪ್ರದೇಶದಲ್ಲಿ 60 ಬಗೆಯ 800ಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಿದ್ದಾರೆ. ಅರಣ್ಯ ಇಲಾಖೆಯಿಂದ ಗಿಡಗಳನ್ನು ಪಡೆದದ್ದು ಬಿಟ್ಟರೆ, ನೀರು ಗೊಬ್ಬರ ಪಾಲನೆಯನ್ನು ಪಂಪಯ್ಯನೇ ಸ್ವಂತ ಖರ್ಚಿನಲ್ಲಿ ನಿರ್ವಹಿಸಿದ್ದಾರೆ.

ಇದಕ್ಕೆ ಹೊಂದಿಕೊಂಡಂತೆ ಪಂಪಯ್ಯನ ಸ್ವಂತದ ಒಂದೆಕರೆ ಹೊಲವೂ ಕಾಡಿನಂತಿದೆ. ಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳ ನೀರಿನ ದಾಹ ತಣಿಸಲು ಕೃಷಿಹೊಂಡ ಹಾಕಿಸಿದ್ದಾರೆ. ಫೋಟೋಗ್ರಫಿಗಾಗಿ ಬಂಕರ್ ನಿರ್ಮಿಸಿದ್ದಾರೆ. ಇದೀಗ ಹತ್ತಾರು ವಿಧದ ಪಕ್ಷಿ ಪ್ರಾಣಿ ವನ್ಯಜೀವಿಗಳು ಈ ಪುಟ್ಟ ಅರಣ್ಯದ ಸಂಗಾತಿಗಳಾಗಿವೆ. ಹೀಗೆ ಕಮಲಾಪುರದ ಮಳೇಮಠದ ಪಂಪಯ್ಯ ನಿಧಾನಕ್ಕೆ `ಪರಿಸರದ ಪಂಪಯ್ಯ’ನಾಗಿ ರೂಪಾಂತರಗೊಂಡ ಪಯಣವೇ ಕುತೂಹಲಕಾರಿಯಾಗಿದೆ.

`1994 ರಲ್ಲಿ ದರೋಜಿ ಕರಡಿಧಾಮ ಆದಾಗ ಅದರ ಓಡಾಟದಲ್ಲಿ ಸಿಕ್ಕ ಫೋಟೋಗ್ರಾಫರ್ಸ್, ವನ್ಯಜೀವಿ ತಜ್ಞರುಗಳ ಜತೆಗಿನ ಒಡನಾಟವೇ ನನ್ನನ್ನು ಪರಿಸರಕ್ಕೆ ಹತ್ತಿರ ತಂದಿತು. ಅಲ್ಲಿಂದ ನನ್ನ ಆಸಕ್ತಿ ವನ್ಯಜೀವಿ ಪರಿಸರ ಫೋಟೋಗ್ರಫಿ ಅಂತೆಲ್ಲಾ ಹೆಚ್ಚಾಯಿತು, ಇದೀಗ ಪುಟ್ಟ ಕಾಡು ಬೆಳೆಸುವ ಮಟ್ಟಕ್ಕೆ ಬಂದಿದೆ. ಪರಿಸರದ ಬಗೆಗೆ ಸಮುದಾಯಗಳಿಗೆ, ಈಗ ಬೆಳೆಯುವ ಮಕ್ಕಳಿಗೆ ಹೆಚ್ಚಿನ ತಿಳವಳಿಕೆ ಕೊಡಬೇಕು ಎನ್ನುವುದು ನನ್ನ ಕನಸು’ ಎಂದು ಪಂಪಯ್ಯ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...