Homeಕರ್ನಾಟಕಎಲೆಮರೆ-8 : ನಮ್ಮ ನಡುವಿನ ಮಂದಣ್ಣ - ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ

ಎಲೆಮರೆ-8 : ನಮ್ಮ ನಡುವಿನ ಮಂದಣ್ಣ – ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ

- Advertisement -
- Advertisement -

ಎಲೆಮರೆ-8

ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಹದಿನಾಲ್ಕು ವರ್ಷದಿಂದ ಪಂಪಯ್ಯನ ಜತೆಗಿನ ಒಡನಾಟವನ್ನು `ಮಳೇಮಠದ ಪಂಪಯ್ಯನಿಂದಿಡಿದು ಪರಿಸರದ ಪಂಪಯ್ಯನವರೆಗೆ ಎನ್ನಬಹುದೇನೋ’. ಹೌದು ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಾನು ಎಂ.ಎ.ಪಿಹೆಚ್.ಡಿಗೆ 2002-03 ರ ಹೊತ್ತಿಗೆ ವಿದ್ಯಾರ್ಥಿಯಾಗಿ ಸೇರಿದ ಆಸುಪಾಸಿನಲ್ಲೆ ಮೆಕಾನಿಕಲ್ ಡಿಪ್ಲೊಮಾ ಓದಿದ್ದ ಪಂಪಯ್ಯ ಕನ್ನಡ ವಿವಿಯ ವಿದ್ಯಾರಣ್ಯದಲ್ಲಿ ಬುಕ್ ಅಂಡ್ ಜನರಲ್ ಸ್ಟೋರ್ ತೆರೆದು ವ್ಯಾಪಾರಿಯಾಗಿ ಕ್ಯಾಂಪಸ್ ಪ್ರವೇಶಿಸಿದರು. ನಾವು ಆತನ ಅಂಗಡಿಯ ನಿತ್ಯದ ಒಡನಾಡಿಗಳಾದೆವು. ಅವರ ಮಾತುಕತೆ ನಮ್ಮನ್ನು ಆಪ್ತರನ್ನಾಗಿಸಿತು. ಹಕ್ಕಿ, ಹಾವು, ಕ್ರಿಮಿ, ಕೀಟ, ಕರಡಿಗಳ ಬಗ್ಗೆ ನಮಗೆ ತಿಳಿಯದ ಸಂಗತಿಗಳನ್ನು ಅಚ್ಚರಿಪಡುವಂತೆ ಕಥನ ಮಾಡಿ ವಿವರಿಸುತ್ತಿದ್ದರು. ಕನ್ನಡ ಸಾಹಿತ್ಯ ಜಾನಪದ ಅಂತೆಲ್ಲಾ ಪಾಠ ಮಾಡುವ ಅಧ್ಯಾಪಕರ ಜತೆ ಪಂಪಯ್ಯನೂ ಆಗ ಪರಿಸರದ ಅಧ್ಯಾಪಕನಂತೆ ಕಂಡದ್ದು ವಿಶೇಷವೇನಲ್ಲ. ಹಾಗಾಗಿಯೇ ಪ್ರೊ.ರಹಮತ್ ತರೀಕೆರೆ ಅವರು ಪಂಪಯ್ಯನನ್ನು ತೇಜಸ್ವಿ ಜೊತೆಗಿನ ಮಂದಣ್ಣನಿದ್ದಂತೆ ಎನ್ನುತ್ತಾರೆ.

ವಿದ್ಯಾರಣ್ಯ ಕ್ಯಾಂಪಸ್ಸಿನ ಮತ್ತು ಕಮಲಾಪುರದ ಅವರ ಜನರಲ್ ಸ್ಟೋರುಗಳಿಗೆ ಗುಡ್‍ಬೈ ಹೇಳಿದ ನಂತರ ವ್ಯಾಪಾರಿ ಪಂಪಯ್ಯನು ಪೂರ್ಣಪ್ರಮಾಣದಲ್ಲಿ `ಪರಿಸರದ ಪಂಪಯ್ಯ’ನಾಗಿ ಬದಲಾದರು. ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾದ ಇವರು ಹಂಪಿ ಪರಿಸರದ ಪಕ್ಷಿಪ್ರಾಣಿಗಳನ್ನು ಒಳಗೊಂಡ ವನ್ಯಜೀವಿಗಳನ್ನು ಸೆರೆಹಿಡಿದು ಈ ಭಾಗದ ಜೀವವೈವಿಧ್ಯಗಳನ್ನು ಲೋಕದೆದುರು ತೆರೆದಿಟ್ಟರು.

ಈತನಕ ಸಾವಿರಕ್ಕೂ ಹೆಚ್ಚು ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಅಂತೆಯೇ ಹಾವುಗಳ ಬಗೆಗೆ ಜನರಿಗೆ ತಿಳಿವನ್ನೂ ಮೂಡಿಸಿದ್ದಾರೆ. ಇದರ ಪರಿಣಾಮವಾಗಿ, ಹಾವುಕಂಡರೆ ಹೊಡೆಯಲು ಕೋಲು ಹುಡುಕುತ್ತಿದ್ದವರು ಈಗ ಪಂಪಯ್ಯನ ನಂಬರಿಗೆ ಕಾಲ್ ಮಾಡಿ ಹಾವು ಹಿಡಿಯಲು ಕರೆಯುತ್ತಾರೆ.

ಹಂಪಿಗೆ ಬರುವ ವನ್ಯಜೀವಿ ಪ್ರೇಮಿಗಳಿಗೆ, ಫೋಟೋಗ್ರಾಫರ್‍ಗಳಿಗೆ ಈ ಭಾಗದಲ್ಲಿ ಸರಿಯಾದ ಮಾರ್ಗದರ್ಶನದ ಕೊರತೆಯಿತ್ತು. ಕಾರಣ ಹಂಪಿಯ ಗೈಡ್‍ಗಳೆಲ್ಲಾ ಸ್ಮಾರಕಗಳಿಗೆ ಸೀಮಿತರಾದವರು. ಅಂತಹ ಕೊರತೆಯನ್ನು ಪಂಪಯ್ಯ ತುಂಬಿದರು. ಮೂರ್ನಾಲ್ಕು ಭಾಷೆಗಳನ್ನು ಸುಲಲಿತವಾಗಿ ಮಾತನಾಡುವ ಪಂಪಯ್ಯ ಇದೀಗ ಯಾರೇ ವನ್ಯಜೀವಿ ಫೋಟೋಗ್ರಾಫರ್ಸ್ ಬಂದರೆ ಆತನೆ ಮಾರ್ಗದರ್ಶಿ. ಸ್ವತಃ ಪಂಪಯ್ಯ ಅತ್ಯುತ್ತಮ ವನ್ಯಜೀವಿ ಫೋಟೋಗ್ರಾಫರ್. ಹಾರ್ನ್‍ಬಿಲ್‍ನಂತಹ ಅಂತಾರಾಷ್ಟ್ರೀಯ ವನ್ಯಜೀವಿ ಪತ್ರಿಕೆ ಮುಖಪುಟದಲ್ಲಿ ಪಂಪಯ್ಯ ಕ್ಲಿಕ್ಕಿಸಿದ ಬೆನ್ನ ಮೇಲೆ ಮರಿಗಳ ಹೊತ್ತ ಕರಡಿಯ ಫೋಟೋ ಪ್ರಕಟವಾಗಿತ್ತು. ದರೋಜಿಯ ಕರಡಿಧಾಮವನ್ನು ಒಳಗೊಂಡ ಅರಣ್ಯ ಇಲಾಖೆಯ ವರದಿ ಇತ್ಯಾದಿಗಳ ಸರಕಾರಿ ದಾಖಲೆಗಳ ಮುಖಪುಟವನ್ನೂ, ಕನ್ನಡ ವಿಶ್ವವಿದ್ಯಾಲಯದ ವಾರ್ಷಿಕ ಕ್ಯಾಲೆಂಡರುಗಳನ್ನೂ ಪಂಪಯ್ಯನ ಫೋಟೋಗಳು ಆವರಿಸಿವೆ. ಹಂಪಿ ಉತ್ಸವಗಳಲ್ಲಿ ಫೋಟೋಪ್ರದರ್ಶನ ಮಾಡಿ ಜನಸಾಮಾನ್ಯರ ಮೆಚ್ಚುಗೆಯನ್ನೂ ಪಡೆದಿದ್ದಾರೆ. ಹೀಗೆ ವನ್ಯಜೀವಿ ಫೋಟೋಗ್ರಫಿಗೆ ಹತ್ತಾರು ಪ್ರಶಸ್ತಿಗಳು ಅರಸಿ ಬಂದಿವೆ. ವನ್ಯಜೀವಿ ಫೋಟೋಗ್ರಫಿಯಲ್ಲಿ ಪಂಪಯ್ಯ ತನ್ನದೇ ಆದ ಗುರುತನ್ನು ಕಾಯ್ದುಕೊಂಡಿದ್ದಾರೆ.

ವ್ಯಕ್ತಿಯಾಗಿ ಪಂಪಯ್ಯ ವನ್ಯಜೀವಿ ಪರಿಸರ ಅಂತೆಲ್ಲಾ ಹತ್ತಾರು ಸೂಕ್ಷ್ಮಗಳನ್ನು ಅರಿತಿರುವ ಇವರು ಶಾಲಾ ಮಕ್ಕಳಿಗೂ, ಹಲವು ಬಗೆಯ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರಿಗೂ ಭಾಷಣ, ಸಂವಾದ, ಚರ್ಚೆಗಳ ಮೂಲಕ ಈ ಅರಿವನ್ನು ಸಮುದಾಯಕ್ಕೆ ವಿಸ್ತರಿಸುತ್ತಿದ್ದಾರೆ. ಈ ಕಾರಣಕ್ಕೆ ಪಂಪಯ್ಯ ಸಮುದಾಯದ ಪರಿಸರ ಪ್ರಜ್ಞೆಯನ್ನು ಸೂಕ್ಷ್ಮಗೊಳಿಸುತ್ತಿದ್ದಾರೆ. ಇವರು ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿದ್ದಾಗಲೂ, ಕಮಲಾಪುರ ಪಟ್ಟಣ ಪಂಚಾಯ್ತಿಯ ಸದಸ್ಯ ಮತ್ತು ಅಧ್ಯಕ್ಷರಾಗಿದ್ದಾಗಲೂ ಈ ಸರಕಾರಿ ಸಂಸ್ಥೆಗಳನ್ನು ಪರಿಸರ ಪ್ರಜ್ಞೆಯನ್ನು ರೂಪಿಸುವುದಕ್ಕೆ ಬಳಸಿಕೊಂಡದ್ದು ವಿಶೇಷ.

ಇದೀಗ ತನ್ನ ಪರಿಸರದ ಅರಿವು ಮತ್ತು ಕಾಳಜಿಯನ್ನು ವಿಸ್ತರಿಸುವ ಪ್ರಾಯೋಗಿಕ ಹಂತಕ್ಕೆ ಪಂಪಯ್ಯ ಬಂದಿದ್ದಾರೆ. ಐದು ವರ್ಷದ ಹಿಂದೆ ಬರಡಾಗಿದ್ದ ನೆಲವೊಂದನ್ನು ಹಸಿರಾಗಿಸಿ ಗಮನ ಸೆಳೆದಿದ್ದಾರೆ. ಹೊಸಪೇಟೆ ತಾಲೂಕಿನ ಕಮಲಾಪುರದಿಂದ ನಾಲ್ಕು ಕಿಲೋಮೀಟರ್ ಅಂತರದ ತುಂಗಭದ್ರಾ ಜಲಾಶಯದ (ಎಚ್.ಎಲ್.ಸಿ) ಮೇಲ್ಮಟ್ಟದ ಕಾಲುವೆಯ ಬಳಿ ತುಂಗಭದ್ರ ಮಂಡಳಿಗೆ ಸೇರಿದ ಮೂರುವರೆ ಎಕರೆ ಪ್ರದೇಶದಲ್ಲಿ 60 ಬಗೆಯ 800ಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಿದ್ದಾರೆ. ಅರಣ್ಯ ಇಲಾಖೆಯಿಂದ ಗಿಡಗಳನ್ನು ಪಡೆದದ್ದು ಬಿಟ್ಟರೆ, ನೀರು ಗೊಬ್ಬರ ಪಾಲನೆಯನ್ನು ಪಂಪಯ್ಯನೇ ಸ್ವಂತ ಖರ್ಚಿನಲ್ಲಿ ನಿರ್ವಹಿಸಿದ್ದಾರೆ.

ಇದಕ್ಕೆ ಹೊಂದಿಕೊಂಡಂತೆ ಪಂಪಯ್ಯನ ಸ್ವಂತದ ಒಂದೆಕರೆ ಹೊಲವೂ ಕಾಡಿನಂತಿದೆ. ಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳ ನೀರಿನ ದಾಹ ತಣಿಸಲು ಕೃಷಿಹೊಂಡ ಹಾಕಿಸಿದ್ದಾರೆ. ಫೋಟೋಗ್ರಫಿಗಾಗಿ ಬಂಕರ್ ನಿರ್ಮಿಸಿದ್ದಾರೆ. ಇದೀಗ ಹತ್ತಾರು ವಿಧದ ಪಕ್ಷಿ ಪ್ರಾಣಿ ವನ್ಯಜೀವಿಗಳು ಈ ಪುಟ್ಟ ಅರಣ್ಯದ ಸಂಗಾತಿಗಳಾಗಿವೆ. ಹೀಗೆ ಕಮಲಾಪುರದ ಮಳೇಮಠದ ಪಂಪಯ್ಯ ನಿಧಾನಕ್ಕೆ `ಪರಿಸರದ ಪಂಪಯ್ಯ’ನಾಗಿ ರೂಪಾಂತರಗೊಂಡ ಪಯಣವೇ ಕುತೂಹಲಕಾರಿಯಾಗಿದೆ.

`1994 ರಲ್ಲಿ ದರೋಜಿ ಕರಡಿಧಾಮ ಆದಾಗ ಅದರ ಓಡಾಟದಲ್ಲಿ ಸಿಕ್ಕ ಫೋಟೋಗ್ರಾಫರ್ಸ್, ವನ್ಯಜೀವಿ ತಜ್ಞರುಗಳ ಜತೆಗಿನ ಒಡನಾಟವೇ ನನ್ನನ್ನು ಪರಿಸರಕ್ಕೆ ಹತ್ತಿರ ತಂದಿತು. ಅಲ್ಲಿಂದ ನನ್ನ ಆಸಕ್ತಿ ವನ್ಯಜೀವಿ ಪರಿಸರ ಫೋಟೋಗ್ರಫಿ ಅಂತೆಲ್ಲಾ ಹೆಚ್ಚಾಯಿತು, ಇದೀಗ ಪುಟ್ಟ ಕಾಡು ಬೆಳೆಸುವ ಮಟ್ಟಕ್ಕೆ ಬಂದಿದೆ. ಪರಿಸರದ ಬಗೆಗೆ ಸಮುದಾಯಗಳಿಗೆ, ಈಗ ಬೆಳೆಯುವ ಮಕ್ಕಳಿಗೆ ಹೆಚ್ಚಿನ ತಿಳವಳಿಕೆ ಕೊಡಬೇಕು ಎನ್ನುವುದು ನನ್ನ ಕನಸು’ ಎಂದು ಪಂಪಯ್ಯ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...