Homeಕರ್ನಾಟಕಎಲೆಮರೆ-8 : ನಮ್ಮ ನಡುವಿನ ಮಂದಣ್ಣ - ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ

ಎಲೆಮರೆ-8 : ನಮ್ಮ ನಡುವಿನ ಮಂದಣ್ಣ – ಪರಿಸರ ಪ್ರೇಮಿ ಮಳಿಮಠದ ಪಂಪಯ್ಯ

- Advertisement -
- Advertisement -

ಎಲೆಮರೆ-8

ಅರುಣ್‌ ಜೋಳದ ಕೂಡ್ಲಿಗಿ

ಕಳೆದ ಹದಿನಾಲ್ಕು ವರ್ಷದಿಂದ ಪಂಪಯ್ಯನ ಜತೆಗಿನ ಒಡನಾಟವನ್ನು `ಮಳೇಮಠದ ಪಂಪಯ್ಯನಿಂದಿಡಿದು ಪರಿಸರದ ಪಂಪಯ್ಯನವರೆಗೆ ಎನ್ನಬಹುದೇನೋ’. ಹೌದು ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಾನು ಎಂ.ಎ.ಪಿಹೆಚ್.ಡಿಗೆ 2002-03 ರ ಹೊತ್ತಿಗೆ ವಿದ್ಯಾರ್ಥಿಯಾಗಿ ಸೇರಿದ ಆಸುಪಾಸಿನಲ್ಲೆ ಮೆಕಾನಿಕಲ್ ಡಿಪ್ಲೊಮಾ ಓದಿದ್ದ ಪಂಪಯ್ಯ ಕನ್ನಡ ವಿವಿಯ ವಿದ್ಯಾರಣ್ಯದಲ್ಲಿ ಬುಕ್ ಅಂಡ್ ಜನರಲ್ ಸ್ಟೋರ್ ತೆರೆದು ವ್ಯಾಪಾರಿಯಾಗಿ ಕ್ಯಾಂಪಸ್ ಪ್ರವೇಶಿಸಿದರು. ನಾವು ಆತನ ಅಂಗಡಿಯ ನಿತ್ಯದ ಒಡನಾಡಿಗಳಾದೆವು. ಅವರ ಮಾತುಕತೆ ನಮ್ಮನ್ನು ಆಪ್ತರನ್ನಾಗಿಸಿತು. ಹಕ್ಕಿ, ಹಾವು, ಕ್ರಿಮಿ, ಕೀಟ, ಕರಡಿಗಳ ಬಗ್ಗೆ ನಮಗೆ ತಿಳಿಯದ ಸಂಗತಿಗಳನ್ನು ಅಚ್ಚರಿಪಡುವಂತೆ ಕಥನ ಮಾಡಿ ವಿವರಿಸುತ್ತಿದ್ದರು. ಕನ್ನಡ ಸಾಹಿತ್ಯ ಜಾನಪದ ಅಂತೆಲ್ಲಾ ಪಾಠ ಮಾಡುವ ಅಧ್ಯಾಪಕರ ಜತೆ ಪಂಪಯ್ಯನೂ ಆಗ ಪರಿಸರದ ಅಧ್ಯಾಪಕನಂತೆ ಕಂಡದ್ದು ವಿಶೇಷವೇನಲ್ಲ. ಹಾಗಾಗಿಯೇ ಪ್ರೊ.ರಹಮತ್ ತರೀಕೆರೆ ಅವರು ಪಂಪಯ್ಯನನ್ನು ತೇಜಸ್ವಿ ಜೊತೆಗಿನ ಮಂದಣ್ಣನಿದ್ದಂತೆ ಎನ್ನುತ್ತಾರೆ.

ವಿದ್ಯಾರಣ್ಯ ಕ್ಯಾಂಪಸ್ಸಿನ ಮತ್ತು ಕಮಲಾಪುರದ ಅವರ ಜನರಲ್ ಸ್ಟೋರುಗಳಿಗೆ ಗುಡ್‍ಬೈ ಹೇಳಿದ ನಂತರ ವ್ಯಾಪಾರಿ ಪಂಪಯ್ಯನು ಪೂರ್ಣಪ್ರಮಾಣದಲ್ಲಿ `ಪರಿಸರದ ಪಂಪಯ್ಯ’ನಾಗಿ ಬದಲಾದರು. ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾದ ಇವರು ಹಂಪಿ ಪರಿಸರದ ಪಕ್ಷಿಪ್ರಾಣಿಗಳನ್ನು ಒಳಗೊಂಡ ವನ್ಯಜೀವಿಗಳನ್ನು ಸೆರೆಹಿಡಿದು ಈ ಭಾಗದ ಜೀವವೈವಿಧ್ಯಗಳನ್ನು ಲೋಕದೆದುರು ತೆರೆದಿಟ್ಟರು.

ಈತನಕ ಸಾವಿರಕ್ಕೂ ಹೆಚ್ಚು ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಅಂತೆಯೇ ಹಾವುಗಳ ಬಗೆಗೆ ಜನರಿಗೆ ತಿಳಿವನ್ನೂ ಮೂಡಿಸಿದ್ದಾರೆ. ಇದರ ಪರಿಣಾಮವಾಗಿ, ಹಾವುಕಂಡರೆ ಹೊಡೆಯಲು ಕೋಲು ಹುಡುಕುತ್ತಿದ್ದವರು ಈಗ ಪಂಪಯ್ಯನ ನಂಬರಿಗೆ ಕಾಲ್ ಮಾಡಿ ಹಾವು ಹಿಡಿಯಲು ಕರೆಯುತ್ತಾರೆ.

ಹಂಪಿಗೆ ಬರುವ ವನ್ಯಜೀವಿ ಪ್ರೇಮಿಗಳಿಗೆ, ಫೋಟೋಗ್ರಾಫರ್‍ಗಳಿಗೆ ಈ ಭಾಗದಲ್ಲಿ ಸರಿಯಾದ ಮಾರ್ಗದರ್ಶನದ ಕೊರತೆಯಿತ್ತು. ಕಾರಣ ಹಂಪಿಯ ಗೈಡ್‍ಗಳೆಲ್ಲಾ ಸ್ಮಾರಕಗಳಿಗೆ ಸೀಮಿತರಾದವರು. ಅಂತಹ ಕೊರತೆಯನ್ನು ಪಂಪಯ್ಯ ತುಂಬಿದರು. ಮೂರ್ನಾಲ್ಕು ಭಾಷೆಗಳನ್ನು ಸುಲಲಿತವಾಗಿ ಮಾತನಾಡುವ ಪಂಪಯ್ಯ ಇದೀಗ ಯಾರೇ ವನ್ಯಜೀವಿ ಫೋಟೋಗ್ರಾಫರ್ಸ್ ಬಂದರೆ ಆತನೆ ಮಾರ್ಗದರ್ಶಿ. ಸ್ವತಃ ಪಂಪಯ್ಯ ಅತ್ಯುತ್ತಮ ವನ್ಯಜೀವಿ ಫೋಟೋಗ್ರಾಫರ್. ಹಾರ್ನ್‍ಬಿಲ್‍ನಂತಹ ಅಂತಾರಾಷ್ಟ್ರೀಯ ವನ್ಯಜೀವಿ ಪತ್ರಿಕೆ ಮುಖಪುಟದಲ್ಲಿ ಪಂಪಯ್ಯ ಕ್ಲಿಕ್ಕಿಸಿದ ಬೆನ್ನ ಮೇಲೆ ಮರಿಗಳ ಹೊತ್ತ ಕರಡಿಯ ಫೋಟೋ ಪ್ರಕಟವಾಗಿತ್ತು. ದರೋಜಿಯ ಕರಡಿಧಾಮವನ್ನು ಒಳಗೊಂಡ ಅರಣ್ಯ ಇಲಾಖೆಯ ವರದಿ ಇತ್ಯಾದಿಗಳ ಸರಕಾರಿ ದಾಖಲೆಗಳ ಮುಖಪುಟವನ್ನೂ, ಕನ್ನಡ ವಿಶ್ವವಿದ್ಯಾಲಯದ ವಾರ್ಷಿಕ ಕ್ಯಾಲೆಂಡರುಗಳನ್ನೂ ಪಂಪಯ್ಯನ ಫೋಟೋಗಳು ಆವರಿಸಿವೆ. ಹಂಪಿ ಉತ್ಸವಗಳಲ್ಲಿ ಫೋಟೋಪ್ರದರ್ಶನ ಮಾಡಿ ಜನಸಾಮಾನ್ಯರ ಮೆಚ್ಚುಗೆಯನ್ನೂ ಪಡೆದಿದ್ದಾರೆ. ಹೀಗೆ ವನ್ಯಜೀವಿ ಫೋಟೋಗ್ರಫಿಗೆ ಹತ್ತಾರು ಪ್ರಶಸ್ತಿಗಳು ಅರಸಿ ಬಂದಿವೆ. ವನ್ಯಜೀವಿ ಫೋಟೋಗ್ರಫಿಯಲ್ಲಿ ಪಂಪಯ್ಯ ತನ್ನದೇ ಆದ ಗುರುತನ್ನು ಕಾಯ್ದುಕೊಂಡಿದ್ದಾರೆ.

ವ್ಯಕ್ತಿಯಾಗಿ ಪಂಪಯ್ಯ ವನ್ಯಜೀವಿ ಪರಿಸರ ಅಂತೆಲ್ಲಾ ಹತ್ತಾರು ಸೂಕ್ಷ್ಮಗಳನ್ನು ಅರಿತಿರುವ ಇವರು ಶಾಲಾ ಮಕ್ಕಳಿಗೂ, ಹಲವು ಬಗೆಯ ಕಾರ್ಯಕ್ರಮಗಳಲ್ಲಿ ಜನಸಾಮಾನ್ಯರಿಗೂ ಭಾಷಣ, ಸಂವಾದ, ಚರ್ಚೆಗಳ ಮೂಲಕ ಈ ಅರಿವನ್ನು ಸಮುದಾಯಕ್ಕೆ ವಿಸ್ತರಿಸುತ್ತಿದ್ದಾರೆ. ಈ ಕಾರಣಕ್ಕೆ ಪಂಪಯ್ಯ ಸಮುದಾಯದ ಪರಿಸರ ಪ್ರಜ್ಞೆಯನ್ನು ಸೂಕ್ಷ್ಮಗೊಳಿಸುತ್ತಿದ್ದಾರೆ. ಇವರು ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿದ್ದಾಗಲೂ, ಕಮಲಾಪುರ ಪಟ್ಟಣ ಪಂಚಾಯ್ತಿಯ ಸದಸ್ಯ ಮತ್ತು ಅಧ್ಯಕ್ಷರಾಗಿದ್ದಾಗಲೂ ಈ ಸರಕಾರಿ ಸಂಸ್ಥೆಗಳನ್ನು ಪರಿಸರ ಪ್ರಜ್ಞೆಯನ್ನು ರೂಪಿಸುವುದಕ್ಕೆ ಬಳಸಿಕೊಂಡದ್ದು ವಿಶೇಷ.

ಇದೀಗ ತನ್ನ ಪರಿಸರದ ಅರಿವು ಮತ್ತು ಕಾಳಜಿಯನ್ನು ವಿಸ್ತರಿಸುವ ಪ್ರಾಯೋಗಿಕ ಹಂತಕ್ಕೆ ಪಂಪಯ್ಯ ಬಂದಿದ್ದಾರೆ. ಐದು ವರ್ಷದ ಹಿಂದೆ ಬರಡಾಗಿದ್ದ ನೆಲವೊಂದನ್ನು ಹಸಿರಾಗಿಸಿ ಗಮನ ಸೆಳೆದಿದ್ದಾರೆ. ಹೊಸಪೇಟೆ ತಾಲೂಕಿನ ಕಮಲಾಪುರದಿಂದ ನಾಲ್ಕು ಕಿಲೋಮೀಟರ್ ಅಂತರದ ತುಂಗಭದ್ರಾ ಜಲಾಶಯದ (ಎಚ್.ಎಲ್.ಸಿ) ಮೇಲ್ಮಟ್ಟದ ಕಾಲುವೆಯ ಬಳಿ ತುಂಗಭದ್ರ ಮಂಡಳಿಗೆ ಸೇರಿದ ಮೂರುವರೆ ಎಕರೆ ಪ್ರದೇಶದಲ್ಲಿ 60 ಬಗೆಯ 800ಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಿದ್ದಾರೆ. ಅರಣ್ಯ ಇಲಾಖೆಯಿಂದ ಗಿಡಗಳನ್ನು ಪಡೆದದ್ದು ಬಿಟ್ಟರೆ, ನೀರು ಗೊಬ್ಬರ ಪಾಲನೆಯನ್ನು ಪಂಪಯ್ಯನೇ ಸ್ವಂತ ಖರ್ಚಿನಲ್ಲಿ ನಿರ್ವಹಿಸಿದ್ದಾರೆ.

ಇದಕ್ಕೆ ಹೊಂದಿಕೊಂಡಂತೆ ಪಂಪಯ್ಯನ ಸ್ವಂತದ ಒಂದೆಕರೆ ಹೊಲವೂ ಕಾಡಿನಂತಿದೆ. ಬೇಸಿಗೆಯಲ್ಲಿ ಪ್ರಾಣಿಪಕ್ಷಿಗಳ ನೀರಿನ ದಾಹ ತಣಿಸಲು ಕೃಷಿಹೊಂಡ ಹಾಕಿಸಿದ್ದಾರೆ. ಫೋಟೋಗ್ರಫಿಗಾಗಿ ಬಂಕರ್ ನಿರ್ಮಿಸಿದ್ದಾರೆ. ಇದೀಗ ಹತ್ತಾರು ವಿಧದ ಪಕ್ಷಿ ಪ್ರಾಣಿ ವನ್ಯಜೀವಿಗಳು ಈ ಪುಟ್ಟ ಅರಣ್ಯದ ಸಂಗಾತಿಗಳಾಗಿವೆ. ಹೀಗೆ ಕಮಲಾಪುರದ ಮಳೇಮಠದ ಪಂಪಯ್ಯ ನಿಧಾನಕ್ಕೆ `ಪರಿಸರದ ಪಂಪಯ್ಯ’ನಾಗಿ ರೂಪಾಂತರಗೊಂಡ ಪಯಣವೇ ಕುತೂಹಲಕಾರಿಯಾಗಿದೆ.

`1994 ರಲ್ಲಿ ದರೋಜಿ ಕರಡಿಧಾಮ ಆದಾಗ ಅದರ ಓಡಾಟದಲ್ಲಿ ಸಿಕ್ಕ ಫೋಟೋಗ್ರಾಫರ್ಸ್, ವನ್ಯಜೀವಿ ತಜ್ಞರುಗಳ ಜತೆಗಿನ ಒಡನಾಟವೇ ನನ್ನನ್ನು ಪರಿಸರಕ್ಕೆ ಹತ್ತಿರ ತಂದಿತು. ಅಲ್ಲಿಂದ ನನ್ನ ಆಸಕ್ತಿ ವನ್ಯಜೀವಿ ಪರಿಸರ ಫೋಟೋಗ್ರಫಿ ಅಂತೆಲ್ಲಾ ಹೆಚ್ಚಾಯಿತು, ಇದೀಗ ಪುಟ್ಟ ಕಾಡು ಬೆಳೆಸುವ ಮಟ್ಟಕ್ಕೆ ಬಂದಿದೆ. ಪರಿಸರದ ಬಗೆಗೆ ಸಮುದಾಯಗಳಿಗೆ, ಈಗ ಬೆಳೆಯುವ ಮಕ್ಕಳಿಗೆ ಹೆಚ್ಚಿನ ತಿಳವಳಿಕೆ ಕೊಡಬೇಕು ಎನ್ನುವುದು ನನ್ನ ಕನಸು’ ಎಂದು ಪಂಪಯ್ಯ ಹೇಳುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...