Homeಮುಖಪುಟಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಒಬ್ಬರ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಮಾಡಿಸುವುದನ್ನು ತಡೆಯಲು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಆಧಾರ್ ಜೊತೆಗೆ ಪಾನ್ ನಂಬರ್ ಜೋಡಿಸುವ ವ್ಯವಸ್ಥೆ ಜಾರಿಗೆ ತಂದಿತು. ಅಲ್ಲಿಂದ 2022ರ ಮಾರ್ಚ್‌ವರೆಗೂ ಜೋಡಣೆಗೆ ಯಾವುದೇ ಶುಲ್ಕವಿರಲಿಲ್ಲ. ಆ ವೇಳೆಗೆ ಅಂದಾಜು 44 ಕೋಟಿ ಜನರು ತಮ್ಮ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿಸಿದ್ದರು. ಆ ನಂತರ ಕೊನೆಯದು ಎಂದು 1000 ರೂ ಶುಲ್ಕದೊಂದಿಗೆ 2023ರ ಮಾರ್ಚ್ ಅಂತ್ಯದೊಳಗೆ ಲಿಂಕ್ ಮಾಡಿಸಲು ಗಡುವು ನೀಡಿದೆ. ಸದ್ಯ 48 ಕೋಟಿ ಜನರು ಲಿಂಕ್ ಮಾಡಿಸಿದ್ದು, ಇನ್ನೂ 13 ಕೋಟಿ ಜನರು ಲಿಂಕ್ ಮಾಡಿಸಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷ ನಿತಿನ್ ಗುಪ್ತಾ ತಿಳಿಸಿದ್ದಾರೆ.

ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 4 ಕೋಟಿ ಜನರು ಪಾನ್ ಆಧಾರ್ ಲಿಂಕ್ ಮಾಡಿಸಿದ್ದಾರೆ ಮತ್ತು ತಲಾ 1000 ರೂ ಪಾವತಿಸಿದ್ದಾರೆ. ಅಲ್ಲಿಗೆ ಈ ಒಂದು ವರ್ಷದಲ್ಲ ಸರ್ಕಾರ ಸಂಗ್ರಹಿಸಿದ ಹಣ 4,000 ಕೋಟಿ ರೂಗಳಾಗಿದೆ. ಇನ್ನು 13 ಕೋಟಿ ಜನರು ಲಿಂಕ್ ಮಾಡಿಸಿದ್ದಲ್ಲಿ ಈಗಿನಂತೆಯೇ 1000 ಶುಲ್ಕವಿದ್ದಲ್ಲಿ 13,000 ಕೋಟಿ ಸಂಗ್ರಹವಾಗುತ್ತದೆ. ಆದರೆ ಮಾರ್ಚ್ 31ರ ನಂತರ ದಂಡದ ಮೊತ್ತ ಹೆಚ್ಚು ಮಾಡಲಾಗುತ್ತದೆ ಎಂಬ ಆತಂಕಗಳಿದ್ದು ಈ ಹಣದಲ್ಲಿ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಶುಲ್ಕ ಸಂಗ್ರಹಕ್ಕೆ ಆಕ್ರೋಶ

ಲಿಂಕ್ ಮಾಡಲು ಶುಲ್ಕ ವಿಧಿಸಲು ಮೂಲ ಕಾಯ್ದೆ ಅಥವಾ ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ 2021ರ ಹಣಕಾಸು ಕಾಯ್ದೆಯಲ್ಲಿ ತಿದ್ದುಪಡಿಯನ್ನು ತಂದು, 1961ರ ಆದಾಯ ತೆರಿಗೆ ಕಾಯ್ದೆಗೆ ಹೊಸದಾಗಿ 234ಎಚ್‌ ಎಂಬ ಸೆಕ್ಷನ್‌ ಸೇರಿಸಲಾಗಿದೆ. ಅದರಲ್ಲಿ ‘ಸರ್ಕಾರವು ನಿಗದಿ ಮಾಡಿದ ಗಡುವಿನ ಒಳಗೆ ಪ್ಯಾನ್‌–ಆಧಾರ್ ಜೋಡಣೆ ಮಾಡದೇ ಇದ್ದವರು, ನಂತರದ ಅವಧಿಯಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ’ ಎಂದು ಸೇರಿಸಲಾಗಿದೆ.

ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರ ಕಾರ್ಟೂನ್

ಪಾನ್-ಆಧಾರ್ ಲಿಂಕ್ ಮಾಡಿಸುವುದಕ್ಕೆ 1000 ರೂ ಶುಲ್ಕ ಸಂಗ್ರಹಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಪಾನ್ ಮತ್ತು ಆಧಾರ್ ಜೋಡಣೆ ಅದೊಂದು ಸರಿಯಾದ ನಿರ್ಧಾರವೇ ಆಗಿದೆ, ಆದರೆ ಅದಕ್ಕೆ ಇಷ್ಟೊಂದು ಮೊತ್ತದ ದಂಡ ಕಟ್ಟಿ ಮಧ್ಯಮ ವರ್ಗದ ಜನರ ಕಿಸೆಗೆ ಕತ್ತರಿ ಹಾಕಲು ಹೊರಟ ಕೇಂದ್ರ ಸರಕಾರದ ನಿಯಮ ಮಾತ್ರ ತಪ್ಪು. ವರ್ಷ ವರ್ಷ ರಿಟರ್ನ್ ಸಲ್ಲಿಕೆಯಾಗುತ್ತಿರುವ ಪಾನ್ ನಂಬರಕ್ಕೆ ಆಧಾರ್ ಜೋಡಣೆಯ ಯಾವುದೇ ಸಮಸ್ಯೆ ಇರುವುದಿಲ್ಲ. ಹೊಸ ಪಾನ್ ಕಾರ್ಡ್ ಗೆ ತಗಲುವ ವೆಚ್ಚ 118 ರೂ.ಮಾತ್ರ, ಆದರೆ ಅದೇ ಪಾನ್ ನಂಬ್ರಗೆ ಆಧಾರ್ ಲಿಂಕ್ ಮಾಡಲು ಸರ್ಕಾರ ವಿಧಿಸಿದ ದಂಡದ ಮೊತ್ತ ಬರೋಬ್ಬರಿ ಹತ್ತು ಪಟ್ಟು ಹೆಚ್ಚು ಮಾಡಿರೋದು ನಂಬಲು ಅಸಾಧ್ಯ!! ಅದರ ಬದಲಿಗೆ ಆಧಾರ್ ಲಿಂಕ್ ಆಗದ ಪಾನ್ ನಂಬ್ರಗಳನ್ನು ಏಪ್ರಿಲ್ 1, 2023 ರಿಂದ ಖಡ್ಡಾಯವಾಗಿ ಡಿಆಕ್ಟಿವ್ ಮಾಡಿಸಿ, ಹೊಸದಾಗಿ ಪಾನ್ ಕಾರ್ಡ್ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕಿತ್ತು. ಅದು ಬಿಟ್ಟು ಅನಾವಶ್ಯಕವಾಗಿ ಇಂತ ಪರಿಸ್ಥಿತಿಯಲ್ಲಿ ಈ ರೀತಿಯ ದಂಡ ಹೇರಿಕೆ ಖಂಡನೀಯ” ಎಂದು ಮೋಹನ್ ಮೂಡಬಿದರೆ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಪಾನ್-ಆಧಾರ್ ಲಿಂಕ್ ಹೆಸರಿನಲ್ಲಿ ಜನಸಾಮಾನ್ಯರಿಂದ ಲೂಟಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಕೆಲವರು ಲಿಂಕ್ ಮಾಡಿಸಲು ಮುಂದಿನ ವರ್ಷ ಅಂದರೆ 2024ರ ಮಾರ್ಚ್‌ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಹಾಗಾಗಿ ಪಾನ್ ಅಗತ್ಯವಿರುವವರು ಲಿಂಕ್ ಮಾಡಿಸಿಕೊಳ್ಳಬೇಕು. ಲಿಂಕ್ ಆಗಿದೆಯೇ ಇಲ್ಲವೇ ಎಂದು ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್-ಪಾನ್ ಕಾರ್ಡ್ ಜೋಡಣೆಗೆ 1000 ರೂ ದಂಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...