Homeಮುಖಪುಟಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಒಬ್ಬರ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಮಾಡಿಸುವುದನ್ನು ತಡೆಯಲು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಆಧಾರ್ ಜೊತೆಗೆ ಪಾನ್ ನಂಬರ್ ಜೋಡಿಸುವ ವ್ಯವಸ್ಥೆ ಜಾರಿಗೆ ತಂದಿತು. ಅಲ್ಲಿಂದ 2022ರ ಮಾರ್ಚ್‌ವರೆಗೂ ಜೋಡಣೆಗೆ ಯಾವುದೇ ಶುಲ್ಕವಿರಲಿಲ್ಲ. ಆ ವೇಳೆಗೆ ಅಂದಾಜು 44 ಕೋಟಿ ಜನರು ತಮ್ಮ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿಸಿದ್ದರು. ಆ ನಂತರ ಕೊನೆಯದು ಎಂದು 1000 ರೂ ಶುಲ್ಕದೊಂದಿಗೆ 2023ರ ಮಾರ್ಚ್ ಅಂತ್ಯದೊಳಗೆ ಲಿಂಕ್ ಮಾಡಿಸಲು ಗಡುವು ನೀಡಿದೆ. ಸದ್ಯ 48 ಕೋಟಿ ಜನರು ಲಿಂಕ್ ಮಾಡಿಸಿದ್ದು, ಇನ್ನೂ 13 ಕೋಟಿ ಜನರು ಲಿಂಕ್ ಮಾಡಿಸಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷ ನಿತಿನ್ ಗುಪ್ತಾ ತಿಳಿಸಿದ್ದಾರೆ.

ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 4 ಕೋಟಿ ಜನರು ಪಾನ್ ಆಧಾರ್ ಲಿಂಕ್ ಮಾಡಿಸಿದ್ದಾರೆ ಮತ್ತು ತಲಾ 1000 ರೂ ಪಾವತಿಸಿದ್ದಾರೆ. ಅಲ್ಲಿಗೆ ಈ ಒಂದು ವರ್ಷದಲ್ಲ ಸರ್ಕಾರ ಸಂಗ್ರಹಿಸಿದ ಹಣ 4,000 ಕೋಟಿ ರೂಗಳಾಗಿದೆ. ಇನ್ನು 13 ಕೋಟಿ ಜನರು ಲಿಂಕ್ ಮಾಡಿಸಿದ್ದಲ್ಲಿ ಈಗಿನಂತೆಯೇ 1000 ಶುಲ್ಕವಿದ್ದಲ್ಲಿ 13,000 ಕೋಟಿ ಸಂಗ್ರಹವಾಗುತ್ತದೆ. ಆದರೆ ಮಾರ್ಚ್ 31ರ ನಂತರ ದಂಡದ ಮೊತ್ತ ಹೆಚ್ಚು ಮಾಡಲಾಗುತ್ತದೆ ಎಂಬ ಆತಂಕಗಳಿದ್ದು ಈ ಹಣದಲ್ಲಿ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಶುಲ್ಕ ಸಂಗ್ರಹಕ್ಕೆ ಆಕ್ರೋಶ

ಲಿಂಕ್ ಮಾಡಲು ಶುಲ್ಕ ವಿಧಿಸಲು ಮೂಲ ಕಾಯ್ದೆ ಅಥವಾ ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ 2021ರ ಹಣಕಾಸು ಕಾಯ್ದೆಯಲ್ಲಿ ತಿದ್ದುಪಡಿಯನ್ನು ತಂದು, 1961ರ ಆದಾಯ ತೆರಿಗೆ ಕಾಯ್ದೆಗೆ ಹೊಸದಾಗಿ 234ಎಚ್‌ ಎಂಬ ಸೆಕ್ಷನ್‌ ಸೇರಿಸಲಾಗಿದೆ. ಅದರಲ್ಲಿ ‘ಸರ್ಕಾರವು ನಿಗದಿ ಮಾಡಿದ ಗಡುವಿನ ಒಳಗೆ ಪ್ಯಾನ್‌–ಆಧಾರ್ ಜೋಡಣೆ ಮಾಡದೇ ಇದ್ದವರು, ನಂತರದ ಅವಧಿಯಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ’ ಎಂದು ಸೇರಿಸಲಾಗಿದೆ.

ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರ ಕಾರ್ಟೂನ್

ಪಾನ್-ಆಧಾರ್ ಲಿಂಕ್ ಮಾಡಿಸುವುದಕ್ಕೆ 1000 ರೂ ಶುಲ್ಕ ಸಂಗ್ರಹಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಪಾನ್ ಮತ್ತು ಆಧಾರ್ ಜೋಡಣೆ ಅದೊಂದು ಸರಿಯಾದ ನಿರ್ಧಾರವೇ ಆಗಿದೆ, ಆದರೆ ಅದಕ್ಕೆ ಇಷ್ಟೊಂದು ಮೊತ್ತದ ದಂಡ ಕಟ್ಟಿ ಮಧ್ಯಮ ವರ್ಗದ ಜನರ ಕಿಸೆಗೆ ಕತ್ತರಿ ಹಾಕಲು ಹೊರಟ ಕೇಂದ್ರ ಸರಕಾರದ ನಿಯಮ ಮಾತ್ರ ತಪ್ಪು. ವರ್ಷ ವರ್ಷ ರಿಟರ್ನ್ ಸಲ್ಲಿಕೆಯಾಗುತ್ತಿರುವ ಪಾನ್ ನಂಬರಕ್ಕೆ ಆಧಾರ್ ಜೋಡಣೆಯ ಯಾವುದೇ ಸಮಸ್ಯೆ ಇರುವುದಿಲ್ಲ. ಹೊಸ ಪಾನ್ ಕಾರ್ಡ್ ಗೆ ತಗಲುವ ವೆಚ್ಚ 118 ರೂ.ಮಾತ್ರ, ಆದರೆ ಅದೇ ಪಾನ್ ನಂಬ್ರಗೆ ಆಧಾರ್ ಲಿಂಕ್ ಮಾಡಲು ಸರ್ಕಾರ ವಿಧಿಸಿದ ದಂಡದ ಮೊತ್ತ ಬರೋಬ್ಬರಿ ಹತ್ತು ಪಟ್ಟು ಹೆಚ್ಚು ಮಾಡಿರೋದು ನಂಬಲು ಅಸಾಧ್ಯ!! ಅದರ ಬದಲಿಗೆ ಆಧಾರ್ ಲಿಂಕ್ ಆಗದ ಪಾನ್ ನಂಬ್ರಗಳನ್ನು ಏಪ್ರಿಲ್ 1, 2023 ರಿಂದ ಖಡ್ಡಾಯವಾಗಿ ಡಿಆಕ್ಟಿವ್ ಮಾಡಿಸಿ, ಹೊಸದಾಗಿ ಪಾನ್ ಕಾರ್ಡ್ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕಿತ್ತು. ಅದು ಬಿಟ್ಟು ಅನಾವಶ್ಯಕವಾಗಿ ಇಂತ ಪರಿಸ್ಥಿತಿಯಲ್ಲಿ ಈ ರೀತಿಯ ದಂಡ ಹೇರಿಕೆ ಖಂಡನೀಯ” ಎಂದು ಮೋಹನ್ ಮೂಡಬಿದರೆ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಪಾನ್-ಆಧಾರ್ ಲಿಂಕ್ ಹೆಸರಿನಲ್ಲಿ ಜನಸಾಮಾನ್ಯರಿಂದ ಲೂಟಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಕೆಲವರು ಲಿಂಕ್ ಮಾಡಿಸಲು ಮುಂದಿನ ವರ್ಷ ಅಂದರೆ 2024ರ ಮಾರ್ಚ್‌ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಹಾಗಾಗಿ ಪಾನ್ ಅಗತ್ಯವಿರುವವರು ಲಿಂಕ್ ಮಾಡಿಸಿಕೊಳ್ಳಬೇಕು. ಲಿಂಕ್ ಆಗಿದೆಯೇ ಇಲ್ಲವೇ ಎಂದು ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್-ಪಾನ್ ಕಾರ್ಡ್ ಜೋಡಣೆಗೆ 1000 ರೂ ದಂಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...