Homeಮುಖಪುಟಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಒಬ್ಬರ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಮಾಡಿಸುವುದನ್ನು ತಡೆಯಲು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಆಧಾರ್ ಜೊತೆಗೆ ಪಾನ್ ನಂಬರ್ ಜೋಡಿಸುವ ವ್ಯವಸ್ಥೆ ಜಾರಿಗೆ ತಂದಿತು. ಅಲ್ಲಿಂದ 2022ರ ಮಾರ್ಚ್‌ವರೆಗೂ ಜೋಡಣೆಗೆ ಯಾವುದೇ ಶುಲ್ಕವಿರಲಿಲ್ಲ. ಆ ವೇಳೆಗೆ ಅಂದಾಜು 44 ಕೋಟಿ ಜನರು ತಮ್ಮ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿಸಿದ್ದರು. ಆ ನಂತರ ಕೊನೆಯದು ಎಂದು 1000 ರೂ ಶುಲ್ಕದೊಂದಿಗೆ 2023ರ ಮಾರ್ಚ್ ಅಂತ್ಯದೊಳಗೆ ಲಿಂಕ್ ಮಾಡಿಸಲು ಗಡುವು ನೀಡಿದೆ. ಸದ್ಯ 48 ಕೋಟಿ ಜನರು ಲಿಂಕ್ ಮಾಡಿಸಿದ್ದು, ಇನ್ನೂ 13 ಕೋಟಿ ಜನರು ಲಿಂಕ್ ಮಾಡಿಸಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷ ನಿತಿನ್ ಗುಪ್ತಾ ತಿಳಿಸಿದ್ದಾರೆ.

ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 4 ಕೋಟಿ ಜನರು ಪಾನ್ ಆಧಾರ್ ಲಿಂಕ್ ಮಾಡಿಸಿದ್ದಾರೆ ಮತ್ತು ತಲಾ 1000 ರೂ ಪಾವತಿಸಿದ್ದಾರೆ. ಅಲ್ಲಿಗೆ ಈ ಒಂದು ವರ್ಷದಲ್ಲ ಸರ್ಕಾರ ಸಂಗ್ರಹಿಸಿದ ಹಣ 4,000 ಕೋಟಿ ರೂಗಳಾಗಿದೆ. ಇನ್ನು 13 ಕೋಟಿ ಜನರು ಲಿಂಕ್ ಮಾಡಿಸಿದ್ದಲ್ಲಿ ಈಗಿನಂತೆಯೇ 1000 ಶುಲ್ಕವಿದ್ದಲ್ಲಿ 13,000 ಕೋಟಿ ಸಂಗ್ರಹವಾಗುತ್ತದೆ. ಆದರೆ ಮಾರ್ಚ್ 31ರ ನಂತರ ದಂಡದ ಮೊತ್ತ ಹೆಚ್ಚು ಮಾಡಲಾಗುತ್ತದೆ ಎಂಬ ಆತಂಕಗಳಿದ್ದು ಈ ಹಣದಲ್ಲಿ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಶುಲ್ಕ ಸಂಗ್ರಹಕ್ಕೆ ಆಕ್ರೋಶ

ಲಿಂಕ್ ಮಾಡಲು ಶುಲ್ಕ ವಿಧಿಸಲು ಮೂಲ ಕಾಯ್ದೆ ಅಥವಾ ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ 2021ರ ಹಣಕಾಸು ಕಾಯ್ದೆಯಲ್ಲಿ ತಿದ್ದುಪಡಿಯನ್ನು ತಂದು, 1961ರ ಆದಾಯ ತೆರಿಗೆ ಕಾಯ್ದೆಗೆ ಹೊಸದಾಗಿ 234ಎಚ್‌ ಎಂಬ ಸೆಕ್ಷನ್‌ ಸೇರಿಸಲಾಗಿದೆ. ಅದರಲ್ಲಿ ‘ಸರ್ಕಾರವು ನಿಗದಿ ಮಾಡಿದ ಗಡುವಿನ ಒಳಗೆ ಪ್ಯಾನ್‌–ಆಧಾರ್ ಜೋಡಣೆ ಮಾಡದೇ ಇದ್ದವರು, ನಂತರದ ಅವಧಿಯಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ’ ಎಂದು ಸೇರಿಸಲಾಗಿದೆ.

ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರ ಕಾರ್ಟೂನ್

ಪಾನ್-ಆಧಾರ್ ಲಿಂಕ್ ಮಾಡಿಸುವುದಕ್ಕೆ 1000 ರೂ ಶುಲ್ಕ ಸಂಗ್ರಹಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಪಾನ್ ಮತ್ತು ಆಧಾರ್ ಜೋಡಣೆ ಅದೊಂದು ಸರಿಯಾದ ನಿರ್ಧಾರವೇ ಆಗಿದೆ, ಆದರೆ ಅದಕ್ಕೆ ಇಷ್ಟೊಂದು ಮೊತ್ತದ ದಂಡ ಕಟ್ಟಿ ಮಧ್ಯಮ ವರ್ಗದ ಜನರ ಕಿಸೆಗೆ ಕತ್ತರಿ ಹಾಕಲು ಹೊರಟ ಕೇಂದ್ರ ಸರಕಾರದ ನಿಯಮ ಮಾತ್ರ ತಪ್ಪು. ವರ್ಷ ವರ್ಷ ರಿಟರ್ನ್ ಸಲ್ಲಿಕೆಯಾಗುತ್ತಿರುವ ಪಾನ್ ನಂಬರಕ್ಕೆ ಆಧಾರ್ ಜೋಡಣೆಯ ಯಾವುದೇ ಸಮಸ್ಯೆ ಇರುವುದಿಲ್ಲ. ಹೊಸ ಪಾನ್ ಕಾರ್ಡ್ ಗೆ ತಗಲುವ ವೆಚ್ಚ 118 ರೂ.ಮಾತ್ರ, ಆದರೆ ಅದೇ ಪಾನ್ ನಂಬ್ರಗೆ ಆಧಾರ್ ಲಿಂಕ್ ಮಾಡಲು ಸರ್ಕಾರ ವಿಧಿಸಿದ ದಂಡದ ಮೊತ್ತ ಬರೋಬ್ಬರಿ ಹತ್ತು ಪಟ್ಟು ಹೆಚ್ಚು ಮಾಡಿರೋದು ನಂಬಲು ಅಸಾಧ್ಯ!! ಅದರ ಬದಲಿಗೆ ಆಧಾರ್ ಲಿಂಕ್ ಆಗದ ಪಾನ್ ನಂಬ್ರಗಳನ್ನು ಏಪ್ರಿಲ್ 1, 2023 ರಿಂದ ಖಡ್ಡಾಯವಾಗಿ ಡಿಆಕ್ಟಿವ್ ಮಾಡಿಸಿ, ಹೊಸದಾಗಿ ಪಾನ್ ಕಾರ್ಡ್ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕಿತ್ತು. ಅದು ಬಿಟ್ಟು ಅನಾವಶ್ಯಕವಾಗಿ ಇಂತ ಪರಿಸ್ಥಿತಿಯಲ್ಲಿ ಈ ರೀತಿಯ ದಂಡ ಹೇರಿಕೆ ಖಂಡನೀಯ” ಎಂದು ಮೋಹನ್ ಮೂಡಬಿದರೆ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಪಾನ್-ಆಧಾರ್ ಲಿಂಕ್ ಹೆಸರಿನಲ್ಲಿ ಜನಸಾಮಾನ್ಯರಿಂದ ಲೂಟಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಕೆಲವರು ಲಿಂಕ್ ಮಾಡಿಸಲು ಮುಂದಿನ ವರ್ಷ ಅಂದರೆ 2024ರ ಮಾರ್ಚ್‌ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಹಾಗಾಗಿ ಪಾನ್ ಅಗತ್ಯವಿರುವವರು ಲಿಂಕ್ ಮಾಡಿಸಿಕೊಳ್ಳಬೇಕು. ಲಿಂಕ್ ಆಗಿದೆಯೇ ಇಲ್ಲವೇ ಎಂದು ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್-ಪಾನ್ ಕಾರ್ಡ್ ಜೋಡಣೆಗೆ 1000 ರೂ ದಂಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...