Homeಮುಖಪುಟಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಒಬ್ಬರ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಮಾಡಿಸುವುದನ್ನು ತಡೆಯಲು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಆಧಾರ್ ಜೊತೆಗೆ ಪಾನ್ ನಂಬರ್ ಜೋಡಿಸುವ ವ್ಯವಸ್ಥೆ ಜಾರಿಗೆ ತಂದಿತು. ಅಲ್ಲಿಂದ 2022ರ ಮಾರ್ಚ್‌ವರೆಗೂ ಜೋಡಣೆಗೆ ಯಾವುದೇ ಶುಲ್ಕವಿರಲಿಲ್ಲ. ಆ ವೇಳೆಗೆ ಅಂದಾಜು 44 ಕೋಟಿ ಜನರು ತಮ್ಮ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿಸಿದ್ದರು. ಆ ನಂತರ ಕೊನೆಯದು ಎಂದು 1000 ರೂ ಶುಲ್ಕದೊಂದಿಗೆ 2023ರ ಮಾರ್ಚ್ ಅಂತ್ಯದೊಳಗೆ ಲಿಂಕ್ ಮಾಡಿಸಲು ಗಡುವು ನೀಡಿದೆ. ಸದ್ಯ 48 ಕೋಟಿ ಜನರು ಲಿಂಕ್ ಮಾಡಿಸಿದ್ದು, ಇನ್ನೂ 13 ಕೋಟಿ ಜನರು ಲಿಂಕ್ ಮಾಡಿಸಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷ ನಿತಿನ್ ಗುಪ್ತಾ ತಿಳಿಸಿದ್ದಾರೆ.

ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 4 ಕೋಟಿ ಜನರು ಪಾನ್ ಆಧಾರ್ ಲಿಂಕ್ ಮಾಡಿಸಿದ್ದಾರೆ ಮತ್ತು ತಲಾ 1000 ರೂ ಪಾವತಿಸಿದ್ದಾರೆ. ಅಲ್ಲಿಗೆ ಈ ಒಂದು ವರ್ಷದಲ್ಲ ಸರ್ಕಾರ ಸಂಗ್ರಹಿಸಿದ ಹಣ 4,000 ಕೋಟಿ ರೂಗಳಾಗಿದೆ. ಇನ್ನು 13 ಕೋಟಿ ಜನರು ಲಿಂಕ್ ಮಾಡಿಸಿದ್ದಲ್ಲಿ ಈಗಿನಂತೆಯೇ 1000 ಶುಲ್ಕವಿದ್ದಲ್ಲಿ 13,000 ಕೋಟಿ ಸಂಗ್ರಹವಾಗುತ್ತದೆ. ಆದರೆ ಮಾರ್ಚ್ 31ರ ನಂತರ ದಂಡದ ಮೊತ್ತ ಹೆಚ್ಚು ಮಾಡಲಾಗುತ್ತದೆ ಎಂಬ ಆತಂಕಗಳಿದ್ದು ಈ ಹಣದಲ್ಲಿ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಶುಲ್ಕ ಸಂಗ್ರಹಕ್ಕೆ ಆಕ್ರೋಶ

ಲಿಂಕ್ ಮಾಡಲು ಶುಲ್ಕ ವಿಧಿಸಲು ಮೂಲ ಕಾಯ್ದೆ ಅಥವಾ ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ 2021ರ ಹಣಕಾಸು ಕಾಯ್ದೆಯಲ್ಲಿ ತಿದ್ದುಪಡಿಯನ್ನು ತಂದು, 1961ರ ಆದಾಯ ತೆರಿಗೆ ಕಾಯ್ದೆಗೆ ಹೊಸದಾಗಿ 234ಎಚ್‌ ಎಂಬ ಸೆಕ್ಷನ್‌ ಸೇರಿಸಲಾಗಿದೆ. ಅದರಲ್ಲಿ ‘ಸರ್ಕಾರವು ನಿಗದಿ ಮಾಡಿದ ಗಡುವಿನ ಒಳಗೆ ಪ್ಯಾನ್‌–ಆಧಾರ್ ಜೋಡಣೆ ಮಾಡದೇ ಇದ್ದವರು, ನಂತರದ ಅವಧಿಯಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ’ ಎಂದು ಸೇರಿಸಲಾಗಿದೆ.

ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರ ಕಾರ್ಟೂನ್

ಪಾನ್-ಆಧಾರ್ ಲಿಂಕ್ ಮಾಡಿಸುವುದಕ್ಕೆ 1000 ರೂ ಶುಲ್ಕ ಸಂಗ್ರಹಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಪಾನ್ ಮತ್ತು ಆಧಾರ್ ಜೋಡಣೆ ಅದೊಂದು ಸರಿಯಾದ ನಿರ್ಧಾರವೇ ಆಗಿದೆ, ಆದರೆ ಅದಕ್ಕೆ ಇಷ್ಟೊಂದು ಮೊತ್ತದ ದಂಡ ಕಟ್ಟಿ ಮಧ್ಯಮ ವರ್ಗದ ಜನರ ಕಿಸೆಗೆ ಕತ್ತರಿ ಹಾಕಲು ಹೊರಟ ಕೇಂದ್ರ ಸರಕಾರದ ನಿಯಮ ಮಾತ್ರ ತಪ್ಪು. ವರ್ಷ ವರ್ಷ ರಿಟರ್ನ್ ಸಲ್ಲಿಕೆಯಾಗುತ್ತಿರುವ ಪಾನ್ ನಂಬರಕ್ಕೆ ಆಧಾರ್ ಜೋಡಣೆಯ ಯಾವುದೇ ಸಮಸ್ಯೆ ಇರುವುದಿಲ್ಲ. ಹೊಸ ಪಾನ್ ಕಾರ್ಡ್ ಗೆ ತಗಲುವ ವೆಚ್ಚ 118 ರೂ.ಮಾತ್ರ, ಆದರೆ ಅದೇ ಪಾನ್ ನಂಬ್ರಗೆ ಆಧಾರ್ ಲಿಂಕ್ ಮಾಡಲು ಸರ್ಕಾರ ವಿಧಿಸಿದ ದಂಡದ ಮೊತ್ತ ಬರೋಬ್ಬರಿ ಹತ್ತು ಪಟ್ಟು ಹೆಚ್ಚು ಮಾಡಿರೋದು ನಂಬಲು ಅಸಾಧ್ಯ!! ಅದರ ಬದಲಿಗೆ ಆಧಾರ್ ಲಿಂಕ್ ಆಗದ ಪಾನ್ ನಂಬ್ರಗಳನ್ನು ಏಪ್ರಿಲ್ 1, 2023 ರಿಂದ ಖಡ್ಡಾಯವಾಗಿ ಡಿಆಕ್ಟಿವ್ ಮಾಡಿಸಿ, ಹೊಸದಾಗಿ ಪಾನ್ ಕಾರ್ಡ್ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕಿತ್ತು. ಅದು ಬಿಟ್ಟು ಅನಾವಶ್ಯಕವಾಗಿ ಇಂತ ಪರಿಸ್ಥಿತಿಯಲ್ಲಿ ಈ ರೀತಿಯ ದಂಡ ಹೇರಿಕೆ ಖಂಡನೀಯ” ಎಂದು ಮೋಹನ್ ಮೂಡಬಿದರೆ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಪಾನ್-ಆಧಾರ್ ಲಿಂಕ್ ಹೆಸರಿನಲ್ಲಿ ಜನಸಾಮಾನ್ಯರಿಂದ ಲೂಟಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಕೆಲವರು ಲಿಂಕ್ ಮಾಡಿಸಲು ಮುಂದಿನ ವರ್ಷ ಅಂದರೆ 2024ರ ಮಾರ್ಚ್‌ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಹಾಗಾಗಿ ಪಾನ್ ಅಗತ್ಯವಿರುವವರು ಲಿಂಕ್ ಮಾಡಿಸಿಕೊಳ್ಳಬೇಕು. ಲಿಂಕ್ ಆಗಿದೆಯೇ ಇಲ್ಲವೇ ಎಂದು ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್-ಪಾನ್ ಕಾರ್ಡ್ ಜೋಡಣೆಗೆ 1000 ರೂ ದಂಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...