Homeಮುಖಪುಟಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

- Advertisement -
- Advertisement -

ಆಧಾರ್-ಪಾನ್ ಕಾರ್ಡ್ ಜೋಡಣೆ ಶುಲ್ಕವೆಂದು ಪ್ರತಿಯೊಬ್ಬರಿಂದ 1000 ರೂ ದಂಡ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರದ ಈ ಬಾಬತ್ತಿನಲ್ಲಿ ಬರೋಬ್ಬರಿ 4,000 ಕೋಟಿ ರೂಗಳಿಗೆ ಅಧಿಕ ಹಣ ಸಂಗ್ರಹಿಸಿರುವುದಾಗಿ ವರದಿಯಾಗಿದೆ.

ಒಬ್ಬರ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಮಾಡಿಸುವುದನ್ನು ತಡೆಯಲು 2017ರ ಏಪ್ರಿಲ್‌ನಲ್ಲಿ ಕೇಂದ್ರ ಸರ್ಕಾರವು ಆಧಾರ್ ಜೊತೆಗೆ ಪಾನ್ ನಂಬರ್ ಜೋಡಿಸುವ ವ್ಯವಸ್ಥೆ ಜಾರಿಗೆ ತಂದಿತು. ಅಲ್ಲಿಂದ 2022ರ ಮಾರ್ಚ್‌ವರೆಗೂ ಜೋಡಣೆಗೆ ಯಾವುದೇ ಶುಲ್ಕವಿರಲಿಲ್ಲ. ಆ ವೇಳೆಗೆ ಅಂದಾಜು 44 ಕೋಟಿ ಜನರು ತಮ್ಮ ಪಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡಿಸಿದ್ದರು. ಆ ನಂತರ ಕೊನೆಯದು ಎಂದು 1000 ರೂ ಶುಲ್ಕದೊಂದಿಗೆ 2023ರ ಮಾರ್ಚ್ ಅಂತ್ಯದೊಳಗೆ ಲಿಂಕ್ ಮಾಡಿಸಲು ಗಡುವು ನೀಡಿದೆ. ಸದ್ಯ 48 ಕೋಟಿ ಜನರು ಲಿಂಕ್ ಮಾಡಿಸಿದ್ದು, ಇನ್ನೂ 13 ಕೋಟಿ ಜನರು ಲಿಂಕ್ ಮಾಡಿಸಿಲ್ಲ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ಅಧ್ಯಕ್ಷ ನಿತಿನ್ ಗುಪ್ತಾ ತಿಳಿಸಿದ್ದಾರೆ.

ಅಂದರೆ ಒಂದು ವರ್ಷದ ಅವಧಿಯಲ್ಲಿ ಸುಮಾರು 4 ಕೋಟಿ ಜನರು ಪಾನ್ ಆಧಾರ್ ಲಿಂಕ್ ಮಾಡಿಸಿದ್ದಾರೆ ಮತ್ತು ತಲಾ 1000 ರೂ ಪಾವತಿಸಿದ್ದಾರೆ. ಅಲ್ಲಿಗೆ ಈ ಒಂದು ವರ್ಷದಲ್ಲ ಸರ್ಕಾರ ಸಂಗ್ರಹಿಸಿದ ಹಣ 4,000 ಕೋಟಿ ರೂಗಳಾಗಿದೆ. ಇನ್ನು 13 ಕೋಟಿ ಜನರು ಲಿಂಕ್ ಮಾಡಿಸಿದ್ದಲ್ಲಿ ಈಗಿನಂತೆಯೇ 1000 ಶುಲ್ಕವಿದ್ದಲ್ಲಿ 13,000 ಕೋಟಿ ಸಂಗ್ರಹವಾಗುತ್ತದೆ. ಆದರೆ ಮಾರ್ಚ್ 31ರ ನಂತರ ದಂಡದ ಮೊತ್ತ ಹೆಚ್ಚು ಮಾಡಲಾಗುತ್ತದೆ ಎಂಬ ಆತಂಕಗಳಿದ್ದು ಈ ಹಣದಲ್ಲಿ ಮತ್ತಷ್ಟು ಹೆಚ್ಚಾಗುವ ಸಂಭವವಿದೆ.

ಶುಲ್ಕ ಸಂಗ್ರಹಕ್ಕೆ ಆಕ್ರೋಶ

ಲಿಂಕ್ ಮಾಡಲು ಶುಲ್ಕ ವಿಧಿಸಲು ಮೂಲ ಕಾಯ್ದೆ ಅಥವಾ ನಿಯಮಗಳಲ್ಲಿ ಅವಕಾಶವಿಲ್ಲ. ಆದರೂ 2021ರ ಹಣಕಾಸು ಕಾಯ್ದೆಯಲ್ಲಿ ತಿದ್ದುಪಡಿಯನ್ನು ತಂದು, 1961ರ ಆದಾಯ ತೆರಿಗೆ ಕಾಯ್ದೆಗೆ ಹೊಸದಾಗಿ 234ಎಚ್‌ ಎಂಬ ಸೆಕ್ಷನ್‌ ಸೇರಿಸಲಾಗಿದೆ. ಅದರಲ್ಲಿ ‘ಸರ್ಕಾರವು ನಿಗದಿ ಮಾಡಿದ ಗಡುವಿನ ಒಳಗೆ ಪ್ಯಾನ್‌–ಆಧಾರ್ ಜೋಡಣೆ ಮಾಡದೇ ಇದ್ದವರು, ನಂತರದ ಅವಧಿಯಲ್ಲಿ ಶುಲ್ಕ ಪಾವತಿಸಬೇಕಾಗುತ್ತದೆ’ ಎಂದು ಸೇರಿಸಲಾಗಿದೆ.

ಖ್ಯಾತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರ ಕಾರ್ಟೂನ್

ಪಾನ್-ಆಧಾರ್ ಲಿಂಕ್ ಮಾಡಿಸುವುದಕ್ಕೆ 1000 ರೂ ಶುಲ್ಕ ಸಂಗ್ರಹಿಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಪಾನ್ ಮತ್ತು ಆಧಾರ್ ಜೋಡಣೆ ಅದೊಂದು ಸರಿಯಾದ ನಿರ್ಧಾರವೇ ಆಗಿದೆ, ಆದರೆ ಅದಕ್ಕೆ ಇಷ್ಟೊಂದು ಮೊತ್ತದ ದಂಡ ಕಟ್ಟಿ ಮಧ್ಯಮ ವರ್ಗದ ಜನರ ಕಿಸೆಗೆ ಕತ್ತರಿ ಹಾಕಲು ಹೊರಟ ಕೇಂದ್ರ ಸರಕಾರದ ನಿಯಮ ಮಾತ್ರ ತಪ್ಪು. ವರ್ಷ ವರ್ಷ ರಿಟರ್ನ್ ಸಲ್ಲಿಕೆಯಾಗುತ್ತಿರುವ ಪಾನ್ ನಂಬರಕ್ಕೆ ಆಧಾರ್ ಜೋಡಣೆಯ ಯಾವುದೇ ಸಮಸ್ಯೆ ಇರುವುದಿಲ್ಲ. ಹೊಸ ಪಾನ್ ಕಾರ್ಡ್ ಗೆ ತಗಲುವ ವೆಚ್ಚ 118 ರೂ.ಮಾತ್ರ, ಆದರೆ ಅದೇ ಪಾನ್ ನಂಬ್ರಗೆ ಆಧಾರ್ ಲಿಂಕ್ ಮಾಡಲು ಸರ್ಕಾರ ವಿಧಿಸಿದ ದಂಡದ ಮೊತ್ತ ಬರೋಬ್ಬರಿ ಹತ್ತು ಪಟ್ಟು ಹೆಚ್ಚು ಮಾಡಿರೋದು ನಂಬಲು ಅಸಾಧ್ಯ!! ಅದರ ಬದಲಿಗೆ ಆಧಾರ್ ಲಿಂಕ್ ಆಗದ ಪಾನ್ ನಂಬ್ರಗಳನ್ನು ಏಪ್ರಿಲ್ 1, 2023 ರಿಂದ ಖಡ್ಡಾಯವಾಗಿ ಡಿಆಕ್ಟಿವ್ ಮಾಡಿಸಿ, ಹೊಸದಾಗಿ ಪಾನ್ ಕಾರ್ಡ್ ಅರ್ಜಿ ಸಲ್ಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸಬೇಕಿತ್ತು. ಅದು ಬಿಟ್ಟು ಅನಾವಶ್ಯಕವಾಗಿ ಇಂತ ಪರಿಸ್ಥಿತಿಯಲ್ಲಿ ಈ ರೀತಿಯ ದಂಡ ಹೇರಿಕೆ ಖಂಡನೀಯ” ಎಂದು ಮೋಹನ್ ಮೂಡಬಿದರೆ ಅಭಿಪ್ರಾಯಪಟ್ಟಿದ್ದಾರೆ.

ಒಟ್ಟಿನಲ್ಲಿ ಪಾನ್-ಆಧಾರ್ ಲಿಂಕ್ ಹೆಸರಿನಲ್ಲಿ ಜನಸಾಮಾನ್ಯರಿಂದ ಲೂಟಿ ಮಾಡುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಕೆಲವರು ಲಿಂಕ್ ಮಾಡಿಸಲು ಮುಂದಿನ ವರ್ಷ ಅಂದರೆ 2024ರ ಮಾರ್ಚ್‌ವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಈ ಕುರಿತು ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಹಾಗಾಗಿ ಪಾನ್ ಅಗತ್ಯವಿರುವವರು ಲಿಂಕ್ ಮಾಡಿಸಿಕೊಳ್ಳಬೇಕು. ಲಿಂಕ್ ಆಗಿದೆಯೇ ಇಲ್ಲವೇ ಎಂದು ಚೆಕ್ ಮಾಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಆಧಾರ್-ಪಾನ್ ಕಾರ್ಡ್ ಜೋಡಣೆಗೆ 1000 ರೂ ದಂಡ: ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...