Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...