Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...