Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...