Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...