Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...