Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....