Homeಮುಖಪುಟಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಅಪರಾಧ ಪ್ರಕರಣಗಳು, ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ರಾಜಕೀಯ ನಾಯಕರುಗಳು ಮತ್ತು ಅವರ ಸಹಚರರ ದ್ವೇಷ ಕೊಳಕುತನಕ್ಕೆ ಅಪ್ರಾಪ್ತ ಬಾಲಕಿಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೆ ಬಲಿಯಾಗಿರುವ ಘಟನೆ ವರದಿಯಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯದ ಅಭ್ಯರ್ಥಿಯ 16 ವರ್ಷದ ಬಾಲಕಿಯನ್ನು ಪ್ರತಿಸ್ಫರ್ಧಿ ಗುಂಪಿನ ನಾಲ್ವರು ಯುವಕರು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.  ಉತ್ತರ ಪ್ರದೇಶದ ಲಕ್ನೋದಿಂದ ಕೇವಲ 40 ಕಿಲೋಮೀಟರ್ ದೂರವಿರುವ ಬರಾಬಂಕಿ ಜಿಲ್ಲೆಯ ಜೈದ್‌ಪುರ ವಲಯದಲ್ಲಿ ಈ ದಾರುಣ ಘಟನೆ ನಡೆದಿದೆ.

ಬರಾಬಂಕಿ ಜಿಲ್ಲೆಯ ಜೈದ್‌ಪುರ ಪ್ರದೇಶದಿಂದ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಬಾಲಕಿ ತಂದೆಯನ್ನು ಒತ್ತಾಯಿಸಿದ್ದರು. ಆದರೆ ಅವರು ಹಿಂದೆ ಸರಿಯುವುದಿಲ್ಲ ಎಂದಿದ್ದರು. ಈ ಕಾರಣದಿಂದ ಅಪ್ರಾಪ್ತೆ ಕಾಲೇಜಿಗೆ ಹೋಗುವಾಗ ಪ್ರತಿಸ್ಪರ್ಧಿ ಪಕ್ಷದವರ ಸಹಚರರು ಆಕೆಯನ್ನು ಅಪಹರಿಸಿ, ಅತ್ಯಾಚಾರವೆಸಗಿದ್ದಾರೆ.

ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ಈ ಮೊದಲು, ಸಂತ್ರಸ್ತೆಯ ತಂದೆಗೆ ಹಣದ ಆಮಿಷ ಒಡ್ಡಿದ್ದರು. ಆದರೆ ಅವರ ಆಮಿಷಕ್ಕೆ ಮಣಿಯಲು ಅವರು ನಿರಾಕರಿಸಿದಾಗ, ಪ್ರತಿಸ್ಪರ್ಧಿಗಳು ತಕ್ಕ ಪಾಠ ಕಲಿಸುವುದಾಗಿ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ಸಾಮೂಹಿಕ ಅತ್ಯಾಚಾರದ ಬಳಿಕ, ಸಂತ್ರಸ್ತೆಯ ತಂದೆ ಸ್ಪರ್ಧೆಯಿಂದ ಹಿಂದೆ ಸರಿಯದಿದ್ದರೆ ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಅಕೆಯನ್ನು ಮನೆಯ ಬಳಿ ಬಿಟ್ಟು ಹೋಗಿದ್ದಾರೆ. ಈ ಘಟನೆಯ ಬಗ್ಗೆ ಆಕೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೈದ್‌ಪುರ ಪೊಲೀಸ್ ಠಾಣೆಯಲ್ಲಿ ಸಚಿನ್ ವರ್ಮಾ, ಲಾಲ್ಜಿ ವರ್ಮಾ, ಆಕಾಶ್ ವರ್ಮಾ ಮತ್ತು ಶಿವಂ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸಿಲಾಗಿದೆ. ಎಫ್ಐಆರ್‌ನಲ್ಲಿ ಹೆಸರಿಸಲಾದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಾವು ಅವರ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ” ಎಂದು ಬರಾಬಂಕಿ ಪೊಲೀಸ್ ಅಧೀಕ್ಷಕ ಮನೋಜ್ ಕುಮಾರ್ ಪಾಂಡೆ ಹೇಳಿ‌ದ್ದಾರೆ.

ಜೊತೆಗೆ ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರದ ಹಿಂದಿನ ಮತದಾನದ ಪೈಪೋಟಿ ಆರೋಪಗಳ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಗೋರಖ್‌ಪುರದಲ್ಲಿ ಬಿಎಸ್‌ಪಿ ಅಭ್ಯರ್ಥಿಯೊಬ್ಬರು ಚುನಾವಣಾ ಪ್ರಚಾರ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅವರನ್ನು ಗುಂಡಿಕ್ಕಿ ಕೊಂದಿದ್ದರು. ಮೃತನಿಗೆ ಪ್ರತಿಸ್ಪರ್ಧಿಗಳು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಎಚ್ಚರಿಕೆ ನೀಡಿದ್ದರು. ಅವರು ನಿರಾಕರಿಸಿದಾಗ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.


ಇದನ್ನೂ ಓದಿ: ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ ಮರಣದಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಉತ್ತರ ಪ್ರದೇಶದಲ್ಲಿ ಶ್ರೀ ರಾಮನಿಗೆ ದೇವಾಲಯ ಕಟ್ಟುವ ಮೊದಲು ಸ್ತ್ರೀಯರನ್ನು ಕಾಪಾಡಿ……

    ಸ್ವಯಂ ಘೋಷಿತ ದೇಶ ಪ್ರೇಮಿಗಳೆ…..

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...