Homeಮುಖಪುಟಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ...

ಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ ಕಾರ್ಮಿಕರ ಸ್ಥಿತಿ

- Advertisement -
- Advertisement -

ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ತೀವ್ರತೆ ಇಳಿಯುತ್ತಿಲ್ಲ. 2021 ರ ಏಪ್ರಿಲ್ ಅವಧಿಯಲ್ಲಿ ತೀವ್ರವಾಗಿ ಏರಲು ಪ್ರಾರಂಭವಾದ ಕೊರೋನಾ ಎರಡನೇ ಅಲೆಯು ಹಲವು ಲಾಕ್‌ಡೌನ್‌ಗಳ ನಂತರವೂ ನಿಯಂತ್ರಣಕ್ಕೆ ಬಂದಿಲ್ಲ. ದೇಶದ ಅನೇಕ ರಾಜ್ಯಗಳು ಜೂನ್ ತಿಂಗಳ ಅವಧಿಯ ಮೊದಲಾರ್ಧದಲ್ಲೂ ಲಾಕ್ ಡೌನ್ ಮೊರೆ ಹೋಗಿವೆ. ದೇಶದ ಅತಿದೊಡ್ಡ ಉತ್ಪಾದನಾ ವಲಯಗಳಾದ ಬೃಹತ್ ಕೈಗಾರಿಕೆ, ರಫ್ತು, ಮಾರುಕಟ್ಟೆಗಳು ನಿಂತು ಹೋಗಿರುವುದು ದೇಶದ ಜಿಡಿಪಿಯ ಜೊತೆಗೆ ಜನರ ಬದುಕನ್ನು ಅತಂತ್ರಗೊಳಿಸಿವೆ. ದೇಶದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ.

ದೇಶದ ಅತಿ ದೊಡ್ಡ ಉತ್ಪಾದನಾ ವಲಯಗಳಾದ ದೆಹಲಿ ಮತ್ತು ಮುಂಬೈನಲ್ಲಿ ಕೊರೋನಾ ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ಗಳು ತೀವ್ರವಾದ ಉದ್ಯೋಗ ನಷ್ಟಕ್ಕೆ ಕಾರಣವಾಗಿವೆ. ಕಳೆದ ಒಂದು ವರ್ಷದ ಅವಧಿಯಲ್ಲಿ ದೇಶ ಇತಿಹಾಸದಲ್ಲೇ ಅತಿ ಹೆಚ್ಚು ನಿರುದ್ಯೋಗ ದರವನ್ನು ಹೊಂದಿದೆ. ಹೆಚ್ಚಿನದಾಗಿ ಉದ್ಯೋಗವನ್ನು ಕಳೆದುಕೊಳ್ಳುತ್ತಿರುವವರು 25 ವರ್ಷ ಒಳಗಿನ, ಕಡಿಮೆ ಅನುಭವವನ್ನು ಹೊಂದಿರುವ ಯುವ ಕಾರ್ಮಿಕರ ವರ್ಗ ಮತ್ತು ಮಹಿಳಾ ಉದ್ಯೋಗಿಗಳು.

ಇಪಿಎಫ್‌ಒ ಪೇ ರೋಲ್ ಅಂಕಿ ಅಂಶಗಳು ತೋರಿಸುವಂತೆ ಸಂಘಟಿತ ಮತ್ತು ಅರೆ ಸಂಘಟಿತ ವಲಯದಲ್ಲಿ ಕಾರ್ಯ ನಿರ್ಹವಹಿಸುವ ಕಾರ್ಮಿಕರ ಸಂಬಳದಲ್ಲಿ ಮತ್ತು ಇಪಿಎಫ್‌ಒ ಮತ್ತು ಇತರ ಸೌಲಭ್ಯಗಳಲ್ಲಿ ತೀವ್ರ ಇಳೆಕೆಯಾಗಿರುವುದು ಕಂಡು ಬಂದಿದೆ. ಇಪಿಎಫ್‌ಒ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಅತ್ಯಂತ ಕಳವಳಕಾರಿಯಾಗಿದ್ದು, ದೇಶದ ಅತ್ಯಂತ ಕ್ರಿಯಾಶೀಲ ಉದ್ಯೋಗಿ ವರ್ಗ ಕಳೆದ 1 ವರ್ಷದ ಅವಧಿಯಲ್ಲಿ ತೀವ್ರವಾದ ನಿರುದ್ಯೋಗ ಸಮಸ್ಯೆಯಿಂದ ತತ್ತರಿಸಿಹೋಗಿದೆ.

ಮುಖ್ಯವಾಗಿ ಇದುವರೆಗೆ 25 ವರ್ಷ ಕೆಳಗಿನ ಕಾರ್ಮಿಕ ವರ್ಗವು ದೇಶದಲ್ಲಿನ ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

2020-21 ರ ಆರ್ಥಿಕ ವರ್ಷದ ಇಪಿಎಫ್‌ಒ ಅಂಕಿ ಅಂಶಗಳು ಹೇಳುವಂತೆ  18 ವರ್ಷ ,18-21 ವರ್ಷದ ಒಳಗಿನ ಕಾರ್ಮಿಕರ ಸರಾಸರಿ ಸಂಬಳದಲ್ಲಿ ತೀವ್ರ ಕುಸಿತವಾಗಿದೆ. 22-25 ವರ್ಷ ಒಳಗಿನ ಕಾರ್ಮಿಕರ ಸಂಬಳದಲ್ಲೂ ಕುಸಿತ ಕಂಡಿದ್ದು, ಈ ಕಡಿತ ಹಿರಿಯ ಉದ್ಯೋಗಿಗಳ ಸಂಬಳದಲ್ಲಿನ ಕಡಿತಕ್ಕಿಂತ ಅತ್ಯಂತ ಹೆಚ್ಚಾಗಿದೆ. ಈ ವಯೋಮಾನದ ಯುವ ಕಾರ್ಮಿಕರ ಸಂಬಳದಲ್ಲಿ ಸರಿ ಸುಮಾರು 19% ವರೆಗೆ ಈ ಸಂಕ್ರಾಮಿಕದ ಸಂದರ್ಭದಲ್ಲಿ ಸಂಬಳ ಕಡಿತಗೊಂಡಿದೆ. ಇದು ಕೇವಲ ಸಂಘಟಿತ ವಲಯದ ಕಾರ್ಮಿಕರ ಸಂಬಳದಲ್ಲಿನ ಕಡಿತವಷ್ಟೆ. ಆದರೆ ಅಸಂಘಟಿತ ವಲಯದಲ್ಲಿನ ಕಾರ್ಮಿಕರ ಸಂಬಳದ ಕಡಿತ ಉದ್ಯೋಗ ನಷ್ಟ ಸರ್ಕಾರ ಅಥವಾ ಯಾವುದೇ ಸಂಸ್ಥೆಗಲ ಲೆಕ್ಕಕ್ಕೆ ಸಿಗುತ್ತಿಲ್ಲ. ಒಂದು ಅಂದಾಜಿನ ಪ್ರಕಾರ ಅಸಂಘಟಿತ ವಲಯದ ಕಾರ್ಮಿಕರಲ್ಲಿ 60-75% ಜನರು ಕೊರೋನಾ ಸಾಂಕ್ರಾಮಿಕದ ಒಂದು ವರ್ಷದ ಅವಧಿಯಲ್ಲಿ ತಮ್ಮ ಕೆಲಸವನ್ನು ಕಳೆದುಕೊಂಡಿದ್ದಾರೆ.

ಆದರೆ ಇದೇ ಅವಧಿಯಲ್ಲಿ 26 ವರ್ಷ ಮೇಲ್ಪಟ್ಟ ಅನುಭವಿ ಉದ್ಯೊಗಿ ವರ್ಗ ಮತ್ತು ಕಾರ್ಮಿಕ ವರ್ಗದ ಸರಾಸರಿ ವೇತನದಲ್ಲಿ ಹೆಚ್ಚಳವಾಗಿದೆ.

ಉದ್ಯೋಗದ ಮೇಲೆ ಸಾಂಕ್ರಾಮಿಕದ ಪರಿಣಾಮ

ಕಳೆದ ಹಣಕಾಸು ವರ್ಷದ ಆರಂಭದ ತಿಂಗಳಲ್ಲಿ ಕೊರೋನಾ ಸಾಂಕ್ರಾಮಿಕ ಮತ್ತು ಇತರ ಕಾರಣಗಳಿಂದ ಭಾರತದ ಆರ್ಥಿಕತೆ ತೀವ್ರವಾಗಿ ಕುಸಿತಗೊಂಡಿತು. ನಂತರದ ದಿನಗಳಲ್ಲಿ ಆರ್ಥಿಕತೆ ಚೇತರಿಸಿಕೊಳ್ಳುವ ಯಾವ ಲಕ್ಷಣಗಳೂ ಕಾಣಿಸಲಿಲ್ಲ. ಲಾಕ್‌ಡೌನ್ ಕಾರಣದಿಂದ ದೇಶದಲ್ಲಿ ಕೋಟ್ಯಾಂತರ ಉದ್ಯೋಗಗಳು ಕಳೆದ ಮಾರ್ಚ್‌, ಏಪ್ರಿಲ್, ಮೇ ತಿಂಗಳುಗಳಲ್ಲಿ ನಷ್ಟವಾಗಿವೆ. ಆದರೆ ನಂತರದ ತಿಂಗಳುಗಳಲ್ಲಿಯೂ ಯುವ ಕಾರ್ಮಿಕರು ಮತ್ತು ಯುವ ವರ್ಗ ತಮ್ಮ ಕಳೆದುಕೊಂಡ ಹಳೆಯ ಕೆಲಸಗಳನ್ನು ಪಡೆದುಕೊಂಡ ಯಾವ ದಾಖಲೆಯೂ ಸಿಗುತ್ತಿಲ್ಲ.

Centre for Monitoring Indian Economy ಸಂಸ್ಥೆಯ ಅಂಕಿ ಅಂಶಗಳು ಹೇಳುವಂತೆ ಭಾರತದಲ್ಲಿ ಕಳೆದ ಹಣಕಾಸು ವರ್ಷದಲ್ಲಿ 1.22 ಕೋಟಿ ಯುವ ಜನರು ತಮ್ಮ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಜೊತೆಗೆ ಇದರಲ್ಲಿ ಹೆಚ್ಚಿನ ಉದ್ಯೋಗಗಳು ಗ್ರಾಮೀಣ ಭಾಗದಲ್ಲಿ ನಷ್ಟವಾಗಿದೆ.

ಕೊರೋನಾ ಸಾಂಕ್ರಾಮಿಕವು ಬಹುವಾಗಿ ನೇರವಾಗಿ ಉತ್ಪಾದನೆಯಲ್ಲಿ ತೊಡಗಿರುವ ಕಾರ್ಮಿಕರನ್ನು ಜೊತೆಗೆ ಉತ್ಪಾದನೆಗೆ ಸಮಬಂಧಿಸಿದ ಇತರ ಉದ್ಯೋಗಿಗಳನ್ನು ನಿರುದ್ಯೋಗಿಗಳಾಗುವಂತೆ ಮಾಡಿದೆ. ಯುವ ಮತ್ತು ಮಹಿಳಾ ಉದ್ಯೋಗಿಗಳು ಈ ಸಾಂಕ್ರಾಮಿಕ ದ ಹೊಡೆತಕ್ಕೆ ಬಹುವಾಗಿ ತತ್ತರಿಸಿದ್ದಾರೆ ಎಂದು ಜೆಮ್‌ಶೆಡ್‌ ಪುರದ XLRI ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ ವಿಭಾಗದ ಪ್ರೊಫೆಸರ್ ಕೆ.ಆರ್. ಶ್ಯಾಮ್‌ಸುಂದರ್  ಹೇಳುತ್ತಾರೆ.

ಪ್ರೊಫೆಸರ್ ಕೆ.ಆರ್‌ ಶ್ಯಾಮ್‌ ಸುಂದರ್ ಅವರು ಹೇಳುವ ಪ್ರಕಾರ “ಆಧುನಿಕ ಸೂಪರ್ ಮಾರ್ಕೆಟ್ ಗಳು, ಸಿನೆಮಾ ಮಾಲ್ ಗಳು, ಗಾರ್ಮೆಂಟ್‌ ಗಳು, ಸಾರಿಗೆ ಸಂಸ್ಥೆಗಳು ಹೆಚ್ಚಾಗಿ ಯುವಕ ಯುವತಿಯರು ಮತ್ತು ಮಹಿಳೆಯರಿಗೆ ಉದ್ಯೋಗವನ್ನು ನೀಡುವ ಉತ್ಪಾದನಾ ವಲಯಗಳಾಗಿವೆ. ಆದರೆ ಕಳೆದ ಅನೇಕ ತಿಂಗಳುಗಳಿಂದ ಈ ವಲಯವು ನೆಲಕಚ್ಚಿದ್ದು  ಮಹಿಳೆಯರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ನಿರುದ್ಯೊಗಕ್ಕೆ ದೂಡಿದೆ. ಬೇಡಿಕೆ ಮತ್ತು ಪೂರೈಕೆ ಎರಡೂ ವಿಭಾಗದಲ್ಲಿ ತೀವ್ರ ಕುಸಿತವಾಗಿರುವುದು ಯುವ ಉದ್ಯೋಗಿಗಳಿಗೆ ಸದ್ಯದ ಪರಿಸ್ಥಿತಿಯಲ್ಲಿ ಮತ್ತೆ ತಮ್ಮ ಉದ್ಯೋಗಗಳು ಮರಳಿ ಸಿಗುವ ಯಾವ ನಿರೀಕ್ಷೆಗಳನ್ನು ಹುಟ್ಟಿಸುತ್ತಿಲ್ಲ.

ನಿರೀಕ್ಷೆ ಮತ್ತು ವಾಸ್ತವಗಳ ನಡುವಿನ ಅಂತರವನ್ನು ಹೆಚ್ಚಿಸಿದ ಕೊರೋನಾ ಸಾಂಕ್ರಾಮಿಕ

ಸಾಂಕ್ರಾಮಿಕ, ಲಾಕ್‌ಡೌನ್, ಆರ್ಥಿಕ ಹಿಂಜರಿತಗಳಿಂದ ಹೆಚ್ಚಿನ ಹೊಡೆತಗಳು ಹಿರಿಯ ಕಾರ್ಮಿಕ ವರ್ಗಕ್ಕೆ ಬೀಳುತ್ತಿಲ್ಲ. ಕಾರ್ಮಿಕ ಸಂಘಟನೆಗಳು ಪ್ರಬಲವಾಗಿರುವ ಕಾರಣ ಅನೇಕ ಕಡೆ 5-10 ವರ್ಷಗಳ ಅನುಭವವಿರುವ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಳೆದ 1 ವರ್ಷದಲ್ಲಿ ನಿರುದ್ಯೋಗದ  ಸಮಸ್ಯೆಗೆ ಒಳಗಾಗಿಲ್ಲ. ಆದರೇ ಇದೇ 2020-2021 ರ ಆರ್ಥಿಕ ವರ್ಷದಲ್ಲಿ ಯುವ ಉದ್ಯೋಗಿಗಳು ಮತ್ತು ಕೆಲಸದ ನಿರೀಕ್ಷೆಯಲ್ಲಿ ಉತ್ಪಾದನಾ ವಲಯವನ್ನು ಪ್ರವೇಶಿಸಲು ಸಿದ್ಧರಾಗಿದ್ದ ಹೊಸ ಯುವ ಸಮೂಹ ದೊಡ್ಡ ಪ್ರಮಾಣದ ಹತಾಶೆಗೆ ಒಳಗಾಗಿದೆ.

ಮೇ 31 ರಂದು ಅಶೋಕ ವಿಶ್ವವಿದ್ಯಾಲಯದ ಸಂಶೋಧಕರಾದ ಅಂಕುರ್ ಭಾರದ್ವಾಜ್ ಮತ್ತು ಕಾನಿಕ ಮಹಾಜನ್ ಪ್ರಕಟಿಸಿದ ಸಂಶೋಧನಾ ಪ್ರಬಂಧ ಕೂಡ ಇದನ್ನೇ ಹೇಳುತ್ತಿದೆ. ತಮ್ಮ ಜೀವಿತದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗದ ನಿರೀಕ್ಷೆಯಲ್ಲಿದ್ದ, ಸಂಘಟಿತ ವಲಯದ ಉದ್ಯೋಗಕ್ಕೆ  ಪ್ರವೇಶಿಸಲು ಸಿದ್ಧರಾಗಿದ್ದ ಒಂದು ದೊಡ್ಡ 18-25 ವರ್ಷದೊಳಗಿನ ಯುವ ಸಮುದಾಯ ಕೊರೋನಾ ಬಿಕ್ಕಟ್ಟಿನಿಂದ ತಮ್ಮ ಉದ್ಯೋಗದ ನಿರೀಕ್ಷೆಗಳನ್ನು ಮತ್ತು ಜೀವನದ ಕನಸುಗಳನ್ನು ಕಳೆದುಕೊಳ್ಳತೊಡಗಿದ್ದಾರೆ. ಕಳೆದ ಒಂದು ವರ್ಷದಲ್ಲಿ ಸಂಘಟಿತ ವಲಯದ ಯಾವ ಸಂಸ್ಥೆಗಳಲ್ಲೂ ಹೆಚ್ಚಿನ ಉದ್ಯೋಗ ನೇಮಕಾತಿ ನಡೆದಿಲ್ಲ. ಬದಲಾಗಿ ಬೇಡಿಕೆ ಪೂರೈಕಗಳು ಕುಂಠಿತವಾದ ಪರಿಣಾಮ ಕೋಟ್ಯಾಂತರ ಜನರನ್ನು ಇರುವ ಉದ್ಯೋಗಗಳಿಂದ ತೆಗೆದು ಹಾಕಲಾಗಿದೆ. ಈಗ ಮತ್ತೊಮ್ಮೆ ಭಾರತದ ಆರ್ಥಿಕತೆ ಚೇತರಿಸಿಕೊಂಡರೆ ಈಗ ಉದ್ಯೋಗವನ್ನು ಕಳೆದುಕೊಂಡ ಒಂದು ದೊಡ್ಡ ವರ್ಗ ಮತ್ತು ಈಗಷ್ಟೇ  ಉದ್ಯೋಗದ ನಿರೀಕ್ಷೆಯಲ್ಲಿರುವ ಮತ್ತೊಂದು ವರ್ಗ ಪರಸ್ಪರ ಸ್ಪರ್ಧಿಸಬೇಕಾಗುತ್ತದೆ. ಈ ಸ್ಪರ್ಧೆಯಲ್ಲಿ ಇನ್ನೂ ಉದ್ಯೋಗ ಮಾರುಕಟ್ಟೆಯನ್ನು ಪ್ರವೇಶಿಸಿರದ ಹೊಸ ವರ್ಗ ಹಿನ್ನಡೆಯನ್ನು ಹೊಂದಬಹುದು. ಇಂದು ಮುಂದಿನ 4-5 ವರ್ಷಗಳವರೆಗೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಇನ್ನಷ್ಟು ಹೆಚ್ಚುವಂತೆ ಮಾಡುತ್ತದೆ ಎಂದು ಅಶೋಕ ವಿಶ್ವವಿದ್ಯಾಲಯದ ಪ್ರೊಫೆಸರ್ ಅಂಕುರ್ ಬಾರದ್ವಾಜ್ ಹೇಳುತ್ತಾರೆ.

ಸಣ್ಣ ಪುಟ್ಟ ಉದ್ದಿಮೆಗಳಲ್ಲಿ ಉದ್ಯೋಗಕ್ಕೆ ತೊಡಗಿರುವ ಮಹಿಳೆಯರು ಮತ್ತು ಯುವ ಕಾರ್ಮಿಕರು ಸಾಂಕ್ರಾಮಿಕದ ಕಾರಣದಿಂದ ಹೆಚ್ಚು ತೊಂದರೆಗೆ ಒಳಗಾಗಿದ್ದಾರೆ.  ಪಟ್ಟಣ ಮತ್ತು ನಗರದಲ್ಲಿ ಕಾರ್ಯ ನಿರ್ವಹಿಸುವ ಈ ಸಣ್ಣ ಉತ್ಪಾದನಾ ಕೇಂದ್ರಗಳಲ್ಲಿ ಹಲವು ಈಗಲೇ ಮುಚ್ಚಿಹೋಗಿವೆ. ಇನ್ನುಳಿದವು ಅತ್ಯಂತ ಕಡಿಮೆ ಉದ್ಯೋಗಿಗಳ ಮೂಲಕ ಕಾರ್ಯ ನಿರ್ವಹಿಸುತ್ತಿವೆ. ದೇಶ ಎದುರಿಸುತ್ತಿರುವ ಸದ್ಯದ ಈ ಆರೋಗ್ಯ ಬಿಕ್ಕಟ್ಟಿನಿಂದ ಸಣ್ಣ ಪುಟ್ಟ ಉದ್ದಿಮೆಗಳು ಸದ್ಯದಲ್ಲಿ ಉಸಿರಾಡುವಂತಾಗಲು ಸಾಧ್ಯವಿಲ್ಲ. ಇಂದಿನ ಈ ಮಹಾ ಆರ್ಥಿಕ ಸಂಕಟದಿಂದ ಭಾರತ ಸದ್ಯಕ್ಕೆ ಬಿಡುಗಡೆಯಾಗುವಂತೆ ಕಾಣುತ್ತಿಲ್ಲ. ನೆಲಕಚ್ಚಿದ ಆರ್ಥಿಕತೆಯ ನಡುವೆ ಯುವಕರ ಮಹಿಳೆಯರ ನಿರುದ್ಯೋಗದ ಆರ್ತನಾದ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಜವಾಬ್ಧಾರಿ ಹೊಂದಿದವರಿಗೆ ಕಾಣಿಸುವುದೂ ಇಲ್ಲ, ಕೇಳಿಸುವುದೂ ಇಲ್ಲ.

ಕೃಪೆ: ದಿ ಪ್ರಿಂಟ್


ಇದನ್ನೂ ಓದಿ; 2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...