Homeಮುಖಪುಟಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

ಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

- Advertisement -
- Advertisement -

ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ ಬಳಿಕ, ಹಿಂದೂ ಧಾರ್ಮಿಕ ಮುಖಂಡರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿ, ಬ್ರಾಹ್ಮಣರ ಮೇಲರಿಮೆಯನ್ನು ಪ್ರದರ್ಶಿಸುತ್ತಿದ್ದಾರೆ.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, “ಜಾತಿ ವಿಭಜನೆಯ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದರು.

ಸಂತ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿ ಭಾಗವತ್ ಭಾಷಣ ಮಾಡಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂಬುದು ಆರ್‌ಎಸ್‌ಎಸ್‌ ನೀಡಿದ ಸಮರ್ಥನೆ.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದು, ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದಾರೆ ನಿಶ್ಚಲಾನಂದ ಸರಸ್ವತಿ.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸನಾತನ ಸಮಾಜದ ರಚನೆಯ ಅನುಪಸ್ಥಿತಿಯಲ್ಲಿ, ಯುಎಸ್ ಮತ್ತು ಫ್ರಾನ್ಸ್‌ನಂತಹ ಪಾಶ್ಚಿಮಾತ್ಯ ದೇಶಗಳಲ್ಲಿ “ಪರ್ಯಾಯ ಜಾತಿ ಶ್ರೇಣಿಯನ್ನು ಸೃಷ್ಟಿಸುವ ಅಗತ್ಯವಿದೆ” ಎಂದು ಕರೆ ನೀಡಿದ್ದಾರೆ.

ಭಾಗವತ್ ಅವರ ಹೇಳಿಕೆಗಳ ವಿರುದ್ಧ ಟೀಕೆಗಳು ವ್ಯಕ್ತವಾದ ಬಳಿಕ, ಆರ್‌ಎಸ್‌ಎಸ್ ಸ್ಪಷ್ಟೀಕರಣ ನೀಡಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಮುಂದಾಯಿತು. “ಭಾಗವತ್ ಅವರ ಮಾತುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆಯೇ ಹೊರತು, ‘ಬ್ರಾಹ್ಮಣರು’ ಎಂದಲ್ಲ” ಎಂದಿದೆ ಆರ್‌ಎಸ್‌ಎಸ್‌.

ಇದನ್ನೂ ಓದಿರಿ: ‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಭಾಗವತ್ ಅವರ ಹೇಳಿಕೆಗಳು ಮತ್ತು ಆರ್‌ಎಸ್‌ಎಸ್‌ ನಂತರ ನೀಡಿದ ಸ್ಪಷ್ಟೀಕರಣಕ್ಕೆ ಪ್ರತಿಕ್ರಿಯಿಸಿದ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ್, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದು ಕೇಳಿದ್ದಾರೆ.

ವಿವಾದಾತ್ಮಕ ಹಾಗೂ ದ್ವೇಷ ಭಾಷಣಗಳಿಗೆ ಹೆಸರಾದ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ಮತ್ತು ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ದಾಸ್ ಅವರು ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶವಿರೋಧಿ ಶಕ್ತಿಗಳು ಹಿಂದೂಗಳ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪಿತೂರಿ ನಡೆಸುತ್ತವೆ. ಆದರೆ ಕೆಲವು ಹಿಂದೂಗಳು ಅವರ ಪಿತೂರಿಯನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿಕೆಗಳನ್ನು ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...