Homeಮುಖಪುಟಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

ಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

- Advertisement -
- Advertisement -

ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ ಬಳಿಕ, ಹಿಂದೂ ಧಾರ್ಮಿಕ ಮುಖಂಡರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿ, ಬ್ರಾಹ್ಮಣರ ಮೇಲರಿಮೆಯನ್ನು ಪ್ರದರ್ಶಿಸುತ್ತಿದ್ದಾರೆ.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, “ಜಾತಿ ವಿಭಜನೆಯ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದರು.

ಸಂತ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿ ಭಾಗವತ್ ಭಾಷಣ ಮಾಡಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂಬುದು ಆರ್‌ಎಸ್‌ಎಸ್‌ ನೀಡಿದ ಸಮರ್ಥನೆ.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದು, ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದಾರೆ ನಿಶ್ಚಲಾನಂದ ಸರಸ್ವತಿ.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸನಾತನ ಸಮಾಜದ ರಚನೆಯ ಅನುಪಸ್ಥಿತಿಯಲ್ಲಿ, ಯುಎಸ್ ಮತ್ತು ಫ್ರಾನ್ಸ್‌ನಂತಹ ಪಾಶ್ಚಿಮಾತ್ಯ ದೇಶಗಳಲ್ಲಿ “ಪರ್ಯಾಯ ಜಾತಿ ಶ್ರೇಣಿಯನ್ನು ಸೃಷ್ಟಿಸುವ ಅಗತ್ಯವಿದೆ” ಎಂದು ಕರೆ ನೀಡಿದ್ದಾರೆ.

ಭಾಗವತ್ ಅವರ ಹೇಳಿಕೆಗಳ ವಿರುದ್ಧ ಟೀಕೆಗಳು ವ್ಯಕ್ತವಾದ ಬಳಿಕ, ಆರ್‌ಎಸ್‌ಎಸ್ ಸ್ಪಷ್ಟೀಕರಣ ನೀಡಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಮುಂದಾಯಿತು. “ಭಾಗವತ್ ಅವರ ಮಾತುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆಯೇ ಹೊರತು, ‘ಬ್ರಾಹ್ಮಣರು’ ಎಂದಲ್ಲ” ಎಂದಿದೆ ಆರ್‌ಎಸ್‌ಎಸ್‌.

ಇದನ್ನೂ ಓದಿರಿ: ‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಭಾಗವತ್ ಅವರ ಹೇಳಿಕೆಗಳು ಮತ್ತು ಆರ್‌ಎಸ್‌ಎಸ್‌ ನಂತರ ನೀಡಿದ ಸ್ಪಷ್ಟೀಕರಣಕ್ಕೆ ಪ್ರತಿಕ್ರಿಯಿಸಿದ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ್, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದು ಕೇಳಿದ್ದಾರೆ.

ವಿವಾದಾತ್ಮಕ ಹಾಗೂ ದ್ವೇಷ ಭಾಷಣಗಳಿಗೆ ಹೆಸರಾದ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ಮತ್ತು ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ದಾಸ್ ಅವರು ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶವಿರೋಧಿ ಶಕ್ತಿಗಳು ಹಿಂದೂಗಳ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪಿತೂರಿ ನಡೆಸುತ್ತವೆ. ಆದರೆ ಕೆಲವು ಹಿಂದೂಗಳು ಅವರ ಪಿತೂರಿಯನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿಕೆಗಳನ್ನು ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...